ಸಾಂಕ್ರಾಮಿಕ, ಪ್ರಕೃತಿ ವಿಕೋಪಗಳ ಅವಳಿ ಸವಾಲು

ಎಂಐಸಿ ಉಪನ್ಯಾಸದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್‌

Team Udayavani, Dec 29, 2021, 6:45 AM IST

ಸಾಂಕ್ರಾಮಿಕ, ಪ್ರಕೃತಿ ವಿಕೋಪಗಳ ಅವಳಿ ಸವಾಲು

ಉಡುಪಿ: ದೇಶಕ್ಕೆ 2020ರಲ್ಲಿ ಕೊರೊನಾ ಆಘಾತದ ಜತೆ ಜತೆಗೆ ಪ್ರಾಕೃತಿಕ ವಿಕೋಪವೂ ಎದುರಾಗಿತ್ತು. ಕೇಂದ್ರ ಸರಕಾರ ಜನರ ವಿಶ್ವಾಸ ಗಳಿಸುವ ಮೂಲಕ ಈ ಎರಡೂ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ಮಾಹೆ ವಿ.ವಿ.ಯ ಎಂಐಸಿಯಿಂದ ಎಂ.ವಿ. ಕಾಮತ್‌ ಅವರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ ಮಂಗಳವಾರ ಆನ್‌ಲೈನ್‌ ಮೂಲಕ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ “ಭಾರತ ಮತ್ತು ಸಾಂಕ್ರಾಮಿಕ ಅನಂತರದ ಅರ್ಥಿಕ ಪ್ರಗತಿ’ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

ಜಗತ್ತು ಕೊರೊನಾ ಆತಂಕದಲ್ಲಿರುವಾಗ ಭಾರತ ಇದರ ಜತೆಗೆ ಪ್ರಾಕೃತಿಕ ವಿಕೋಪಗಳನ್ನು ಎದುರಿಸಿತ್ತು. 2020ರಲ್ಲಿ ದೇಶವು ಪ್ರಮುಖ ಐದು ಚಂಡಮಾರುತುಗಳನ್ನು ಕಂಡಿದೆ. 2021ರಲ್ಲೂ ಅದು ಮುಂದುವರಿದಿದೆ. ಕೆಲವು ರಾಜ್ಯಗಳಲ್ಲಿ ಭಾರೀ ಪ್ರವಾಹ ಬಂದಿದ್ದರೆ, ಇನ್ನು ಕೆಲವು ರಾಜ್ಯಗಳಲ್ಲಿ ತೀವ್ರ ಬರ ಕಾಡಿತ್ತು. ಕೇಂದ್ರ ಸರಕಾರ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಜೀವ ಮತ್ತು ಜೀವನೋತ್ಸಾಹ ಉಳಿಸಲು ಹಲವು ಸಮರ್ಥ ಕ್ರಮಗಳನ್ನು ತೆಗೆದುಕೊಂಡಿತ್ತು ಎಂದು ವಿವರಿಸಿದರು.

ಜನರ ಹಸಿವು ನೀಗಿಸಲು 2020ರಿಂದಲೇ ಉಚಿತ ಪಡಿತರ ನೀಡುತ್ತ ಬಂದಿದ್ದೇವೆ. ಮಾರ್ಚ್‌ 2022 ತನಕವೂ ಇದನ್ನು ವಿಸ್ತರಿಸಿದ್ದೇವೆ. ಕೊರೊನಾ ಆರಂಭದಲ್ಲಿ ಲಸಿಕೆ ಬಂದಿರಲಿಲ್ಲ. ಪ್ರಧಾನಿ ಮೋದಿ ದೇಶದ ವಿಜ್ಞಾನಿಗಳು ಮತ್ತು ಇದಕ್ಕೆ ಸಂಬಂಧಿಸಿದ ತಂತ್ರಜ್ಞರಿಗೆ ಕರೆ ನೀಡಿ, ಲಸಿಕೆ ಸಿದ್ಧಪಡಿಸಲು ಬೇಕಾದ ಉತ್ತೇಜನ ನೀಡಿದರು.

