ಟ್ರೇಲರ್‌ ನಲ್ಲಿ “ಗಜಾನನ ಆ್ಯಂಡ್‌ ಗ್ಯಾಂಗ್‌” ಎಂಟ್ರಿ


Team Udayavani, Dec 27, 2021, 12:21 PM IST

ಟ್ರೇಲರ್‌ ನಲ್ಲಿ “ಗಜಾನನ ಆ್ಯಂಡ್‌ ಗ್ಯಾಂಗ್‌” ಎಂಟ್ರಿ

ಯುವನಟ ಶ್ರೀಮಹಾದೇವ್‌ ಹಾಗೂ ಅದಿತಿ ಪ್ರಭುದೇವ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಗಜಾನನ ಆ್ಯಂಡ್‌ ಗ್ಯಾಂಗ್‌’ ಚಿತ್ರದ ಮೊದಲ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ನಟಿ ಮೇಘನಾ ರಾಜ್‌, “ಗಜಾನನ ಆ್ಯಂಡ್‌ ಗ್ಯಾಂಗ್‌’ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

ಇದೇ ವೇಳೆ ಮಾತನಾಡಿದ ಮೇಘನಾ ರಾಜ್‌, “ಅದಿತಿ ಈಗಿನ ನನ್ನ ಫೇವರೇಟ್‌ ಹೀರೋಯಿನ್‌. ಈ ಹಿಂದೆ ಶ್ರೀ ಮಹದೇವ್‌ ಅವರ ಜೊತೆಗೆ “ಇರುವುದೆಲ್ಲವ ಬಿಟ್ಟು..’ ಸಿನಿಮಾದಲ್ಲಿ ಅಭಿನಯಿಸಿದ್ದೆ. ಆ ಸ್ನೇಹ ದಿಂದಾಗಿಯೇ ಈ ಸಿನಿಮಾದ ಟ್ರೇಲರ್‌ ಬಿಡುಗಡೆ ಮಾಡುವಂತಾಯಿತು. “ಗಜಾನನ ಆ್ಯಂಡ್‌ ಗ್ಯಾಂಗ್‌’ ಟ್ರೇಲರ್‌ ಅದ್ಭುತವಾಗಿ ಮೂಡಿ ಬಂದಿದೆ. ಎಲ್ಲ ಥರದ ಎಂಟರ್‌ಟೈನ್ಮೆಂಟ್‌ ಎಲಿಮೆಂಟ್ಸ್‌ ಸಿನಿಮಾದಲ್ಲಿರುವಂತೆ ಕಾಣುತ್ತಿದೆ. ಆದಷ್ಟು ಬೇಗ ಸಿನಿಮಾ ನೋಡಲು ನಾನು ಕಾತುರಳಾಗಿದ್ದೇನೆ’ ಎಂದರು.

ಇನ್ನು “ಗಜಾನನ ಆ್ಯಂಡ್‌ ಗ್ಯಾಂಗ್‌’ ಟೈಟಲೇ ಹೇಳುವಂತೆ, ಇದು ಔಟ್‌ ಆ್ಯಂಡ್‌ ಔಟ್‌ ಕಾಲೇಜ್‌ ಸ್ಟೋರಿ ಇರುವ ಯೂಥ್‌ ಫ‌ುಲ್‌ ಸಬೆಕ್ಟ್ ಸಿನಿಮಾ. ಹುಡುಗಾಟ, ತಂಟೆ, ತರಲೆ, ತಕರಾರು, ತಿಳಿ ಹಾಸ್ಯ, ಸೆಂಟಿಮೆಂಟ್‌ ಎಲ್ಲವೂ “ಗಜಾನನ ಆ್ಯಂಡ್‌ ಗ್ಯಾಂಗ್‌’ ನಲ್ಲಿದೆ. ಚಿತ್ರದಲ್ಲಿ ಶ್ರೀ ಮಹಾದೇವ್‌ ಡಬಲ್‌ ಶೇಡ್‌ನ‌ಲ್ಲಿ ಗಜ ಎಂಬ ಪಾತ್ರದಲ್ಲಿ ಕಾಣಿಸಿಕೊಂಡರೆ, ಅದಿತಿ ಪ್ರಭು ದೇವ ಮಿಡಲ್‌ ಕ್ಲಾಸ್‌ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಿಗ್‌ ಬಾಸ್‌ ಖ್ಯಾತಿಯ ರಘು ಗೌಡ, ಚೇತನ್‌ ದುರ್ಗ, ನಾಟ್ಯ ರಂಗ, ಅಶ್ವಿ‌ನ್‌ ಹಾಸನ್‌, ಶಮಂತ್‌ (ಬ್ರೋ ಗೌಡ) ಮೊದಲಾದವರು ಚಿತ್ರದ ಇತರ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ ಎನ್ನುವುದು ಚಿತ್ರತಂಡ ನೀಡಿರುವ ಮಾಹಿತಿ.

ಇದನ್ನೂ ಓದಿ:ಮೆಚ್ಚುವಂಥ ‘ರಚ್ಚು’ ಕಥೆ: ರಚಿತಾ-ಅಜೇಯ್‌ ಇಮೇಜ್‌ ಬದಲು..?

ಈ ಹಿಂದೆ “ನಮ್‌ ಗಣಿ ಬಿ.ಕಾಂ ಪಾಸ್‌’ ಸಿನಿಮಾ ಮೂಲಕ ನಾಯಕ ಮತ್ತು ನಿರ್ದೇಶಕನಾಗಿ ಚಿತ್ರರಂಗಕ್ಕೆ ಪರಿಚಯವಾಗಿದ್ದ ಅಭಿಷೇಕ್‌ ಶೆಟ್ಟಿ “ಗಜಾನನ ಆ್ಯಂಡ್‌ ಗ್ಯಾಂಗ್‌’ ಸಿನಿಮಾಕ್ಕೆ ಆಕ್ಷನ್‌-ಕಟ್‌ ಹೇಳಿದ್ದಾರೆ. ಜೊತೆಗೆ ಚಿತ್ರದ ಪ್ರಮುಖ ಪಾತ್ರವೊಂದರಲ್ಲೂ ಕಾಣಿಸಿಕೊಂಡಿದ್ದಾರೆ.

“ಬೃಂದಾವನ್‌ ಎಂಟರ್‌ಪ್ರೈಸಸ್‌’ ಬ್ಯಾನರ್‌ನಲ್ಲಿ ಯು. ಎಸ್‌ ನಾಗೇಶ್‌ ಕುಮಾರ್‌ ನಿರ್ಮಾಣದ “ಗಜಾನನ ಆ್ಯಂಡ್‌ ಗ್ಯಾಂಗ್‌’ ಚಿತ್ರಕ್ಕೆ ಪ್ರದ್ಯುತನ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಉದಯ ಲೀಲಾ ಛಾಯಾಗ್ರಹಣ, ವಿಜೇತ್‌ ಚಂದ್ರ ಸಂಕಲನವಿದೆ. ಸದ್ಯ ಟ್ರೇಲರ್‌ ಬಿಡುಗಡೆ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿರುವ “ಗಜಾನನ ಆ್ಯಂಡ್‌ ಗ್ಯಾಂಗ್‌’ ಚಿತ್ರಕ್ಕೆ ಹೊಸ ವರ್ಷದ ಆರಂಭದಲ್ಲಿ ತೆರೆಗೆ ಬರಲಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.