ಮಾಸಿಕ ವೇತನದಂತೆ ಕೃಷಿ ಆದಾಯ ಸಾಧ್ಯ

ವ್ಯಕ್ತಿಯ ಸಂಸ್ಕಾರ ಕುಟುಂಬದಿಂದ ಬಂದರೂ ಸ್ವಂತ ವ್ಯಕ್ತಿತ್ವವೇ ಬೇರೆಯಾಗುತ್ತದೆ.

Team Udayavani, Dec 21, 2021, 6:04 PM IST

ಮಾಸಿಕ ವೇತನದಂತೆ ಕೃಷಿ ಆದಾಯ ಸಾಧ್ಯ

ಕಲಬುರಗಿ: ಭೂಮಿಯನ್ನು ನಂಬಿ ಕೃಷಿ ಮಾಡಿದರೆ ಮಾಸಿಕ ವೇತನ ಬರುವಂತೆ ರೈತರು ಕೂಡ ಆದಾಯ ಗಳಿಸಲು ಸಾಧ್ಯವಿದ್ದು, ಅದಕ್ಕಾಗಿ ರೈತರು ಕಾಲಕ್ಕೆ ತಕ್ಕಂತೆ ಬೆಳೆಗಳನ್ನು ಬೆಳೆಯುವುದನ್ನು ರೂಢಿಸಿಕೊಳ್ಳಬೇಕೆಂದು ಕೃಷಿ ಸಾಧಕಿ ಕವಿತಾ ಮಿಶ್ರಾ ಸಲಹೆ ನೀಡಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ವಿದ್ಯಾ ಸಂಸ್ಥೆ ಮತ್ತು ಭಾರತ ವಿಕಾಸ ಸಂಗಮ ಸಹಯೋಗದಲ್ಲಿ ನಡೆದ “ಸೃಜನ ಶಕ್ತಿ ಸಂಗಮ-8’ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿಕ ಕೋಟಿಗಳ ಲೆಕ್ಕದಲ್ಲಿ ಮಾತನಾಡಲು ಸಾಧ್ಯವಿದೆ. ವರ್ಷಕ್ಕೆ ಒಂದೇ ಬೆಳೆ ಬೆಳೆಯದೇ ವೈವಿಧ್ಯಮಯ ಕೃಷಿ ಅಳವಡಿಸಿಕೊಳ್ಳಬೇಕು. ಆಯಾ ಕಾಲಗಳಿಗೆ ಅನುಗುಣವಾಗಿ ಬೆಳೆಯುವುದರಿಂದ ನಿತಂತರ ಆದಾಯ ಪಡೆಯಲು ಸಾಧ್ಯ. ಕೃಷಿ ಲಾಭದಾಯಕವಲ್ಲ ಎಂಬುವುದು ಸರಿಯಲ್ಲ. ನಮ್ಮ ಹೊಲದ ಕೊಳವೆ ಬಾವಿಯಲ್ಲಿ 1.5 ಇಂಚು ನೀರು ದೊರಕಿದರೂ, ಅದರ ಸದ್ಬಳಕೆ ಮಾಡಿಕೊಂಡು ಲಾಭ ಪಡೆದುಕೊಂಡಿದ್ದೇನೆ. ಸಾವಯವ ಕೃಷಿ, ದೇಸಿ ಗೋಸಾಕಣೆ ಮತ್ತು ಕುರಿ ಸಾಕಣೆ ಸೇರಿ ಸಮಗ್ರ ಕೃಷಿ ಮಾಡಿದರೆ ರೈತ ಜೀವನದಲ್ಲಿ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಎಂದರು.

ಕೃಷಿ ವಿಜ್ಞಾನಿ ಎಸ್‌.ಎ.ಪಾಟೀಲ ಮಾತನಾಡಿ, ಕೃಷಿಯೇ ಎಲ್ಲ ಸಂಸ್ಕೃತಿಗಳ ತಾಯಿ. ವೈದ್ಯ, ಇಂಜಿನಿಯರ್‌, ವಿಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಿಗಿಂತ ಕೃಷಿ ಕ್ಷೇತ್ರ ಮೇಲಾಗಿದೆ. ಕೃಷಿಯಲ್ಲೂ ಹತ್ತು-ಹಲವು ಅವಕಾಶಗಳಿವೆ. ಅವುಗಳನ್ನು ಅರಿತು ಆ ನಿಟ್ಟಿನಲ್ಲಿ ಸಾಗಬೇಕೆಂದು ಕರೆ ನೀಡಿದರು.

ಭಾರತ ವಿಕಾಸ ಸಂಗಮ ಸಂಯೋಜಕಿ ಅಸ್ತಾ ಭಾರದ್ವಾಜ್‌ ಮಾತನಾಡಿ, ಯುವಕರು ಸ್ವಯಂ ಮಾದರಿಗಳನ್ನುಸೃಷ್ಟಿಸಬೇಕು. ಯುವಕರು ಬಳಕೆಗೆ ಯೋಗ್ಯವಲ್ಲ (ಯೂಸ್‌ಲೇಸ್‌) ಎನ್ನಲಾಗುತ್ತದೆ. ಆದರೆ ಅವರನ್ನು ಬಳಕೆ ಮಾಡುವುದೇ ಕಡಿಮೆ (ವಿ ಯೂಸ್ಡ್ ಲೇಸ್‌) ಮಾಡಲಾಗುತ್ತಿದೆ. ಆದ್ದರಿಂದ ಅವರಿಗೆ ಹೆಚ್ಚಿನ ಅವಕಾಶ ನೀಡಿ ಹೊಸ ಮಾದರಿಗಳ ಸೃಷ್ಟಿಗೆ ಪ್ರೇರಣೆ ನೀಡಬೇಕಿದೆ ಎಂದರು.

