ಸೈಯದ್ ತಂಗಳ ಅವರ ಜೊತೆ ಹೋದ ಬ್ಲಾಕ್ ಕಾಂಗ್ರೆಸ್ ಕಚೇರಿ


Team Udayavani, Dec 28, 2021, 12:34 PM IST

ಸೈಯದ್ ತಂಗಳ ಅವರ ಜೊತೆ ಹೋದ ಬ್ಲಾಕ್ ಕಾಂಗ್ರೆಸ್ ಕಚೇರಿ

ದಾಂಡೇಲಿ: ಬಹುಶಃ ಅವರಿರುತ್ತಿದ್ದರೇ ಈ ಭಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುತ್ತಿದ್ದರು. ಆದರೇನು ಹೋಗಬಾರದ ವಯಸ್ಸಿಗೆ ಹೋಗಿ ಬಿಟ್ಟರು. ಕೋವಿಡ್ ಮಹಾಮಾರಿ ಒರ್ವ ಸಮರ್ಥ ಜನನಾಯಕನನ್ನು ಬಲಿ ಪಡೆದಿರುವುದು ಮಾತ್ರ ದುರಂತ.

ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ 17 ವರ್ಷಗಳಿಂದ ಸುಧೀರ್ಘವಾಗಿ ಸೇವೆಯನ್ನು ಸಲ್ಲಿಸಿದ್ದ ಸೈಯದ್ ತಂಗಳ ಅವರು ಅಗಲಿದ ನಂತರ ದಾಂಡೇಲಿಯಲ್ಲಿ ಕಾಂಗ್ರೆಸ್ ತನ್ನ ಶಕ್ತಿಯನ್ನು ಕಳೆದುಕೊಂಡಿದ್ದು ಸುಳ್ಳಲ್ಲ. ಪಕ್ಷದ ಯಾವುದೇ ಕಾರ್ಯಕ್ರಮಗಳಿದ್ದರೂ ಸೈಯದ್ ತಂಗಳ ಅವರ ನೇತೃತ್ವದಲ್ಲಿ ಅದು ಜನಜಾತ್ರೆಯ ಕಾರ್ಯಕ್ರಮವಾಗುತ್ತಿತ್ತು. ಹಾಗೆಂದು ಈಗ ಕಾರ್ಯಕ್ರಮಗಳು ಆಗುತ್ತಿಲ್ಲ ಎಂದಲ್ಲ. ಆದರೆ ಆ ಪ್ರಮಾಣದಲ್ಲಿ ಆಗುತ್ತಿಲ್ಲ ಎನ್ನುವುದು ವಾಸ್ತವ ಸತ್ಯ. ಸೈಯದ್ ತಂಗಳ ಅವರ ಅಗಲಿಕೆಯನ್ನು ಕಾಂಗ್ರೆಸ್ ಪಕ್ಷ ಅಷ್ಟು ಸಲೀಸಾಗಿ ತುಂಬಿಸಿಕೊಳ್ಳುವುದು ಸುಲಭದ ಕೆಲಸವಲ್ಲ.

ದಾಂಡೇಲಿಯಲ್ಲಿ ಕಾಂಗ್ರೆಸ್ ಅಂದ್ರೆ ತಂಗಳ, ತಂಗಳ ಅಂದ್ರೆ ಕಾಂಗ್ರೆಸ್ ಎಂಬಷ್ಟರ ಮಟ್ಟಿಗೆ ಸೈಯದ್ ತಂಗಳ ಬೆಳೆದುನಿಂತಿದ್ದರು. ಯಾವುದೇ ಕಾರ್ಯಕ್ರಮಗಳಿರಲಿ, ಯಾರೇ ಕಾರ್ಯಕ್ರಮಕ್ಕೆ ಸಹಾಯ ಕೇಳಿ ಬಂದರೂ ಬರಿಗೈಯಲ್ಲಿ ಕಳುಹಿಸಿದ ಉದಾಹರಣೆಯೆ ಇಲ್ಲ. ದಾಂಡೇಲಿಯ ಮಟ್ಟಿಗೆ ಕಾಂಗ್ರೆಸ್ ಒಂದು ಯುಗ ಪುರುಷನನ್ನೆ ಕಳೆದುಕೊಂಡಿದೆ ಎಂದೆ ಹೇಳಬಹುದು.

