ವಿದ್ಯಾರ್ಥಿಗಳಿಗೆ ನಗದು ಬಹುಮಾನ-ಸ್ಮರಣಿಕೆ-ಪ್ರಮಾಣ ಪತ್ರ
Team Udayavani, Dec 20, 2021, 3:13 PM IST
ಬೀದರ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಾಧನೆ ಮಾಡಿದ ನಗರದ ಗುರುನಾನಕ ದೇವ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಸ್ಮರಣಿಕೆ ಮತ್ತು ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ಕಾಲೇಜಿನ ಗುರುನಾನಕ್ ಭವನದಲ್ಲಿ ನಡೆದ ಇಂಜಿನಿಯರಿಂಗ್ ಪ್ರಥಮ ವರ್ಷದ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಈ ವೇಳೆ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಮಾತನಾಡಿ, ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಮಾತ್ರ ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ನಗದು ಬಹುಮಾನ ನೀಡಲಾಗುತ್ತಿದೆ. ಇದನ್ನು ಮುಂದುವರಿಸಿಕೊಂಡು ಹೋಗಲಾಗುವುದು ಎಂದರು.
ಜಿಎನ್ ಡಿಇಸಿ ಪ್ರಾಂಶುಪಾಲ ಡಾ| ರವೀಂದ್ರ ಎಕಲಾರಕರ್ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಲೇಜಿನಲ್ಲಿ ನೀಡುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು. ವಿವಿಧ ಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