“ವಿಮಾ ಜಿಲ್ಲೆ’ಯಾಗಿ ಘೋಷಿಸಲು ಸಹಕಾರ ಕೊಡಿ

ಬ್ಯಾಂಕಿಂಗ್‌ ಸಲಹಾ ಸಮಿತಿ ಸಭೆಯಲ್ಲಿ ಜಿ.ಪಂ. ಸಿಇಒ ಡಾ| ಕುಮಾರ್‌ ಸಲಹೆ

Team Udayavani, Dec 23, 2021, 5:30 AM IST

“ವಿಮಾ ಜಿಲ್ಲೆ’ಯಾಗಿ ಘೋಷಿಸಲು ಸಹಕಾರ ಕೊಡಿ

ಮಂಗಳೂರು: ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಪೂರ್ಣವಾಗಿ ಅನುಷ್ಠಾನಗೊಳಿಸುವ ಮೂಲಕ ದಕ್ಷಿಣ ಕನ್ನಡವನ್ನು ಶೇಕಡಾ ನೂರರಷ್ಟು “ವಿಮಾ ಜಿಲ್ಲೆ’ ಎಂದು ಘೋಷಿಸಲು ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಬ್ಯಾಂಕ್‌ಗಳು ಕಾರ್ಯೋನ್ಮುಖವಾಗ ಬೇಕು ಎಂದು ದ.ಕ. ಜಿ. ಪಂ. ಸಿಇಒ ಡಾ| ಕುಮಾರ್‌ ಸೂಚನೆ ನೀಡಿದ್ದಾರೆ.

ಜಿ. ಪಂ.ನ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಲೀಡ್‌ ಬ್ಯಾಂಕ್‌ ವತಿಯಿಂದ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳಾದ ಪಿಎಂಜೆಜೆಬಿವೈ (ಪ್ರಧಾನ ಮಂತ್ರಿ ಜೀವನ್‌ ಜ್ಯೋತಿ ಬಿಮಾ ಯೋಜನೆ), ಪಿಎಂಎಸ್‌ಬಿವೈ (ಪ್ರಧಾನ ಮಂತ್ರಿ ಸುರಕ್ಷಾÒ ಬಿಮಾ ಯೋಜನೆ) ಹಾಗೂ ಎಪಿವೈ (ಅಟಲ್‌ ಪಿಂಚಣಿ ಯೋಜನೆ) ಗಳಿಗೆ ಕೆಲವು ಬ್ಯಾಂಕ್‌ಗಳು ಆದ್ಯತೆ ನೀಡಿಲ್ಲ. ಈ ಯೋಜನೆಗಳ ಬಗ್ಗೆ ಮಾಹಿತಿ ಯನ್ನು ಜನತೆಗೆ ತಲುಪಿಸದಿದ್ದರೆ, ಜನತೆ ಬ್ಯಾಂಕಿನಿಂದ ದೂರವಾಗಬಹುದು.

ಆರ್‌ಬಿಐ ಕೂಡ ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಶೇ.100 ಗುರಿ ಸಾಧಿಸುವಂತೆ ಸೂಚನೆ ನೀಡಿದೆ. ಬ್ಯಾಂಕ್‌ ಮೆನೇಜರ್‌ಗಳು ಈ ಬಗ್ಗೆ ಗಮನ ಹರಿಸಿ ಗ್ರಾಮೀಣ ಜನತೆಗೆ ಈ ಯೋಜನೆಗಳು ತಲುಪುವಂತೆ ಮಾಡಬೇಕೆಂದರು.