ವ್ಯಕ್ತಿಯ ಸಂಸ್ಕಾರ ಕುಟುಂಬದಿಂದ ಬಂದರೂ ಸ್ವಂತ ವ್ಯಕ್ತಿತ್ವವೇ ಬೇರೆಯಾಗುತ್ತದೆ. ಆದ್ದರಿಂದ ನಾವು ಬದಲಾಗಬೇಕು. ಯಾರನ್ನೂ ಅಂಧಾನುಕರಣೆ ಮಾಡದೆ ಧನಾತ್ಮಕ ಅಲೋಚನೆಯೊಂದಿಗೆ ಜೀವನ ಸಾಗಿಸಬೇಕು. ಮತ್ತೂಬ್ಬರ ಅಭಿಪ್ರಾಯದ ಬಗ್ಗೆ ಯೋಚಿಸುವುದೇ ಅತಿದೊಡ್ಡ ರೋಗ. ಆದ್ದರಿಂದ ವಿಭಿನ್ನ ಆಲೋಚನೆಯಿಂದ ಮಾತ್ರ ಯಶಸ್ವಿ ಸಾಧ್ಯ. ಧನಾತ್ಮಕ ಚಿಂತನೆಗಳು ಜೀವನಕ್ಕೆ ಪ್ರೇರಣೆ ನೀಡುತ್ತವೆ ಎಂದು ಹೇಳಿದರು.

ಭಾರತ ವಿಕಾಸ ಸಂಗಮ ಸಂಸ್ಥಾಪಕರಾದ ಖ್ಯಾತ ಚಿಂತಕ ಕೆ.ಎನ್‌. ಗೋವಿಂದಾಚಾರ್ಯ ಮಾತನಾಡಿದರು. ಗುವಿವಿ ಕುಲಪತಿ ಪ್ರೊ| ದಯಾನಂದ ಅಗಸರ, ಪ್ರಮುಖರಾದ ಮಾಧವರೆಡ್ಡಿ ಹೈದರಾಬಾದ್‌, ವೇಣುಗೋಪಾಲ ರೆಡ್ಡಿ, ಅಶೋಕ ಟಂಗಸಾಲೆ, ಕೆ.ಜಿ.ಮುರಳಿ, ಚಂದ್ರಶೇಖರ ಧವಳಗಿ, ಸುರೇಶ ಅಗ್ನಿಹೋತ್ರಿ ಇದ್ದರು.

ಅಭಿವೃದ್ದಿ ಹೆಸರಲ್ಲಿ ಪ್ರಕೃತಿಗೆ ಹಾನಿಯನ್ನುಂಟು ಮಾಡುವ ಕ್ರಮಗಳ ತಡೆಗೆ ಗಂಭೀರವಾಗಿ ಆಲೋಚನೆ ಮಾಡುವುದು ಅಗತ್ಯವಿದೆ. ಇದಕ್ಕಾಗಿ ನಮಗೆ ತಕ್ಷಣಕ್ಕೆ “ಯೂ-ಟರ್ನ್’ ತೆಗೆದುಕೊಳ್ಳಲು ಆಗದಿದ್ದರೂ, “ಲಾಂಗ್‌-ಟರ್ನ್’ ತೆಗೆದುಕೊಳ್ಳುವ ಅನಿವಾರ್ಯತೆ ಇದೆ.
ಕೆ.ಎನ್‌.ಗೋವಿಂದಾಚಾರ್ಯ, ಸಂಸ್ಥಾಪಕ, ಭಾರತ ವಿಕಾಸ ಸಂಗಮ

ಜೀವನದಲ್ಲಿ ಏನನ್ನು ಮಾಡಬೇಕು ಎನ್ನುವುದಕ್ಕಿಂತ ಏನನ್ನು ಮಾಡಬಾರದು ಎಂಬುದು ಅರಿಯಬೇಕು. ಮಹಾಭಾರತ ಏನು ಮಾಡಬಾರದು, ರಾಮಾಯಣ ಏನು ಮಾಡಬೇಕು ಎಂಬ ಸಂದೇಶ ನೀಡುತ್ತದೆ. ಆದ್ದರಿಂದ ಎಲ್ಲವನ್ನು ಓದಿ, ತಿಳಿದು ನಮ್ಮ ಸ್ವತಃ ಆಲೋಚನೆಗೆ ಹೊಂದಿಸಿಕೊಳ್ಳಬೇಕು.
ಅಸ್ತಾ ಭಾರದ್ವಾಜ್‌, ಸಂಯೋಜಕಿ ಭಾರತ ವಿಕಾಸ ಸಂಗಮ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.