ಸುಧಾರಿಸಿದೆ ಉ.ಪ್ರ.ಆಡಳಿತ: ಉತ್ತಮ ಆಡಳಿತ ಸೂಚ್ಯಂಕ 2021 ವರದಿಯಲ್ಲಿ ಉಲ್ಲೇಖ


Team Udayavani, Dec 26, 2021, 7:30 AM IST

ಸುಧಾರಿಸಿದೆ ಉ.ಪ್ರ.ಆಡಳಿತ: ಉತ್ತಮ ಆಡಳಿತ ಸೂಚ್ಯಂಕ 2021 ವರದಿಯಲ್ಲಿ ಉಲ್ಲೇಖ

ಹೊಸದಿಲ್ಲಿ: ಶೀಘ್ರದಲ್ಲಿಯೇ ವಿಧಾನಸಭೆ ಚುನಾ ವಣೆ ನಡೆಯಲಿರುವ ಉತ್ತರ ಪ್ರದೇಶ “ಉತ್ತಮ ಆಡಳಿತ ಸೂಚ್ಯಂಕ 2021’ಉತ್ತಮ ಸಾಧನೆ ಮಾಡಿದೆ. ಈ ಸೂಚ್ಯಂಕದಲ್ಲಿ ಗುಜರಾತ್‌ ಮೊದಲ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ ವಿಕಾಸ ಅಘಾಡಿ ಅಧಿಕಾರದಲ್ಲಿರುವ ಮಹಾರಾಷ್ಟ್ರ ದ್ವಿತೀಯ ಮತ್ತು ಗೋವಾ ತೃತೀಯ ಸ್ಥಾನದಲ್ಲಿದೆ.  ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೊಸದಿಲ್ಲಿಯಲ್ಲಿ ಶನಿವಾರ ಸೂಚ್ಯಂಕ ಬಿಡುಗಡೆಗೊಳಿಸಿದ್ದಾರೆ. ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು  “ಉತ್ತಮ ಆಡಳಿತ ದಿನ’ ಎಂದು ಆಚರಿಸಲಾಗುತ್ತಿದೆ. ಆ ಪ್ರಯುಕ್ತ ಈ ಸೂಚ್ಯಂಕ ಬಿಡುಗಡೆ ಮಾಡಲಾಗಿದೆ.

ದೇಶದ ಒಟ್ಟು 20 ರಾಜ್ಯಗಳು ಮತ್ತು ಕೇಂದ್ರಾ ಡಳಿತ ಪ್ರದೇಶಗಳು ಈ ಸೂಚ್ಯಂಕದಲ್ಲಿ ಭಾಗವಹಿ ಸಿದ್ದವು. ಒಟ್ಟು 58 ಸೂಚ್ಯಂಕಗಳಲ್ಲಿ ಒಟ್ಟಾರೆ ಅಂಕಗಳ ಆಧಾರದಲ್ಲಿ ಗುಜರಾತ್‌ ಮೊದಲ ಸ್ಥಾನದಲ್ಲಿದೆ. ಗಮನಾರ್ಹ ಅಂಶವೆಂದರೆ ಶೀಘ್ರದಲ್ಲಿಯೇ ಚುನಾ ವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಶೇ.8.9ರಷ್ಟು ಅಂಕಗಳ ಸುಧಾರಣೆ ಕಂಡುಬಂದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಶೇ.3.7ರಷ್ಟು ಅಂಕಗಳಲ್ಲಿ ಸುಧಾರಣೆ ಕಂಡು ಬಂದಿದೆ.

ದಿಲ್ಲಿಗೆ ಮೊದಲ ಸ್ಥಾನ: ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಿಲ್ಲಿ ಶೇ.14ರಷ್ಟು ಅಂಕ ಹೆಚ್ಚಿಸಿಕೊಂಡು ಮೊದಲ ಸ್ಥಾನದಲ್ಲಿದೆ. ಅದು ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಹೆಚ್ಚಿನ ಸಾಧನೆ ಮಾಡಿದೆ. ಈಶಾನ್ಯ ರಾಜ್ಯಗಳು ಮತ್ತು ಗುಡ್ಡಗಾಡು ರಾಜ್ಯಗಳ ವಿಭಾಗದಲ್ಲಿ ಮಿಜೋರಾಂ,   ಜಮ್ಮು ಮತ್ತು ಕಾಶ್ಮೀರ ಕ್ರಮ ವಾಗಿ ಶೇ.10.4. ಶೇ.3.7ರಷ್ಟು ಸಾಧನೆ ಮಾಡಿವೆ.