ಜನರನ್ನು ಅಲೆದಾಡಿಸ ಬೇಡಿ:
ಕ್ಲೇಮ್‌ಗಳ ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿದ್ದು, ಬ್ಯಾಂಕ್‌ಗಳು ಈ ಬಗ್ಗೆ ಎಚ್ಚರ ವಹಿಸಬೇಕು. ವಿನಾಃ ಕಾರಣ ಜನತೆಯನ್ನು ಸತಾಯಿಸದೆ, ಗ್ರಾಹಕ ಸ್ನೇಹಿಯಾಗಿ ಬ್ಯಾಂಕ್‌ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗ ಮಹಿಳೆಯರಿಗೆ ಕನಿಷ್ಠ 10 ಲಕ್ಷ ರೂ.ಗಳಿಂದ ಗರಿಷ್ಠ 1 ಕೋಟಿ ರೂ. ವರೆಗೆ ಉದ್ಯೋಗಕ್ಕೆ ನೀಡುವ ಸಾಲ ಯೋಜನೆಗೆ ಯಾವುದೇ ಅಡ್ಡಿಪಡಿಸದೆ ತ್ವರಿತವಾಗಿ ಸಾಲ ನೀಡಬೇಕು. ಇದನ್ನು ಸ್ಟಾಂಡ್‌ ಅಪ್‌ ಇಂಡಿಯಾ ಯೋಜನೆಯ ವ್ಯಾಪ್ತಿಗೆ ಒಳಪಡಿಸಬೇಕೆಂದರು.

ಎಂಎಸ್‌ಎಂಇ (ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮ)ಯೋಜನೆಯಡಿ ಗರಿಷ್ಠ 2 ಕೋಟಿ ರೂ. ವರೆಗೆ ಸಾಲ ಸೌಲಭ್ಯಕ್ಕೆ ಅವಕಾಶ ಇದೆ. ಗ್ರಾಹಕರಿಗೆ ಈ ಯೋಜನೆ ಯಲ್ಲಿ ಸಾಲ ನೀಡುವಲ್ಲಿ ಒತ್ತಡ ಹಾಕುವಂತಿಲ್ಲ ಎಂದರು.

ಇದನ್ನೂ ಓದಿ:ಆನ್‌ಲೈನ್‌ ಗೇಮ್‌ ನಿಷೇಧ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬ್ಯಾಂಕ್‌ ಸೌಲಭ್ಯಗಳ ಮಾಹಿತಿ ಕೊಡಿ
ಕೃಷಿ, ಶಿಕ್ಷಣ ಹಾಗೂ ಗೃಹ ನಿರ್ಮಾಣ ವಿಭಾಗಗಳಲ್ಲಿ ಜಿಲ್ಲೆಯ ಬ್ಯಾಂಕ್‌ಗಳು ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಈ ವಿಭಾಗಗಳಲ್ಲಿ ಸಾಲ ನೀಡಿಕೆ ಪ್ರಮಾಣ ಅತ್ಯಂತ ಕಡಿಮೆಯಾಗಿದೆ. ಕೃಷಿಯಲ್ಲಿ ಶೇ.35.27, ಶಿಕ್ಷಣದಲ್ಲಿ ಶೇ.35.40 ಹಾಗೂ ಗೃಹ ಸಾಲದಲ್ಲಿ ಶೇ.22.34 ಮಾತ್ರ ನಿರ್ವಹಣೆ ಇದೆ. ಕನಿಷ್ಠ ಗುರಿಯನ್ನೂ ಸಾಧಿಸದ ಬ್ಯಾಂಕ್‌ಗಳ
ಅಧಿಕಾರಿಗಳು, ಗ್ರಾಮೀಣ ಭಾಗಗಳಿಗೆ ತೆರಳಿ ಬ್ಯಾಂಕಿಂಗ್‌ ಸೌಲಭ್ಯಗಳ ಬಗ್ಗೆ ಜನತೆಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕೆಂದರು.

ಆರ್‌ಬಿಐ ಎಜಿಎಂ ಟಿ.ಆರ್‌. ಆಚಾರ್ಯ, ನಬಾರ್ಡ್‌ ಅಭಿವೃದ್ಧಿ ಅಧಿಕಾರಿ ಸಂಗೀತ ಕಾರ್ತ್‌, ಕೆನರಾ ಬ್ಯಾಂಕ್‌ ಜಿಎಂ ಶ್ರೀಕಾಂತ್‌, ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಪ್ರವೀಣ್‌ ಉಪಸ್ಥಿತರಿದ್ದರು.

