ವಾರಣಾಸಿಯ ಅಟಮೋಸ್ ಪವರ್ ಗೋಬರ್ ಗ್ಯಾಸ್ ಘಟಕಕ್ಕೆ ಸಚಿವ ಪ್ರಭು ಚವ್ಹಾಣ್ ಭೇಟಿ


Team Udayavani, Dec 28, 2021, 6:59 PM IST

ವಾರಣಾಸಿಯ ಅಟಮೋಸ್ ಪವರ್ ಗೋಬರ್ ಗ್ಯಾಸ್ ಘಟಕಕ್ಕೆ ಸಚಿವ ಪ್ರಭು ಚವ್ಹಾಣ್ ಭೇಟಿ

ಉತ್ತರಪ್ರದೇಶ : ಉತ್ತರಪ್ರದೇಶದ ವಾರಣಾಸಿಯ ಶೇಹನ್ ಶಾಪುರ್ ಪ್ರದೇಶದಲ್ಲಿರುವ ಕಾನ್ಹಾ ಉಪವನ ಗೋಶಾಲೆಗೆ ಮತ್ತು ಅಟಮೋಸ್ ಪವರ್ ಸಂಸ್ಥೆ ಸ್ಥಾಪಿಸಿರುವ ಗೋಬರ್ ಗ್ಯಾಸ್ ಘಟಕಕ್ಕೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಗೋವುಗಳ ಹಾಗೂ ಆಧಾರಿತ ಕೃಷಿಯ ಬಗ್ಗೆ ಹೆಚ್ಚು ಕಳಕಳಿ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಕ್ಷೇತ್ರದಲ್ಲಿ ಉದ್ಘಾಟನೆಗೊಂಡ ಅಟಮೋಸ್ ಗೋಬರ್ ಘಟಕ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದ್ದು ರೈತರ ಪರ ಅವರ ಕಾಳಜಿಯನ್ನು ತೋರುತ್ತದೆ ಎಂದರು.

ಉತ್ತರ ಪ್ರದೇಶ ಮಹಾರಾಷ್ಟ್ರ ಮತ್ತು ಗುಜರಾತ್ ಪ್ರವಾಸದಲ್ಲಿರುವ ಸಚಿವರು ಉತ್ತರ ಪ್ರದೇಶದ ಶಾಲೆಗಳಿಗೆ ಭೇಟಿ ಗೋಶಾಲೆಗಳ ನಿರ್ವಹಣ ಮಾದರಿಗಳ ಕುರಿತು ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಅಟಮೊಸ್ ಪವರ್ ಸಂಸ್ಥೆಯಿಂದ ನಿರ್ಮಿಸಲಾಗಿರುವ ಗೋಬರ್ ಗ್ಯಾಸ್ ಘಟಕದಲ್ಲಿ ನಿತ್ಯ 90 ಟನ್ ಗೊಬ್ಬರನ್ನು ಸಂಗ್ರಹಿಸಿ ಗ್ಯಾಸ್ ಉತ್ಪಾದನೆ ಮಾಡಿ ಅದನ್ನು ಸಿಲಿಂಡರ್ ನಲ್ಲಿ ತುಂಬಿಸಿ ಮಾರಾಟಮಾಡಲಾಗುತ್ತಿದೆ. ಘಟಕದಲ್ಲಿನ ಗ್ಯಾಸ್ ಉತ್ಪಾದನೆ ಆದನಂತರ ಉಳಿದಿರುವ ಸ್ಲರಿ ಮತ್ತು ಬಗಾಸೆಯಿಂದ ರಸಗೊಬ್ಬರವನ್ನು ತಯಾರು ಮಾಡಿ ಗೋಆಧಾರಿತ ಕೃಷಿಗೆ ಉತ್ತೇಜನ ನೀಡುತ್ತಿದ್ದಾರೆ ಎಂದರು.

ಉತ್ತರಪ್ರದೇಶದ ವಾರಣಾಸಿಯ ಶಹನಶಾಹಪುರ ಘಟಕದಲ್ಲಿ ಉತ್ಪಾದನೆಯಾಗುತ್ತಿರುವ ಗೊಬ್ಬರವನ್ನು ಸ್ಥಳೀಯರು ಹೆಚ್ಚು ಬಳಕೆ ಮಾಡಿಕೊಳ್ಳುತ್ತಾರೆ. ಈ ಭಾಗದ ರೈತರು ಗೋವು ಆಧಾರಿತ ಅಥವಾ ಪಾರಂಪರಿಕ ಕೃಷಿಯನ್ನು ಹೆಚ್ಚು ಅವಲಂಬಿಸಿದ್ದಾರೆ ಎಂದು ಸಚಿವರು ತಮ್ಮ ಅನುಭವವನ್ನು ತಿಳಿಸಿದ್ದಾರೆ.

ಸುಮಾರು ಇಪ್ಪತ್ತಕ್ಕೂ ಹೆಚ್ಚು ಹತ್ತಿರದ ಹಳ್ಳಿಗಳಿಂದ ಗೊಬ್ಬರವನ್ನು ಸಂಗ್ರಹಿಸಿ 90 ಮೆಟ್ರಿಕ್ ಟನ್ ವರೆಗೆ ಗ್ಯಾಸ್ ಉತ್ಪಾದನೆ ಮಾಡಲಾಗುತ್ತದೆ. ಹಾಗೂ ಪ್ರತಿ ಕೆಜಿಗೆ ರೂ.1 ರಂತೆ ಗೊಬ್ಬರವನ್ನು ಖರೀದಿ ಮಾಡುತ್ತಾರೆ. ಸುಮಾರು 5 ರಿಂದ 225 ಟನ್ ಗೊಬ್ಬರ ದಿಂದ ಗ್ಯಾಸ್ ಉತ್ಪಾದನೆ ಮಾಡುವ ಸಾಮರ್ಥ್ಯವನ್ನು ಅಟಮೋಸ್ ಘಟಕ ಹೊಂದಿದೆ. ಕಸಾಯಿಖಾನೆಗೆ ಸಾಗಿಸುತ್ತಿದ್ದ ಸುಮಾರು 300ಕ್ಕೂ ಹೆಚ್ಚು ಗೋವುಗಳನ್ನು ಇಲ್ಲಿ ಸಾಕಲಾಗಿದ್ದು ನಿತ್ಯ ಆರೋಗ್ಯ ಮತ್ತು ಆಹಾರಕ್ಕೆ ಹೆಚ್ಚಿನ ಒತ್ತು ನೀಡಿ ಆರೈಕೆ ಮಾಡಲಾಗುತ್ತಿದೆ. ಅಲ್ಲದೆ ಸುತ್ತಮುತ್ತಲ ಪ್ರದೇಶದ ರೈತರಿಗೆ ಹಾಗೂ ಜಾನುವಾರು ಸಾಕಣೆದಾರರಿಗೆ ಗೋವುಗಳನ್ನು ಸಾಕಲು ಆಗದೇ ಇದ್ದ ಸಂದರ್ಭದಲ್ಲಿ ಅವುಗಳನ್ನು ಗೋಶಾಲೆಗೆ ಬಿಡಲು ಮನವಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಬಹುತೇಕ ಹಸುಗಳು ಕಟುಕರ ಕೈಸೇರುವುದರಿಂದ ಉಳಿದಿದೆ.

ಇದನ್ನೂ ಓದಿ : ತೀರ್ಥಹಳ್ಳಿ: ಕುಡಿದ ಮತ್ತಿನಲ್ಲಿ ಶಾಲೆಯ ವಿಗ್ರಹ ಧ್ವಂಸ ಮಾಡಿದ ಕುಡುಕ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.