ಒಳ್ಳೆಯ ನಿರ್ಧಾರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜನರಿಗೆ ಒಳ್ಳೆಯದಾಗುವ ನಿರ್ಧಾರ ಗಳನ್ನೇ ಕೈಗೊಳ್ಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.  ಸೂಚ್ಯಂಕ ಬಿಡುಗಡೆ ಮಾಡಿ ಮಾತನಾಡಿದ ಅವರು ಹಿಂದಿನ ಸರಕಾರಗಳ ಅವಧಿಯಲ್ಲಿ ಕೆಲವೊಂದು ಬಾರಿ  ವೋಟ್‌ ಬ್ಯಾಂಕ್‌ ಅನ್ನು ಗಮನದಲ್ಲಿರಿಸಿಕೊಂಡು ಯೋಜನೆ-ನಿರ್ಧಾ   ರಗಳನ್ನು ಕೈಗೊಳ್ಳಲಾಗುತ್ತಿತ್ತು. ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಹಿತ ಗಮನದಲ್ಲಿರಿಸಿಕೊಂಡು ನಿರ್ಧಾರಗಳನ್ನು ಕೈಗೊಳ್ಳ  ಲಾಗು ತ್ತಿದೆ. ಇದೊಂದು ವ್ಯತ್ಯಾಸ ಗಮನಿಸಬೇಕಾಗಿದೆ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಈಗಿನ ಕೇಂದ್ರ ಸರಕಾರ ದೇಶವಾಸಿಗಳಿಗೆ ಮನೆ, ಶೌಚಾಲಯ, ಅಡುಗೆ ಅನಿಲ ಸಂಪರ್ಕ, ಕುಡಿಯುವ ನೀರು, ವೈದ್ಯಕೀಯ ವಿಮೆ ಸೇರಿದಂತೆ ಹಲವು ಸೌಲಭ್ಯ ಗಳನ್ನು ನೀಡಿದೆ. ಕೊರೊನಾ ಅವಧಿಯಲ್ಲಿ 80 ಕೋಟಿ ಮಂದಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕಕ್ಕೆ ಹೇಗೆ? :

ಕೈಗಾರಿಕೆ ಮತ್ತು ವಾಣಿಜ್ಯ ವಿಚಾರದಲ್ಲಿ ಕರ್ನಾಟಕಕ್ಕೆ 3 ನೇ ಸ್ಥಾನ,  ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ 5, ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ 7ನೇ ಸ್ಥಾನ, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ 7ನೇ ಸ್ಥಾನ, ಸಾರ್ವಜನಿಕ ಮೂಲ ಸೌಕರ್ಯ ಕ್ಷೇತ್ರದಲ್ಲಿ 8ನೇ ಸ್ಥಾನ, ಆರ್ಥಿಕ ವ್ಯವಹಾರಗಳ ನಿರ್ವಹಣೆ ಯಲ್ಲಿ 3ನೇ ಸ್ಥಾನ ಇದೆ.

ಯಾವ ಕ್ಷೇತ್ರಗಳು? :

ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳು, ವಾಣಿಜ್ಯ ಮತ್ತು ಕೈಗಾರಿಕೆ, ಮಾನವ ಸಂಪನ್ಮೂಲ ಅಭಿವೃದ್ಧಿ, ಸಾರ್ವಜನಿಕ ಆರೋಗ್ಯ, ಮೂಲ ಸೌಕರ್ಯ, ಸಾಮಾಜಿಕ ಕಲ್ಯಾಣ ಮತ್ತು ಅಭಿವೃದ್ಧಿ, ನ್ಯಾಯಾಂಗ ಮತ್ತು ಸಾರ್ವಜನಿಕ ಭದ್ರತೆ, ಪರಿಸರ, ಜನರನ್ನು ಕೇಂದ್ರೀಕರಿಸಿದ ಆಡಳಿತ ವ್ಯವಸ್ಥೆ.

3 ಕೋಟಿ ಅರ್ಜಿ, 6 ಕೋಟಿ ದೂರು ವಿಲೇವಾರಿ :

ಕೇಂದ್ರ ಸರಕಾರ ಡಿ.20ರಂದು ಶುರು ಮಾಡಿದ ಉತ್ತಮ ಆಡಳಿತದ ದಿನ ಪ್ರಯಕ್ತ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಶನಿವಾರದ ವರೆಗೆ 3 ಕೋಟಿ ಅರ್ಜಿಗಳು, 6 ಕೋಟಿ ದೂರುಗಳನ್ನು ವಿಲೇವಾರಿ ಮಾಡಿವೆ. ಗ್ರಾಮ ಮಟ್ಟದ ವರೆಗೆ ಆಡಳಿತ ವ್ಯವಸ್ಥೆ ತಲುಪುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂಥ ಅಭಿಯಾನ ಕೈಗೊಳ್ಳಲು ಸೂಚನೆ ನೀಡಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.