ಜೆಡಿಎಸ್‌ನಿಂದ ಜೀವನದಿ ಉಳಿಸುವ ಸಂಕಲ್ಪ ಯಾತ್ರೆ

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಘೋಷಣೆ ; ಸಂಕ್ರಾಂತಿ ಬಳಿಕ ಅರಮನೆ ಮೈದಾನದಲ್ಲಿ ಬೃಹತ್‌ ಸಮಾವೇಶ

Team Udayavani, Dec 23, 2021, 7:10 AM IST

ಜೆಡಿಎಸ್‌ನಿಂದ ಜೀವನದಿ ಉಳಿಸುವ ಸಂಕಲ್ಪ ಯಾತ್ರೆ

ಬೆಳಗಾವಿ: ಸಂಕ್ರಾಂತಿಯ ಬಳಿಕ ಜೆಡಿಎಸ್‌ ರಾಜ್ಯದ ಎಲ್ಲ ಜೀವನದಿಗಳನ್ನೂ ಉಳಿಸುವ ಸಂಕಲ್ಪ ಯಾತ್ರೆ ಕೈಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಮಂಡಲ ಅಧಿವೇಶನದ ನಡುವೆ “ಉದಯವಾಣಿ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು, “ರಾಜ್ಯಾದ್ಯಂತ ನಡೆ ಯುವಯಾತ್ರೆಯಲ್ಲಿ ಪ್ರತೀ ನದಿಯಿಂದ ಕಲಶಗಳಲ್ಲಿ ನೀರು ತಂದು ಪೂಜೆ ಮಾಡಿ ಅರಮನೆ ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಸಲಾಗುವುದು. ರಾಜ್ಯದ ಎಲ್ಲ ನೀರಾವರಿ ಯೋಜನೆಗಳ ವಿಚಾರದಲ್ಲಿ ನಮ್ಮ ಬದ್ಧತೆ ಏನು ಎಂಬುದನ್ನೂ ಅಂದು ಜನರ ಮುಂದಿಡಲಾಗುವುದು’ ಎಂದಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನ ಆಗ್ರಹಿಸಿ ಕಾಂಗ್ರೆಸ್‌ ಪಾದಯಾತ್ರೆಗೆ ಮುಂದಾಗಿರು ವಾಗಲೇ ಎಚ್‌ಡಿಕೆ ಅವರ ಈ ಮಾತುಗಳು ಕುತೂಹಲ ಮೂಡಿಸಿವೆ.

ಸಂದರ್ಶನದ ಸಾರಾಂಶ
ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ಗೆ ನಿರೀಕ್ಷಿತ ಫಲಿತಾಂಶ ಯಾಕೆ ಬರಲಿಲ್ಲ?
ನಾವು ಶಕ್ತಿ ಮೀರಿ ಶ್ರಮ ಹಾಕಿದ್ದೆವು. ಆದರೆ ಕೊನೇ ದಿನಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ದುಡ್ಡಿನ ಮುಂದೆ ನಮ್ಮ ಪಕ್ಷದ ಅಭ್ಯರ್ಥಿಗಳು ಸೋಲಬೇಕಾಯಿತು. ಸೋಲಿ ನಿಂದ ಜೆಡಿಎಸ್‌ ಕುಸಿದಿಲ್ಲ.

ಜೆಡಿಎಸ್‌ ಭದ್ರಕೋಟೆಯಲ್ಲೇ ಸೋಲು ಹಿನ್ನಡೆಯಂತಾಗಲಿಲ್ಲವೇ?
ಸೋಲು-ಗೆಲುವು ಸಹಜ. ಈಗಿನ ಸೋಲು ತಾತ್ಕಾಲಿಕ ಹಿನ್ನಡೆ. 2023ರ ವಿಧಾನಸಭೆ ಚುನಾ ವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ಪಕ್ಷದ ಶಕ್ತಿ ಮುಂದಿನ ಚುನಾವಣೆಯಲ್ಲಿ ಗೊತ್ತಾಗಲಿದೆ.

