ಸೈನಿಕರ ತ್ಯಾಗ ಸ್ಮರಣೀಯ: ಕುಂಟೋಜಿಶ್ರೀ


Team Udayavani, Dec 21, 2021, 2:12 PM IST

ಸೈನಿಕರ ತ್ಯಾಗ ಸ್ಮರಣೀಯ: ಕುಂಟೋಜಿಶ್ರೀ

ಮುದ್ದೇಬಿಹಾಳ: ನಮ್ಮ ಸೈನಿಕರನ್ನು, ದೇಶಕ್ಕಾಗಿ ಸೇವೆ ಸಲ್ಲಿಸಿ ಬಂದ ನಿವೃತ್ತ ಸೈನಿಕರನ್ನು ಸತ್ಕಾರ ಮಾಡುವುದು, ರಕ್ಷಣೆ ಮಾಡುವುದು ಮಠಾಧೀಶರ ಕರ್ತವ್ಯ. ಪಾಕಿಸ್ತಾನ ಯುದ್ಧದ ಸವಿ ನೆನಪಿನಲ್ಲಿ ದೇಶದೆಲ್ಲೆಡೆ ವಿಜಯ್‌ ದಿವಸ್‌ಆಚರಿಸುತ್ತಿರುವ ಸಂಭ್ರಮದ ನಡುವೆಇಂಥ ಕಾರ್ಯ ದೇಶಭಕ್ತರಿಗೆ ಪ್ರೇರಕ ಶಕ್ತಿಯಾಗಬಹುದಾಗಿದೆ ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ| ಚನ್ನವೀರ ದೇವರು ಹೇಳಿದರು.

ಮುದೂರ ಗ್ರಾಮದಲ್ಲಿ ವಾಸವಾಗಿರುವಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡು ಮಡಿದ ಯೋಧ ಮಲ್ಲಪ್ಪನ ಪತ್ನಿ ಶಿವಗಂಗವ್ವ ಮಾದರ,ಸೇನೆಯಿಂದ ನಿವೃತ್ತರಾದ ಮುದ್ದೇಬಿಹಾಳ ಪಟ್ಟಣದಲ್ಲಿ ವಾಸವಾಗಿರುವ ಎಸ್‌ಬಿಐಬ್ಯಾಂಕ್‌ನ ನಿವೃತ್ತ ಅಧಿಕಾರಿ ಎಸ್‌.ಆರ್‌.ಕುಲಕರ್ಣಿ ಮತ್ತು ಎಸ್‌.ಎಸ್‌.ಹಿರೇಮಠ ಅವರನ್ನು ಶ್ರೀಮಠದ ವತಿಯಿಂದ ಸತ್ಕರಿಸಿ ಮಾತನಾಡಿದ ಅವರು, ಸೈನಿಕರ ತ್ಯಾಗ ಸ್ಮರಣೀಯ ಎಂದರು.

ಪತಿಯೊಂದಿಗೆ ಕೇವಲ 8 ತಿಂಗಳು ಸಂಸಾರ ನಡೆಸಿ, ಆತ ವೀರಮರಣವನ್ನಪ್ಪಿದ ಮೇಲೆ ಕಳೆದ 50 ವರ್ಷಗಳಿಂದ ಪತಿಯ ಸ್ಮರಣೆಯಲ್ಲೇ ಜೀವಿಸುತ್ತಿರುವಶಿವಗಂಗಮ್ಮಸೈನಿಕರಪತ್ನಿಯರಿಗೆ ಮಾದರಿಯಾಗಿದ್ದಾರೆ. ಸರ್ಕಾರದಿಂದ ಬರುವ ಅತ್ಯಲ್ಪ ಮಾಸಾಶನದಲ್ಲೇ ಜೀವನ ನಡೆಸುತ್ತಿರುವ ಇವರಂಥ ಅನೇಕ ವಿಧವೆಯರನ್ನು ಸರ್ಕಾರ ಗುರುತಿಸಿ ಈಗ ದೊರೆಯುವ ಸೌಲಭ್ಯಗಳನ್ನು ನೀಡಿ ಅವರ ಸೇವೆಯನ್ನು ಎತ್ತಿ ಹಿಡಿಯುವ ಅವಶ್ಯಕತೆ ಇದೆ ಎಂದರು. ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖಂಡರೂ ಆಗಿರುವ ಪತ್ರಕರ್ತ ಪುಂಡಲೀಕ ಮುರಾಳ ಮಾತನಾಡಿ, ಡಾ| ಚನ್ನವೀರ ದೇವರು ವಿನೂತನ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

