ಯಡಿಯೂರಪ್ಪ ಕಿವಿಯಲ್ಲಿ ಹೂವಿಟ್ಟು ಹೋದರು: ಪ್ರಸನ್ನಾನಂದ ಶ್ರೀ ಕಿಡಿ
Team Udayavani, Dec 24, 2021, 3:16 PM IST
ವಾಡಿ: ರಾಜ್ಯದ ಪರಿಶಿಷ್ಟ ಪಂಗಡ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಉದ್ಯೋಗ ಸೌಲಭ್ಯಕ್ಕಾಗಿ ಮೀಸಲಾತಿ ಹೆಚ್ಚಿಸಬೇಕು ಎಂದು ಹಾವೇರಿ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಪೂಜ್ಯ ಶ್ರೀಪ್ರಸನ್ನಾನಂದ ಮಹಾಸ್ವಾಮಿ ಸರಕಾರವನ್ನು ಆಗ್ರಹಿಸಿದರು.
ಇದೇ ಫೆ.8 ಹಾಗೂ 9 ರಂದು ಹರಿಹರದ ರಾಜನಳ್ಳಿಯಲ್ಲಿ ನಡೆಯಲಿರುವ ಮಹರ್ಷಿ ವಾಲ್ಮೀಕಿ 4ನೇ ಜಾತ್ರಾಮಹೋತ್ಸವದ ಜಾಗೃತಿ ಸಭೆ ಉದ್ದೇಶಿಸಿ ಸ್ವಾಮೀಜಿ ಮಾತನಾಡಿದರು.
ಕಳೆದ 30 ವರ್ಷಗಳಿಂದ ಎಸ್ ಟಿ ಮಕ್ಕಳಿಗೆ ಮೀಸಲಾತಿಯಲ್ಲಿ ಅನ್ಯಾಯವಾಗುತ್ತಿದೆ. ನಿವೃತ್ತ ನ್ಯಾಯಮೂರ್ತಿ ಡಾ.ನಾಗಮೋನದಾಸ ಅವರ ವರದಿ ಬಂದ ತಕ್ಷಣವೇ ಮೀಸಲಾತಿ ಪರಮಾರ್ಶೆಗೆ ಕ್ರಮಕೈಗೊಳ್ಳಲಾಗುವುದು ಎಂದು ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ವಾಲ್ಮೀಕಿ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸದೆ ಕಿವಿಯಲ್ಲಿ ಹೂವಿಟ್ಟು ಹೋದರು ಎಂದು ಆಕ್ರೋಶ ವ್ಯಕ್ತಪಡಿಸಿ, ಇದರ ವಿರುದ್ಧ ಸಿಂಹದ ರೂಪದಲ್ಲಿ ಘರ್ಜಿಸಬೇಕಾದ ನಾಯಕ ಸಮಾಜ ಮೌನವಹಿಸಿದೆ ಎಂದರು.
ಸಮುದಾಯವನ್ನು ಎಚ್ಚರಿಸುವ ವೈಚಾರಿಕ ಜಾಗೃತಿ ಜಾತ್ರೆ ಏರ್ಪಡಿಸಲಾಗಿದೆ. ಜಾತ್ರೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದು ಮತ್ತು ನ್ಯಾ.ನಾಗಮೋಹನದಾಸ್ ಅವರ ವರದಿಯೂ ಸರಕಾರಕ್ಕೆ ಸಲ್ಲಿಕೆಯಾಗಿದೆ. ಈ ವರ್ಷದ ಜಾತ್ರೆಯಲ್ಲಿ ಮುಖ್ಯಮಂತ್ರಿಗಳು ನಾಯಕ ಜನಾಂಗಕ್ಕೆ ಉತ್ತಮ ಸಂದೇಶ ನೀಡುವ ನಿರೀಕ್ಷೆ ಹೊಂದಿದ್ದೇವೆ. ರಾಜ್ಯದ ಮೂಲೆ ಮೂಲೆಯಿಂದ ವಾಲ್ಮೀಕಿ ಸಮಾಜದ ಬಂಧುಗಳು ಜಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಇದನ್ನೂ ಓದಿ:ತಾವರಗೇರಾ: ಮತ ಯಂತ್ರಗಳ ಸಂಖ್ಯೆ ಬದಲಾಗಿವೆ ಎಂದು ಪ್ರತಿಭಟನೆ
ವಾಲ್ಮೀಕಿ ಸಮಾಜದ ಚಿತ್ತಾಪುರ ತಾಲೂಕು ಅಧ್ಯಕ್ಷ ಭೀಮರಾವ ದೊರೆ, ಶಹಾಬಾದ ತಾಲೂಕು ಅಧ್ಯಕ್ಷ ಜಗದೇವ ಸುಬೇದಾರ, ನಗರಾಧ್ಯಕ್ಷ ನಾಗೇಶ ಜಮಾದಾರ ಸೇರಿದಂತೆ ನೂರಾರು ಜನರು ಸಭೆಯಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಶ್ರೀಗಳು ಜಾತ್ರೆಯ ಪೋಸ್ಟರ್ ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ
Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್!: 7 ಮಂದಿ ಸೆರೆ
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