ಜೆಡಿಎಸ್‌-ಬಿಜೆಪಿ ಜತೆ ಒಳ ಒಪ್ಪಂದ ಮಾಡಿಕೊಂಡಿತ್ತಾ?
ಅದರ ಅನಿವಾರ್ಯ ನಮಗಿಲ್ಲ. ಕಾಂಗ್ರೆಸ್‌ ನಾಯಕರು ಪದೇ ಪದೆ ಆ ರೀತಿ ಆರೋಪ ಮಾಡಿ ಸುಳ್ಳನ್ನು ಸತ್ಯವಾಗಿಸುವ ಪ್ರಯತ್ನ ಮಾಡಿದರು. ಅವರಿಗೆ ಅದೊಂದು ಅಂಟು ರೋಗ. ಯಾವ ಪಕ್ಷದ ಜತೆಯೂ ಮೈತ್ರಿ, ಒಪ್ಪಂದ ಇಲ್ಲ. ಸ್ವಂತ ಬಲದಿಂದ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನನ್ನದೇ ಆದ ಕಾರ್ಯಕ್ರಮಗಳೊಂದಿಗೆ ಜನರ ಮುಂದೆ ಹೋಗುತ್ತೇನೆ.

ಪರಿಷತ್‌ ಚುನಾವಣೆ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾ?
ಆ ರೀತಿ ಅಂದುಕೊಂಡರೆ ಭ್ರಮೆಯಷ್ಟೇ, ಯಾವ ದಿಕ್ಸೂಚಿಯೂ ಅಲ್ಲ. 2016ರ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ 15 ಸ್ಥಾನ ಗೆದ್ದಿತ್ತು, 2018ರ ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನಕ್ಕೆ ಇಳಿದಿತ್ತು. ನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ನಡೆಯುವ ಚುನಾವಣೆಯೇ ಬೇರೆ. ಮತದಾರರಿಂದ ನಡೆಯುವ ಚುನಾವಣೆಯೇ ಬೇರೆ.

 ಜೆಡಿಎಸ್‌ ಮುಳುಗುತ್ತಿರುವ ಹಡುಗು ಎಂದು ಸಿದ್ದರಾಮಯ್ಯ ಹೇಳಿದ್ದಾರಲ್ಲಾ?
ಸಿದ್ದರಾಮಯ್ಯ ಅವರಿಗೆ ತಲೆ ನಿಲ್ಲುತ್ತಿಲ್ಲ. ಅವರ ಮಾತುಗಳು ಅಹಂಕಾರದ ಪರಮಾವಧಿ. ಇವೆಲ್ಲದಕ್ಕೂ ರಾಜ್ಯದ ಜನರೇ ಪಾಠ ಕಲಿಸಲಿದ್ದಾರೆ. ಸಿದ್ದ ರಾಮಯ್ಯಗೆ ಜೆಡಿಎಸ್‌ ಎಂದರೆ ಕನಸಿನಲ್ಲೂ ಬೆಚ್ಚಿ ಬೀಳುವಂತಾಗಿದೆ. ಮೈಸೂರಿನಲ್ಲಿ ಏನೇನೋ ಪ್ರಯತ್ನ ಪಟ್ಟರೂ ನಮ್ಮ ಅಭ್ಯರ್ಥಿಯನ್ನು ಸೋಲಿಸಲು ಆಗಲಿಲ್ಲ. ಯಾರೋ ಕೆಲವು ನಾಯಕರನ್ನು ಸೆಳೆದರೆ ಪಕ್ಷ ವನ್ನು ಮುಳುಗಿಸಬಹುದು ಎಂಬ ಭ್ರಮೆಯಲ್ಲಿದ್ದಾರೆ. ವಿಧಾನಸಭೆ ಚುನಾವಣೆ ಬರಲಿ ಅವರೇ ಮುಳುಗಿ ಹೋಗ್ತಾರೆ.

ಮಂಡ್ಯ, ತುಮಕೂರು ಸೋಲು ಪ್ರಸ್ತಾವಿಸಿದ್ದಾರಲ್ಲಾ ?
ಪರಿಷತ್‌ ಚುನಾವಣೆಯಲ್ಲಿ ಎರಡು ಕಡೆ ಜೆಡಿಎಸ್‌ ಸೋಲು ಅನುಭವಿಸಿದೆ ಎಂದು ಕೆಲವರು ವಿಕೃತ ಆನಂದ ಪಡುತ್ತಿದ್ದಾರೆ. ಅವರ ಸಾಚಾತನ ಏನು ಎಂಬುದನ್ನು ಬಯಲು ಮಾಡುತ್ತೇನೆ.

