ಹಿರಿ-ಕಿರಿಯರ ಸಂಗಮದಲ್ಲಿ ಡವ್‌ ಮಾಸ್ಟರ್


Team Udayavani, Dec 22, 2021, 11:42 AM IST

dove master

ಬಣ್ಣಬಣ್ಣದ ಮಾತುಗಳನ್ನಾಡುವವರನ್ನ, ತುಂಬ ನಾಟಕೀಯವಾಗಿ ಬದುಕು ವವರನ್ನ “ಡವ್‌ ಮಾಸ್ಟರ್‌’ ಅಂಥ ಅಡ್ಡ ಹೆಸರಿನಲ್ಲಿ ಕರೆಯುವುದನ್ನು ನೀವು ಕೇಳಿರು ತ್ತೀರಿ. ಈಗ ಇದೇ “ಡವ್‌ ಮಾಸ್ಟರ್‌’ ಎಂಬ ಹೆಸರಿನಲ್ಲೇ ಸಿನಿಮಾವೊಂದು ಶುರು ವಾಗಿದೆ.

ಇಂಥದ್ದೇ ಬಣ್ಣದ ಮಾತು ಗಳನ್ನಾಡುತ್ತ, ಒಳಗೊಂದು ಥರ – ಹೊರ ಗೊಂದು ಥರ ಇರುವಂಥ ಕಥೆ ಮತ್ತು ಪಾತ್ರಗಳ ಸುತ್ತ ಸಿನಿಮಾ ನಡೆಯುವು ದರಿಂದ, ಚಿತ್ರತಂಡ ಕೂಡ ತಮ್ಮ ಸಿನಿಮಾಕ್ಕೆ “ಡವ್‌ ಮಾಸ್ಟರ್‌’ ಅಂಥ ಹೆಸರಿಟ್ಟಿದೆ. ಕನ್ನಡ ಚಿತ್ರರಂಗದ ವಿವಿಧ ವಿಭಾಗ ಗಳಲ್ಲಿ ಸುಮಾರು ಹತ್ತು ವರ್ಷಗಳಿಂದ ಕೆಲಸ ಮಾಡಿದ ಅನುಭವವಿರುವ ಯುವ ಪ್ರತಿಭೆ ಆರ್ಯ, “ಡವ್‌ ಮಾಸ್ಟರ್‌’ ಚಿತ್ರಕ್ಕೆ ಮೊದಲ ಬಾರಿಗೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ.

ಇದನ್ನೂ ಓದಿ:- ಗೋವಾ ಜನರು ಒಳ್ಳೆಯವರು, ಆದರೆ ಇಲ್ಲಿನ ರಾಜಕಾರಣಿಗಳು ಕೆಟ್ಟವರು: ಅರವಿಂದ್ ಕೇಜ್ರಿವಾಲ್

ಇನ್ನೊಂದು ವಿಶೇಷವೆಂದರೆ, “ಡವ್‌ ಮಾಸ್ಟರ್‌’ ಚಿತ್ರದಲ್ಲಿ ರಾಕಿ ಎಂಬ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಳ್ಳುತ್ತಿದೆ. ರಾಕಿ ಬರ್ತ್‌ಡೇ ಪ್ರಯುಕ್ತ, ಇತ್ತೀಚೆಗೆ “ಡವ್‌ ಮಾಸ್ಟರ್‌’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಪತ್ರಕರ್ತರು ಮತ್ತು ಮಾಧ್ಯಮಗಳನ್ನು ಆಹ್ವಾನಿಸಿದ್ದ ಚಿತ್ರತಂಡ ಚಿತ್ರದ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿತು.

ಮೊದಲಿಗೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಆರ್ಯ, “ಮನುಷ್ಯ ಮತ್ತು ನಾಯಿಯ ನಡುವಿನ ಬಾಂಧವ್ಯದ ಕಥೆ ಈ ಸಿನಿಮಾದಲ್ಲಿದೆ. ತುಂಬ ಪ್ರೀತಿಯಿಂದ ಸಾಕಿದ ನಾಯಿ ವ್ಯಕ್ತಿಯೊಬ್ಬನ ಜೀವನದಲ್ಲಿ ದೂರವಾಗಬೇಕಾದ ಸಂದರ್ಭ ಬಂದಾಗ ಏನೇನು ನಡೆಯುತ್ತದೆ ಎಂಬ ಸರಳವಾದ, ಸಣ್ಣ ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ.