88,100.12 ಕೋಟಿ ರೂ. ವ್ಯವಹಾರ
ಸೆಪ್ಟಂಬರ್‌ ಅಂತ್ಯದವರೆಗಿನ ತ್ತೈಮಾಸಿಕ ಅವಧಿಯಲ್ಲಿ ಜಿಲ್ಲೆಯ ಬ್ಯಾಂಕ್‌ಗಳ ಒಟ್ಟು ವ್ಯವಹಾರ 88,100.12 ಕೋಟಿ ರೂ. ಆಗಿದ್ದು, ವರ್ಷದಿಂದ ವರ್ಷಕ್ಕೆ ಶೇ. 9.32ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ಲೀಡ್‌ ಬ್ಯಾಂಕ್‌ ಮೆನೇಜರ್‌ ಪ್ರವೀಣ್‌ ತಿಳಿಸಿದರು.

ಜಿಲ್ಲೆಯ ಬ್ಯಾಂಕ್‌ಗಳ ಒಟ್ಟು ಠೇವಣಿ 54,600.93 ಕೋಟಿ ರೂ. (ವಾರ್ಷಿಕ ಶೇ. 7.07ರಷ್ಟು ವೃದ್ಧಿ) ಮತ್ತು ಒಟ್ಟು ಸಾಲ 33,499.10 ಕೋಟಿ ರೂ. (ಶೇ.13.18 ವೃದ್ಧಿ) ಇತ್ತು. ಸಾಲದ ಅನುಪಾತ ಶೇ.61.35 ಆಗಿದ್ದು, ಹಿಂದಿನ ತ್ತೈಮಾಸಿಕಕ್ಕೆ ಹೋಲಿಸಿದರೆ ಶೇ.3.31ರಷ್ಟು ವೃದ್ಧಿಸಿದೆ. 2021-22ರ ಮೊದಲ ಅರ್ಧ ವರ್ಷದಲ್ಲಿ ಜಿಲ್ಲೆಯಲ್ಲಿ ಒಟ್ಟು 11,352.75 ಕೋಟಿ ರೂ. ಸಾಲ ವಿತರಿಸಲಾಗಿದ್ದು, ವಾರ್ಷಿಕ ಗುರಿ 19,335 ಕೋಟಿ ರೂ. ಆಗಿದ್ದು, ಶೇ.58.72 ಪ್ರಗತಿ ಸಾಧಿಸಿದಂತಾಗಿದೆ.

ಸಭೆಗೆ ಗೈರು: ಖಾತೆ ವಾಪಸ್‌ ಎಚ್ಚರಿಕೆ
ಪ್ರತಿ ಬಾರಿಯೂ ಲೀಡ್‌ ಬ್ಯಾಂಕ್‌ ಸಭೆಗೆ ಗೈರಾಗುತ್ತಿರುವ ಐಸಿಐಸಿಐ ಬ್ಯಾಂಕ್‌ ಅಧಿಕಾರಿಗೆ ನೋಟಿಸ್‌ ನೀಡುವಂತೆ ತಿಳಿಸಿದ ಜಿ.ಪಂ. ಸಿಇಒ ಡಾ| ಕುಮಾರ್‌, ಇದೇ ಪರಿಪಾಠ ಮುಂದುವರಿದರೆ ಬ್ಯಾಂಕಿನಲ್ಲಿ ಇರುವ ಸರಕಾರದ ಖಾತೆಯನ್ನು ಹಿಂಪಡೆಯುವಂತೆ ಎಲ್ಲ ಇಲಾಖೆಗಳಿಗೆ ಸೂಚಿಸುವುದಾಗಿ ಎಚ್ಚರಿಕೆ ನೀಡಿದರು.

ಐಸಿಐಸಿಐ ಬ್ಯಾಂಕಿನ ಅಧಿಕಾರಿಗಳು ಯಾವುದೇ ಸಭೆಗಳಿಗೆ ಹಾಜರಾಗುತ್ತಿಲ್ಲ. ಜಿಲ್ಲಾಡಳಿತದ ಸಭೆಗಳಿಗೂ ಬರುತ್ತಿಲ್ಲ ಎಂದು ಲೀಡ್‌ ಬ್ಯಾಂಕ್‌ ಮೆನೇಜರ್‌ ಪ್ರವೀಣ್‌ ತಿಳಿಸಿದಾಗ,ಅಸಮಾಧಾನಗೊಂಡ ಸಿಇಒ ಡಾ| ಕುಮಾರ್‌,ವಿನಾಃ ಕಾರಣ ಗೈರಾಗುತ್ತಿರುವುದು ಹಾಗೂ ಆರ್‌ಬಿಐ ನಿಯಮ ಉಲ್ಲಂ ಸುತ್ತಿರುವ ಬ್ಯಾಂಕ್‌ಗಳಿಗೆ ನೋಟಿಸ್‌ ಜಾರಿಗೊಳಿಸಿ ಎಂದು ಸೂಚಿಸಿದರು.