ಯಾವಾಗ ಸೈಯದ್ ತಂಗಳ ಅವರು ವಿಧಿವಶರಾದರೋ ಅಂದೆ ದಾಂಡೇಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದು ಕಚೇರಿಯೂ ಇಲ್ಲದಂತಾಯ್ತು. ನಗರ ಸಭೆಯಲ್ಲಿ ಆಡಳಿತದ ಚುಕ್ಕಾಣಿಯನ್ನು ಹೊಂದಿರುವ, ರಾಜ್ಯದ ಮುತ್ಸದ್ದಿ ನಾಯಕನನ್ನು ಹೊಂದಿರುವ ದಾಂಡೇಲಿಯಲ್ಲಿ ತಂಗಳ ವಿಧಿವಶರಾದ ನಂತರ ಪಕ್ಷದ ಕಚೇರಿ ಮಾಡಲು ಸಾಧ್ಯವಾಗದೇ ಹೋಗಿರುವುದು ಮುಂದಿನ ದಿನಗಳಲ್ಲಿ ಪಕ್ಷ ಹೇಗೆ ಅಸ್ವಿತ್ವವನ್ನು ಉಳಿಸಿಕೊಳ್ಳಬಹುದು ಎನ್ನುವ ಪ್ರಶ್ನೆ ನಗರದಲ್ಲಿದೆ. ಬ್ಲಾಕ್ ಕಾಂಗ್ರೆಸ್ಸಿಗೆ ಅಧ್ಯಕ್ಷರೆ ಇಲ್ಲದೇ ಹಂಗಾಮಿ ಅಧ್ಯಕ್ಷರ ಮೂಲಕ ಪಕ್ಷ ಕಾರ್ಯನಿರ್ವಹಿಸುತ್ತಿದೆ. ಮುಂಬರಲಿರುವ ವಿಧಾನ ಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಮಾಡಬೇಕಾದ ಜವಾಬ್ದಾರಿ ಮುತ್ಸದ್ದಿ ನಾಯಕದ್ದಾಗಿದೆ. ಸೈಯದ್ ತಂಗಳ್ ಅವರಿಲ್ಲದೇ ಕೊರಗಿದ ಕಾಂಗ್ರೆಸ್ ಇದೀಗ ಪಕ್ಷಕ್ಕೊಂದು ನಗರದಲ್ಲಿ ಕಚೇರಿ ಇಲ್ಲದೇ ಸೊರಗಿದಂತಾಗಿದೆ.

ನಗರ ಸಭೆಯ ಒಂದು ಉಪ ಚುನಾವಣೆಯಲ್ಲಿ ಗೆದ್ದಿರಬಹುದು, ಇಂದು ನಡೆಯುತ್ತಿರುವ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲುವು ನಿಶ್ಚಿತ ಎಂಬಂತಿದೆ. ಅದು ಹೇಗೂ ಕಾಂಗ್ರೆಸ್ ಭದ್ರಕೋಟೆಯೆ ಆಗಿರುವುದರಿಂದ ಅಲ್ಲಿ ಅರ್ಹವಾಗಿ ಕಾಂಗ್ರೆಸ್ ಗೆಲುವು ಸಾಧ್ಯ. ಈ ಗೆಲುವು ಕಾಂಗ್ರೆಸಿನ ಸಾಧನೆ ಎಂದು ಸಂಭ್ರಮಿಸುವ ಗೆಲುವು ಅಲ್ಲ ಎನ್ನುವುದನ್ನು ಒಪ್ಪಿಕೊಂಡು ಪಕ್ಷ ಸಂಘಟನೆ, ಪಕ್ಷಕ್ಕೊಂದು ಕಚೇರಿ ಮಾಡಿಕೊಂಡಲ್ಲಿ ಪಕ್ಷ ವರ್ಚಸ್ಸನ್ನು ಉಳಿಸಿಕೊಳ್ಳಬಹುದು. ಇಲ್ಲದೇ ಹೋದಲ್ಲಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಇವೆಲ್ಲವುಗಳ ಪರಿಣಾಮವನ್ನು ಅನುಭವಿಸಬೇಕಾದಿತು.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

5-sirsi

Sirsi: ಕರ್ನಾಟಕ ಜಾನಪದ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ವೆಂಕಟೇಶ ನಾಯ್ಕ ಆಯ್ಕೆ

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.