ಬೈಪಾಸ್‌ ರಸ್ತೆ ಬೇಡಿಕೆ ಈಡೇರುವ ನಿರೀಕ್ಷೆ 


Team Udayavani, Dec 28, 2021, 1:42 PM IST

ಬೈಪಾಸ್‌ ರಸ್ತೆ ಬೇಡಿಕೆ ಈಡೇರುವ ನಿರೀಕ್ಷೆ 

ಸಿಂಧನೂರು: ಟ್ರ್ಯಾಕ್‌ ದಟ್ಟಣೆ ತಪ್ಪಿಸಲು ನಗರಕ್ಕೆ ಬೈಪಾಸ್‌ ರಸ್ತೆ ನಿರ್ಮಾಣವಾಗಬೇಕೆಂಬ ಬಹುದಿನಗಳ ಬೇಡಿಕೆ ಈಡೇರುವ ಮುನ್ಸೂಚನೆ ದಟ್ಟವಾಗಿದ್ದು, ಭೂಸ್ವಾ ಧೀನಕ್ಕೆ ಅಗತ್ಯವಿದ್ದ ಅನುದಾನ ನೀಡಲು ರಾಜ್ಯ ಸರಕಾರ ಅಸ್ತು ಎಂದಿದೆ.

ರಾಜ್ಯ-ಕೇಂದ್ರ ಸರಕಾರಶೇ.50/50 ಆಧಾರದಲ್ಲಿ ಭೂಸ್ವಾಧೀನಕ್ಕೆ ಹಣ ವಿನಿಯೋಗಿಸ ಬೇಕಿದ್ದು, ರಾಜ್ಯ ಸರಕಾರ ತನ್ನ ಪಾಲಿನ ಹಣ ಕೊಡಲುಮುಂದಾಗಿದೆ. ಕಳೆದ ಫೆಬ್ರವರಿಯಲ್ಲಿ ಕ್ರಿಯಾ ಯೋಜನೆ ರೂಪಿಸಿದ್ದ ರಾಜ್ಯ ಹೆದ್ದಾರಿ ಪ್ರಾಧಿಕಾರ ಭೂಸ್ವಾಧೀನಕ್ಕೆ ತಗಲುವ 87.55 ಕೋಟಿ ರೂ. ಅನುದಾನ ನಿರೀಕ್ಷೆಯಲ್ಲಿತ್ತು.ಈ ನಿಟ್ಟಿನಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ, ಶಾಸಕ ವೆಂಕಟ ರಾವ್‌ ನಾಡಗೌಡ ಪ್ರಯತ್ನದಲ್ಲಿದ್ದರು. ಇದಕ್ಕೆ ಕೊನೆಗೂ ಆರ್ಥಿಕ ಇಲಾಖೆ ಒಪ್ಪಿಗೆ ದೊರೆತಿದ್ದು,ಬೈಪಾಸ್‌ ಬೇಡಿಕೆ ಈಡೇರುವ ನಿರೀಕ್ಷೆಗರಿಗೆದರಿದೆ.

ಏನಿದು ಯೋಜನೆ?: ರಾಜ್ಯ ಹೆದ್ದಾರಿ ಪ್ರಾಧಿಕಾರ ಮುಖ್ಯ ಎಂಜಿನಿಯರ್‌ ರೂಪಿಸಿರುವ ಕ್ರಿಯಾ ಯೋಜನೆ ಪ್ರಕಾರಬೈಪಾಸ್‌ಗೆ 12.430 ಎಕರೆ ಜಮೀನು ಭೂಸ್ವಾಧೀನವಾಗಬೇಕಿದೆ. ಪ್ರತಿ ಎಕರೆಗೆ 12 ಲಕ್ಷ 35 ಸಾವಿರ ರೂ. ಮಾರುಕಟ್ಟೆ ಮೌಲ್ಯಇರುವ ಭೂತಲದಿನ್ನಿ ಗ್ರಾಮ ವ್ಯಾಪ್ತಿ, 12 ಲಕ್ಷ ರೂ. ಮೌಲ್ಯ ಇರುವ ಸಿಂಧನೂರುನಗರ ವ್ಯಾಪ್ತಿಯ ಜಮೀನು, 10 ಲಕ್ಷ 86ಸಾವಿರ ರೂ. ಮಾರುಕಟ್ಟೆ ಮೌಲ್ಯ ಇರುವಹೊಸಳ್ಳಿ ಗ್ರಾಮದ ವ್ಯಾಪ್ತಿ, 12 ಲಕ್ಷ 35ಸಾವಿರ ರೂ. ಮೌಲ್ಯವಿರುವ ಸಾಸಲಮರಿ ವ್ಯಾಪ್ತಿಯಲ್ಲಿ ಜಮೀನನ್ನು ಸ್ವಾಧೀನ ಪಡೆಯಬೇಕಿದೆ. ಈ ಎಲ್ಲ ಜಮೀನು ಸ್ವಾಧೀನವಾದರೆ ಗಂಗಾವತಿ-ರಾಯಚೂರು ರಸ್ತೆಯ ಹೊರಭಾಗದಿಂದ ನೇರವಾಗಿ ಜೇವರ್ಗಿ ಹೆದ್ದಾರಿ-150ಎಗೆ ಸಂಪರ್ಕ ದೊರೆಯಲಿದೆ.