ಈಗಾಗಲೇ ಮೂರ್‍ನಾಲ್ಕು ದಿನಗಳ ಕಾಲ ಶೂಟಿಂಗ್‌ ನಡೆದಿದ್ದು, ಸಿನಿಮಾ ಚೆನ್ನಾಗಿ ಮೂಡಿಬರುತ್ತಿದೆ’ ಎಂದು ಮಾಹಿತಿ ನೀಡಿದರು. ಚಿತ್ರದಲ್ಲಿ ಮತ್ತೂಂದು ಪ್ರಮುಖ ಪಾತ್ರ ದಲ್ಲಿ ತಬಲ ನಾಣಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದಲ್ಲಿ ಅವರದ್ದು ಮದುವೆಯಾಗಲು ಹುಡುಗಿಯನ್ನು ಹುಡುಕಲು ಪರದಾಡುತ್ತಿರುವ ವರನ ಪಾತ್ರವಂತೆ.

ತಮ್ಮ ಪಾತ್ರದ ಬಗ್ಗೆ ಮಾತನಾಡಿದ ತಬಲ ನಾಣಿ, “ಇದೊದು ಔಟ್‌ ಆ್ಯಂಡ್‌ ಔಟ್‌ ಕಾಮಿಡಿ ಚಿತ್ರ. ನನ್ನದು ತುಂಬ ವಯಸ್ಸಾದರೂ, ಮದುವೆಯಾಗದ ಮದುವೆ ಗಂಡಿನ ಪಾತ್ರ. ಸಿನಿಮಾದ ಕಥೆಯ ಎಳೆ ತುಂಬ ಚೆನ್ನಾಗಿದೆ. ಪ್ರೇಕ್ಷಕರಿಗೂ ಸಿನಿಮಾ ಇಷ್ಟವಾಗುತ್ತದೆ’ ಎಂಬ ಭರವಸೆಯ ಮಾತುಗಳನ್ನಾಡಿದರು. “ಡವ್‌ ಮಾಸ್ಟರ್‌’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಬಹುಭಾಷಾ ನಟಿ ಶಕೀಲಾ ಮತ್ತೂಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

“ಬಹಳ ವರ್ಷಗಳ ನಂತರ ಕನ್ನಡ ಸಿನಿಮಾ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ತುಂಬ ಚೆನ್ನಾಗಿರು ವಂಥ ಗೃಹಿಣಿ ಪಾತ್ರ ಇದರಲ್ಲಿದೆ. ಹೊಸ ತಂಡದ ಜೊತೆ ಕೆಲಸಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ’ ಎನ್ನುವುದು ಚಿತ್ರದ ಬಗ್ಗೆ ಶಕೀಲಾ ಮಾತು. ಉಳಿದಂತೆ “ಡವ್‌ ಮಾಸ್ಟರ್‌’ ಚಿತ್ರದಲ್ಲಿ ಕಾಕ್ರೊಚ್‌ ಸುಧಿ, ಗೋವಿಂದೇ ಗೌಡ (ಜಿ.ಜಿ), ಸುಂದರ್‌, ಗಿರೀಶ್‌ ಜತ್ತಿ, ನವೀನ್‌ ಪಡೀಲ್, ಆ್ಯಂಟನಿ ಕಮಲ್, ಸಪ್ನಾ, ಮಿತ್ರ, ಕುರಿ ಪ್ರತಾಪ್‌ ಮೊದಲಾ ದವರು ಕಾಣಿಸಿಕೊಳ್ಳುತ್ತಿದ್ದು, ಎಲ್ಲರೂ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ‌

ಈ ಹಿಂದೆ “ನಮ್ಮೂರ ಹೈಕ್ಳು’ ಸಿನಿಮಾಕ್ಕೆ ಸಂಗೀತ ಮಾಡಿದ್ದ ಶಕೀಲ್‌ ಅಹಮದ್‌ ಈ ಚಿತ್ರದ ಮೂರು ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಹಾಡುಗಳಿಗೆ ನಾಗಿ ನೃತ್ಯ ಸಂಯೋಜನೆಯಿದೆ. ಚಿತ್ರಕ್ಕೆ ಕಿರಣ್‌ ಕುಮಾರ್‌ ಛಾಯಾಗ್ರಹಣ ಮಾಡುತ್ತಿದ್ದಾರೆ. “ರೈನ್‌ ಬೋ’ ಬ್ಯಾನರ್‌ನಲ್ಲಿ ರೋಶನ್‌ “ಡವ್‌ ಮಾಸ್ಟರ್‌’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.