![renukaacharya](https://www.udayavani.com/wp-content/uploads/2024/06/renukaacharya-1-415x276.jpg)
ಕಾನೂನು ಬಾಹಿರವಾಗಿದ್ದಲ್ಲಿ ಸೂಕ್ತ ಕ್ರಮ: ಸಿಎಂ
Team Udayavani, Dec 22, 2021, 4:50 AM IST
![ಕಾನೂನು ಬಾಹಿರವಾಗಿದ್ದಲ್ಲಿ ಸೂಕ್ತ ಕ್ರಮ: ಸಿಎಂ](https://www.udayavani.com/wp-content/uploads/2021/12/cm-13-620x427.jpg)
ಬೆಳಗಾವಿ: ಬ್ಯಾಡ್ಮಿಂಟನ್ ಅಸೋಸಿಯೇಷನ್ ಬೈಲಾ ಉಲ್ಲಂಘನೆಯಾಗಿದ್ದರೆ ಪರಿಶೀಲಿಸಿ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಪ್ರಶ್ನೋತ್ತರ ವೇಳೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರದಿಂದ ಲೀಸ್ ಮೂಲಕ ನೀಡಿರುವ ಭೂಮಿ ಹಾಗೂ ಬೈಲಾ ವಿರುದ್ಧ ಹೋಗಿರುವ ಬಗ್ಗೆ ನೋಟಿಸ್ ನೀಡಲಾಗಿದೆ. ಇದಕ್ಕೆ ಸಂಬಂಧಿಸಿ ಕೇಂದ್ರ ಸರಕಾರದ ರಾಷ್ಟ್ರೀಯ ಬ್ಯಾಡ್ಮಿಂಟನ್ ಅಸೋಸಿಯೇಷನ್ನ ಕೆಲವು ನಿಯಮಗಳಿವೆ.
ಮತದಾನವನ್ನು ಕೆಲವರಿಗೆ ಮಾತ್ರ ನೀಡಿ, ಜಿಲ್ಲೆಗಳಲ್ಲಿ ಸಾವಿರಾರು ಅಜೀವ ಸದಸ್ಯರಿದ್ದರೂ ಅವರಿಗೆ ಮತದಾನ ನೀಡದೇ ಇರುವ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
ಇದನ್ನೂ ಓದಿ:40 ನಗರಗಳಲ್ಲಿ ಬರಲಿದೆ ವಿಶೇಷ ಹೈಬ್ರಿಡ್ ಶಾಲೆ; ದಕ್ಷಿಣ ಏಷ್ಯಾದಲ್ಲಿಯೇ ಇಂಥ ಪ್ರಯತ್ನ ಮೊದಲು
ಶಾಸಕ ರಘುಪತಿ ಭಟ್ ಮಾತನಾಡಿ, ಸರಕಾರ ಶೀಘ್ರವಾಗಿ ಸಮಸ್ಯೆ ಸರಿಪಡಿಸಬೇಕು ಹಾಗೂ ಕೇಂದ್ರ ಸರಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಬೇಕು. ವಿವಿಧ ಮೂಲಗಳಿಂದ 2 ಕೋಟಿಯಷ್ಟು ವಾರ್ಷಿಕ ಅನುದಾನ ಬರುತ್ತದೆ. ಅದರ ಸದ್ಬಳಕೆ ಆಗಬೇಕು ಮತ್ತು ಗ್ರಾಮೀಣ ಭಾಗದಲ್ಲಿ ಇದಕ್ಕೆ ಆದ್ಯತೆ ಸಿಗಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
![renukaacharya](https://www.udayavani.com/wp-content/uploads/2024/06/renukaacharya-1-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ](https://www.udayavani.com/wp-content/uploads/2024/06/BIRDS-150x80.jpg)
Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ
![renukaacharya](https://www.udayavani.com/wp-content/uploads/2024/06/renukaacharya-1-150x100.jpg)
BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ
![Rabkavi Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ](https://www.udayavani.com/wp-content/uploads/2024/06/MODI-PM-1-150x75.jpg)
Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ
![ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್](https://www.udayavani.com/wp-content/uploads/2024/06/ravindranath-150x83.jpg)
Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್
![Ekam web series produced by Rakshit is coming to the audience; Full details are here](https://www.udayavani.com/wp-content/uploads/2024/06/rakshit-150x83.jpg)
ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.