ಅದರಂತೆ ಲಸಿಕೆ ಅಭಿವೃದ್ಧಿಪಡಿಸಲಾಯಿತು. ಒಂದು ವರ್ಷದ ಅವಧಿಯಲ್ಲಿ ದೇಶದ ಒಟ್ಟು ಜನಸಂಖ್ಯೆಯ ಶೇ. 95ರಷ್ಟು ಜನರಿಗೆ ಮೊದಲ ಡೋಸ್‌ ನೀಡಲಾಗಿದೆ. ಶೇ. 60ರಷ್ಟು ಜನರಿಗೆ 2ನೇ ಡೋಸ್‌ ಕೂಡ ನೀಡಲಾಗಿದೆ. 15ರಿಂದ 18 ವರ್ಷ ವಯೋಮಾನದವರಿಗೂ ಲಸಿಕೆ ನೀಡುವ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೀಗೆ ಕೇಂದ್ರ ಸರಕಾರ ಕೊರೊನಾ ಸಂದಿಗ್ಧವನ್ನು ಸಮರ್ಥವಾಗಿ ನಿಭಾಯಿಸಿದೆ ಎಂದರು.

ಇದನ್ನೂ ಓದಿ:ಚೀನಾ ಗಡಿಭಾಗದಲ್ಲಿ 27 ರಸ್ತೆ ನಿರ್ಮಾಣಕ್ಕೆ ಚಾಲನೆ : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

ಲಾಕ್‌ಡೌನ್‌ನಿಂದ ಸೆಮಿ ಲಾಕ್‌ಡೌನ್‌, ಈಗ ನೋ ಲಾಕ್‌ಡೌನ್‌. ಕೆಲವು ಭಾಗಗಳಲ್ಲಿ ಮೈಕ್ರೋ ವಿಧಾನದಲ್ಲಿ ಲಾಕ್‌ಡೌನ್‌, ಕಂಟೈನ್‌ಮೆಂಟ್‌ ವಲಯ ರಚನೆ ಮಾಡಲಾಗುತ್ತಿದೆ. ವ್ಯಾಪಾರ, ವಹಿವಾಟುಗಳು ಚುರುಕಾಗುತ್ತಿರುವುದರಿಂದ ಆರ್ಥಿಕತೆ ಚೇತರಿಸಿಕೊಳ್ಳುತ್ತಿದೆ ಎಂದರು.

ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತನಾಡಿ, ಎಂ.ವಿ. ಕಾಮತ್‌ ಪತ್ರಕರ್ತರಾಗಿ ಉನ್ನತ ಸಾಧನೆ ಮಾಡಿದ್ದರು. ಪ್ರಸಾರಭಾರತಿ ಅಧ್ಯಕ್ಷರಾಗಿಯೂ ಉತ್ಕೃಷ್ಟ ಸೇವೆ ಸಲ್ಲಿಸಿದ್ದಾರೆ. ಅವರ ದೂರದೃಷ್ಟಿತ್ವ ಎಲ್ಲ ರೀತಿಯಲ್ಲೂ ಸಹಕಾರಿಯಾಗಿದೆ ಎಂದರು.

ಕುಲಪತಿ ಲೆ| ಡಾ| ಎಂ.ಡಿ. ವೆಂಕಟೇಶ್‌ ಸ್ವಾಗತಿಸಿದರು. ಎಂಐಸಿ ಆ್ಯನಿಮೇಶನ್‌ ವಿಭಾಗದ ಮುಖ್ಯಸ್ಥ ಡಾ| ಬಾಲಾಜಿ ವಂದಿಸಿದರು.

ಎಂ.ವಿ. ಕಾಮತ್‌ ಸ್ಫೂರ್ತಿ, ಪ್ರೇರಣೆ
ಬಹುಮುಖ ವ್ಯಕ್ತಿತ್ವದ ಎಂ.ವಿ. ಕಾಮತ್‌ ವಿಜ್ಞಾನ ಪದವೀಧರರಾಗಿದ್ದರೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದರು. ಪತ್ರಕರ್ತರಾಗಿ ಸಂವಿಧಾನದ ಕರಡು ಸಿದ್ಧಪಡಿಸುವ ಸಾಂವಿಧಾನಿಕ ಸಭೆಯ ಕಲಾಪಗಳನ್ನು ಪ್ರತ್ಯಕ್ಷ ವರದಿ ಮಾಡಿದ್ದರು. ಗೋಡ್ಸೆಯ ನ್ಯಾಯಾಂಗ ವಿಚಾರಣೆ, ದೇಶದ ಸ್ವಾತಂತ್ರ್ಯದ ಘಳಿಗೆ ಸೇರಿದಂತೆ ಅನೇಕ ಪ್ರಮುಖ ಘಟನೆಗಳಿಗೆ ಪತ್ರಕರ್ತರಾಗಿ ಸಾಕ್ಷಿಯಾಗಿದ್ದರು. ಎಂ.ವಿ. ಕಾಮತ್‌ ಅವರ ಜೀವನ ಯುವ ಜನತೆಗೆ ಸ್ಫೂರ್ತಿ ಹಾಗೂ ಪ್ರೇರಣೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.