ಡಿಸೆಂಬರ್‌ನಲ್ಲಿ ಒಪ್ಪಿಗೆ: ಕಳೆದ ಹಲವು ತಿಂಗಳಿಂದ ರಾಜ್ಯ ಸರಕಾರದಿಂದಅನುದಾನ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದ್ದವು. ಆದರೆ ಆರ್ಥಿಕ ಇಲಾಖೆಸಿಂಧನೂರು ಬೈಪಾಸ್‌ಗೆ ಬೇಕಾಗುವ87.55 ಕೋಟಿ ರೂ.ಗಳಲ್ಲಿ ಶೇ.50 ಭರಿಸಲು ಡಿಸೆಂಬರ್‌ 6, 2021ರಂದು ಒಪ್ಪಿಗೆ ನೀಡಿದೆ. ಈ ಆದೇಶದ ಪ್ರಕಾರ ರಾಜ್ಯ ಸರಕಾರದಿಂದ ಭೂಸ್ವಾಧೀನಕ್ಕಾಗಿ 43.77 ಕೋಟಿ ರೂ. ದೊರೆಯಲಿದೆ. ಕೇಂದ್ರ ಸರಕಾರ 150-ಎ ಜೇವರ್ಗಿ ಮಾರ್ಗದ ಎಲ್ಲ ಬೈಪಾಸ್‌ ನಿರ್ಮಾಣಕ್ಕೆ ಬೇಕಾಗುವ ಮೊತ್ತ ಭರಿಸಲು ಸಿದ್ಧವಿದೆ. ಅಧಿಕಾರಿಗಳು ಹಣಕಾಸಿನ ಕೊರತೆಯಿಲ್ಲವೆಂಬ ಭರವಸೆ ವ್ಯಕ್ತಪಡಿಸಿದ್ದರು. ರಾಜ್ಯ ಸರಕಾರಬೈಪಾಸ್‌ಗೆ ಬೇಕಾಗುವ ಜಮೀನುಒದಗಿಸುವ ಕೆಲಸ ಮಾಡಿಕೊಡಬೇಕೆಂಬಒತ್ತಾಯವಿತ್ತು. ಇದೀಗ ಆರ್ಥಿಕಇಲಾಖೆಯೇ ಸಮ್ಮತಿ ಸೂಚಿಸಿರುವುದರಿಂದಬೈಪಾಸ್‌ಗೆ ಎದುರಾಗಿದ್ದ ವಿಘ್ನ ನಿವಾರಣೆಯಾದಂತಾಗಿದೆ.

ಸರ್ವೇ ನಂಬರ್‌ಗಳು ಗೌಪ್ಯ :  ಸಿರುಗುಪ್ಪ ಮಾರ್ಗದ ಪವರ್‌ಗ್ರಿಡ್‌ ಪ್ರದೇಶದಿಂದ ಹಾಯ್ದು ಬರಲಿರುವ ಬೈಪಾಸ್‌, ಇಂಡಸ್ಟ್ರಿಯಲ್‌ ಏರಿಯಾದ ಸಮೀಪ ಗಂಗಾವತಿ ರಸ್ತೆಯಲ್ಲಿ ಕ್ರಾಸ್‌ ಆಗಿ, ಭೂತಲದಿನ್ನಿ-ಕಲ್ಲೂರು ಮಧ್ಯಭಾಗದಿಂದ ದೇವರಗುಡಿ, ಬಪ್ನೂರು, ಕುಷ್ಟಗಿ ರಸ್ತೆ ಮೂಲಕ ಹಾಯ್ದು ಹೋಗಲಿದೆ ಎಂದು ಅಂದಾಜಿಸಲಾಗಿದೆ. ಜಮೀನಿನ ಸರ್ವೇ ನಂಬರ್‌ ಇತರೆ ಮಾಹಿತಿಯನ್ನು ನೋಟಿμಕೇಶನ್‌ ಪೂರ್ವ ಬಯಲುಗೊಳಿಸದೇ ಗೌಪ್ಯವಾಗಿರಿಸಲಾಗಿದೆ. ರಿಯಲ್‌ಎಸ್ಟೇಟ್‌ ದಂಧೆ ಜಮೀನಿಗೆ ಲಗ್ಗೆ ಹಾಕುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.

ಕಳೆದ ಒಂದು ವರ್ಷದಿಂದ ಭೂಸ್ವಾಧೀನಕ್ಕೆ ಬೇಕಾದ ಅನುದಾನಕ್ಕೆ ಪ್ರಯತ್ನಿಸಲಾಗುತ್ತಿತ್ತು. ಬಸವರಾಜ ಬೊಮ್ಮಾಯಿ ಅವರ ಸರಕಾರ ಬಂದ ನಂತರ ಒಪ್ಪಿಗೆ ಸಿಕ್ಕಿದ್ದು, ಹಣ ನೀಡಲು ಆರ್ಥಿಕ ಇಲಾಖೆಯವರು ಅನುಮತಿ ಕೊಟ್ಟಿದ್ದಾರೆ. -ಸಂಗಣ್ಣ ಕರಡಿ, ಸಂಸದರು, ಕೊಪ್ಪಳ ಲೋಕಸಭಾ ಕ್ಷೇತ್ರ

-ಯಮನಪ್ಪ ಪವಾರ

ಟಾಪ್ ನ್ಯೂಸ್

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.