ಟಾಪ್ ನ್ಯೂಸ್

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

HDD LARGE

Warning!; ತಾಳ್ಮೆ ಪರೀಕ್ಷಿಸಬೇಡ..ಎಲ್ಲಿದ್ದರೂ ಬಾ: ಪ್ರಜ್ವಲ್ ಗೆ ದೇವೇಗೌಡರ ವಾರ್ನಿಂಗ್

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Team India ಮುಖ್ಯ ಕೋಚ್ ಆಫರ್ ತಿರಸ್ಕರಿಸಿದ ರಿಕಿ ಪಾಂಟಿಂಗ್

Team India ಮುಖ್ಯ ಕೋಚ್ ಆಫರ್ ತಿರಸ್ಕರಿಸಿದ ರಿಕಿ ಪಾಂಟಿಂಗ್

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

9-exams

Exams: ಪರೀಕ್ಷೆ ಸವಾಲುಗಳು ಮಾತ್ರ ಬದುಕು ಅಲ್ಲ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4 ವರ್ಷಗಳಿಂದ ಜಾಗೃತಿ: ಮಂಗಳೂರು ಧರ್ಮಪ್ರಾಂತದಿಂದ ಜಲಬಂಧನ್‌!

4 ವರ್ಷಗಳಿಂದ ಜಾಗೃತಿ: ಮಂಗಳೂರು ಧರ್ಮಪ್ರಾಂತದಿಂದ ಜಲಬಂಧನ್‌!

ನಾಳೆ “ಪತ್ತನಾಜೆ’: ಉತ್ಸವ, ಯಕ್ಷಗಾನಕ್ಕೆ “ಮಂಗಳ’!

ನಾಳೆ “ಪತ್ತನಾಜೆ’: ಉತ್ಸವ, ಯಕ್ಷಗಾನಕ್ಕೆ “ಮಂಗಳ’!

Panambur ಫಿನಾಯಿಲ್‌ ಸೇವಿಸಿ ಇಬ್ಬರು ಕಾರ್ಮಿಕರ ಆತ್ಮಹತ್ಯೆ ಯತ್ನ

Panambur ಫಿನಾಯಿಲ್‌ ಸೇವಿಸಿ ಇಬ್ಬರು ಕಾರ್ಮಿಕರ ಆತ್ಮಹತ್ಯೆ ಯತ್ನ

Mangaluru ವಿಮಾನ ದುರಂತಕ್ಕೆ 14 ವರ್ಷ; ದ.ಕ. ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

Mangaluru ವಿಮಾನ ದುರಂತಕ್ಕೆ 14 ವರ್ಷ; ದ.ಕ. ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಕರಾವಳಿಯಾದ್ಯಂತ ಮುಂದುವರಿದ ಮಳೆ

Rain ಕರಾವಳಿಯಾದ್ಯಂತ ಮುಂದುವರಿದ ಮಳೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4 ವರ್ಷಗಳಿಂದ ಜಾಗೃತಿ: ಮಂಗಳೂರು ಧರ್ಮಪ್ರಾಂತದಿಂದ ಜಲಬಂಧನ್‌!

4 ವರ್ಷಗಳಿಂದ ಜಾಗೃತಿ: ಮಂಗಳೂರು ಧರ್ಮಪ್ರಾಂತದಿಂದ ಜಲಬಂಧನ್‌!

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Kannada Cinema; ಮೂಲ ನಂಬಿಕೆ-  ಮೂಢನಂಬಿಕೆಯ ಸುತ್ತ ‘ಕೌಮುದಿ’

Kannada Cinema; ಮೂಲ ನಂಬಿಕೆ-  ಮೂಢನಂಬಿಕೆಯ ಸುತ್ತ ‘ಕೌಮುದಿ’

SMVITM; Crop Disease Web Application Development

SMVITM; ಬೆಳೆ ರೋಗದ ವೆಬ್‌ ಅಪ್ಲಿಕೇಶನ್‌ ಅಭಿವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.