ಒಬ್ಬ ಮಠಾಧೀಶರಾಗಿ ಮಾಜಿ ಸೈನಿಕರ ಮನೆಗೇ ಹೋಗಿ ಅವರನ್ನು ಸತ್ಕರಿಸಿ ನಿಮ್ಮ ಜೊತೆ ಶ್ರೀಮಠ ಸದಾಕಾಲ ಇರುತ್ತದೆ ಎಂದು ಆಶೀರ್ವದಿಸಿ ಅವರಿಗೆ ಧೈರ್ಯ ತುಂಬಿರುವುದು ಶ್ಲಾಘನೀಯ. ಶ್ರೀಮಠದ ಈ ಸಮಾಜಮುಖೀ ಕಾರ್ಯಕ್ಕೆ ನಮ್ಮಂಥವರು ಸದಾ ಬೆನ್ನೆಲುಬಾಗಿ ನಿಲ್ಲುತ್ತೇವೆ ಎಂದರು.

ಮಾಜಿ ಸೈನಿಕರ ಸಂಘದ ಅಧ್ಯಕ್ಷ ಆರ್‌ .ಐ.ಹಿರೇಮಠ ಮಾತನಾಡಿ, ಡಾ| ಚನ್ನವೀರ ದೇವರು ಅತ್ಯಂತ ಸ್ತುತ್ಯರ್ಹ ಕಾರ್ಯ ಮಾಡಿದ್ದಾರೆ. ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡ ಸೈನಿಕರ ಮನೆಗೆ ತೆರಳಿ ಅವರಿಗೆ ಸತ್ಕರಿಸಿದ್ದು ಇಡಿ ಸೈನ್ಯವಲಯಕ್ಕೆ ಸಂದ ಗೌರವವಾಗಿದೆ. ಇದೊಂದು ಅದ್ಭುತವಾದ ಕಾರ್ಯಕ್ರಮವಾಗಿದ್ದು ಎಂದಿಗೂ ಮರೆಯಲಾಗದಂಥದ್ದು. ಮಾಜಿ ಸೈನಿಕರ ಸಂಘವು ಸದಾ ಶ್ರೀಮಠದ ಜೊತೆಗಿದೆ ಎಂದರು.

ಸನ್ಮಾನಿತರ ಪರವಾಗಿ ಮಾತನಾಡಿದ ಎಸ್‌. ಆರ್‌.ಕುಲಕರ್ಣಿ, ನಮ್ಮಕುಲಕರ್ಣಿ ಮನೆತನಕ್ಕೂಕುಂಟೋಜಿ ಬಸವಣ್ಣನಿಗೂ ಅವಿನಾಭಾವಸಂಬಂಧ ಇದೆ. ಬಿದರಕುಂದಿ ಕುಲಕರ್ಣಿಯವರಮನೆಗೆ 16ನೇ ಶತಮಾನದಿಂದಲೂ ಕುಂಟೋಜಿ ಬಸವಣ್ಣ ಆರಾಧ್ಯದೈವವಾಗಿದ್ದಾರೆ. ನಮ್ಮ ಪೂರ್ವಜರೆಲ್ಲರೂ ಕುಂಟೋಜಿ ಬಸವಣ್ಣನಿಗೆನಡೆದುಕೊಳ್ಳುತ್ತಿದ್ದರು. ನಮ್ಮ ಮನೆಯ ದೇವರ ಕೋಣೆಯಲ್ಲೂ ಕುಂಟೋಜಿ ಬಸವಣ್ಣ ಇದ್ದಾನೆ. ನಮ್ಮ ಆರಾಧ್ಯದೈವದ ಸ್ಥಾನದಿಂದ ಬಂದುನಮ್ಮನ್ನು ಸತ್ಕರಿಸಿರುವ ಡಾ| ಚನ್ನವೀರ ದೇವರು 15-20 ವರ್ಷಗಳಿಂದ ಸದಾ ನಮ್ಮ ಹೃದಯದಲ್ಲಿ ಕುಳಿತು ನಮ್ಮನ್ನು ಕಾಪಾಡುತ್ತಿದ್ದಾರೆ ಎಂದರು.

ಎಸ್‌.ಆರ್‌.ಕುಲಕರ್ಣಿ ಮತ್ತು ಎಸ್‌.ಎಸ್‌ .ಹಿರೇಮಠರನ್ನು ದಂಪತಿ ಸಮೇತ, ಮುದೂರಿನ ಶಿವಗಂಗಮ್ಮ ಅವರಿಗೆ ಫಲಪುಷ್ಪ ನೀಡಿ ಗೌರವಿಸಲಾಯಿತು. ಶ್ರೀಮಠದ ಭಕ್ತರು, ಡಾ| ಚನ್ನವೀರ ದೇವರ ಅನುಯಾಯಿಗಳು, ಪುರಸಭೆ ಮಾಜಿ ಸದಸ್ಯ ಸತೀಶ ಕುಲಕರ್ಣಿ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.