ತನ್ನ ಮಗನನ್ನು ಸರಕಾರಿ ಶಾಲೆಗೆ ಸೇರಿಸಿ ಮಾದರಿಯಾದ ಪ್ರಧಾನ ಸಿವಿಲ್ ನ್ಯಾಯಾಧೀಶರು
Team Udayavani, Dec 22, 2021, 9:12 PM IST
ಕುಷ್ಟಗಿ: ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ತಳವಾರ ಅವರ ಮಗ ಶ್ರೀನಿವಾಸ ನನ್ನು ಇಲ್ಲಿನ ಇಂದಿರಾ ನಗರದ ಅಂಗನವಾಡಿ ಕೇಂದ್ರಕ್ಕೆ ಹೆಸರು ದಾಖಲಿಸುವ ಮೂಲಕ ಮಾದರಿಯಾಗಿದ್ದಾರೆ.
ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಸಡ್ಡೆ ವ್ಯಕ್ತಪಡಿಸುವ ಇಂದಿನ ದಿನಮಾನಗಳಲ್ಲಿ ಜನಪ್ರತಿನಿಧಿಗಳು, ಸರ್ಕಾರಿ ಸೇವೆಯಲ್ಲಿರುವವರೇ ಎಷ್ಟೇ ಹಣ ಖರ್ಚಾದರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಸರ್ವೆ ಸಾಮಾನ್ಯ ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಕಾಲೇಜು ಶಿಕ್ಷಣದವರೆಗೂ ಖಾಸಗಿ ಶಾಲೆಯಲ್ಲಾದರೆ ಉತ್ತಮ ಶಿಕ್ಷಣ ಸಿಗಲಿದೆ ಎನ್ನುವ ಭ್ರಮೆಯಲ್ಲಿರುವವರಿಗೆ ಕುಷ್ಟಗಿಯ ನ್ಯಾಯಾಧೀಶರ ನಡೆ ನೈತಿಕತೆ ಪ್ರಶ್ನಿಸುವಂತಿದೆ.
ಪಟ್ಟಣದ 4ನೇ ವಾರ್ಡನ 15ನೇ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ತಳವಾರ ಅವರ ಮಗನಿಗೆ ಶ್ರೀನಿವಾಸ 3ವರ್ಷ 10 ತಿಂಗಳಾಗಿದ್ದರಿಂದ ಹೆಸರು ದಾಖಲಿಸಿದರು. ಬುಧವಾರ ಬೆಳಗ್ಗೆ ನ್ಯಾಯಾಧಿಶರ ಮಗನನ್ನು ಅಂಗನವಾಡಿ ಕಾರ್ಯಕರ್ತೆ ಸುನೀತಾ ಅಬ್ಬಿಗೇರಿ, ಸಹಾಯಕಿ ದುರಗಮ್ಮ ಆರತಿ ಬೆಳಗಿ ಸ್ವಾಗತಿಸಿಕೊಳ್ಳಲಾಯಿತು.
ನ್ಯಾಯಾಧೀಶರ ಮಗ ನಮ್ಮ ಅಂಗನವಾಡಿ ಕೇಂದ್ರ ಸೇರಿಸಿರುವುದು ನಮಗೆಲ್ಲಾ ಹೆಮ್ಮೆಯ ವಿಷಯ. ನ್ಯಾಯಾಧೀಶರ ಈ ನಡೆಯಿಂದ ನಮ್ಮ ಅಂಗನವಾಡಿ ಕೇಂದ್ರಗಳಿಗೆ ವಿಶ್ವಾಸಾರ್ಹತೆ ಹೆಚ್ಚಿದ್ದು ಸಂತಸವಾಗಿದೆ ಎಂದು ಸಿಡಿಪಿಓ ಅಮರೇಶ ಹಾವಿನಾಳ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್
Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ
Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !
Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