ಜೆಡಿಎಸ್‌ನಲ್ಲಿ ಪಕ್ಷ ಬಿಡುವವರ ಸಂಖ್ಯೆ ಹೆಚ್ಚಾಗುತ್ತಿದೆಯಲ್ಲಾ?
ನಮ್ಮಲ್ಲಿ ಅಧಿಕಾರ ಪಡೆದು ಬೇರೆ ಪಕ್ಷಕ್ಕೆ ಹೋಗುವುದು ಮೊದಲಿ ನಿಂದಲೂ ನಡೆದಿದೆ. ಇದರಲ್ಲಿ ಅಚ್ಚರಿ ಇಲ್ಲ. ಆದರೆ ನೂರಾರು ನಾಯಕ ರನ್ನು ಬೆಳೆ ಸುವ ಶಕ್ತಿ ಜೆಡಿಎಸ್‌ಗಿದೆ. ಕೆಲವು ನಾಯಕರು ಬಿಟ್ಟು ಹೋಗಿರ ಬಹುದು; ಲಕ್ಷಾಂತರ ಕಾರ್ಯ ಕರ್ತರು, ಮುಖಂಡರು ನಮ್ಮ ಜತೆಗಿದ್ದಾರೆ. ಪಕ್ಷ ಮತ್ತೆ ಖಂಡಿತ ಪುಟಿದೇಳಲಿದೆ.

ಇತ್ತೀಚೆಗೆ ನೀವು ಹಾಗೂ ಯಡಿ ಯೂರಪ್ಪ ಹತ್ತಿರವಾಗುತ್ತಿದ್ದೀರಲ್ಲಾ ?
ಆ ರೀತಿ ಏನೂ ಇಲ್ಲ. ವೈಯಕ್ತಿಕ ಸ್ನೇಹ ಬೇರೆ, ರಾಜಕೀಯವೇ ಬೇರೆ.

 ಜೆಡಿಎಸ್‌ ಸಂಘಟನೆ ಹೇಗಿದೆ?
ತಳಮಟ್ಟದಲ್ಲಿ ಪಕ್ಷ ಸಂಘಟನೆ ಕಾರ್ಯ ಆರಂಭಿಸಲಾಗಿದೆ. ಇತ್ತೀಚೆಗೆ ಬಿಡದಿಯಲ್ಲಿ ನಡೆಸಿದ ಮೊದಲ ಹಂತದ ಕಾರ್ಯಾಗಾರ ಯಶಸ್ವಿಯಾಗಿದ್ದು ಎರಡನೇ ಹಂತ ಸದ್ಯದಲ್ಲೇ ಪ್ರಾರಂಭವಾಗಲಿದೆ. ಬೂತ್‌ ಮಟ್ಟದಲ್ಲಿ ಜೆಡಿಎಸ್‌ ಪಡೆ ರಚನೆ ಮಾಡಲಾಗುವುದು.

- ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಾಂಗ್ರೆಸ್ ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Vijayanagara: ದಶಕಗಳ ನಂತರ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Cannes 2024: Mysore’s Chidananda S Naik won the best short film award

Cannes 2024: ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದ ಮೈಸೂರಿನ ಚಿದಾನಂದ ಎಸ್ ನಾಯಕ್

Lok Sabha Election 2024: 6ನೇ ಹಂತದ ಪ್ರಚಾರ ಅಂತ್ಯ, 25ರಂದು 58 ಕ್ಷೇತ್ರಗಳಲ್ಲಿ ಚುನಾವಣೆ

Lok Sabha Election 2024: 6ನೇ ಹಂತದ ಪ್ರಚಾರ ಅಂತ್ಯ, 25ರಂದು 58 ಕ್ಷೇತ್ರಗಳಲ್ಲಿ ಚುನಾವಣೆ

ಪ್ರಹ್ಲಾದ ಜೋಶಿ

Bellary; ಆಂತರಿಕ ಬೇಗುದಿಯಿಂದ ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಾಂಗ್ರೆಸ್ ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Vijayanagara: ದಶಕಗಳ ನಂತರ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

ಪ್ರಹ್ಲಾದ ಜೋಶಿ

Bellary; ಆಂತರಿಕ ಬೇಗುದಿಯಿಂದ ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ: ಪ್ರಹ್ಲಾದ ಜೋಶಿ

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಾಂಗ್ರೆಸ್ ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Vijayanagara: ದಶಕಗಳ ನಂತರ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Cannes 2024: Mysore’s Chidananda S Naik won the best short film award

Cannes 2024: ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದ ಮೈಸೂರಿನ ಚಿದಾನಂದ ಎಸ್ ನಾಯಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.