ಪಾರ್ವತಿ ಪೂಜಾರಿ, ಕಲಾ ಭಾಗ್ವತ್‌ರಿಗೆ ಎಂ. ಬಿ. ಕುಕ್ಯಾನ್‌ ಚಿನ್ನದ ಪದಕ ಪ್ರದಾನ


Team Udayavani, Dec 29, 2021, 3:40 PM IST

ಪಾರ್ವತಿ ಪೂಜಾರಿ, ಕಲಾ ಭಾಗ್ವತ್‌ರಿಗೆ ಎಂ. ಬಿ. ಕುಕ್ಯಾನ್‌ ಚಿನ್ನದ ಪದಕ ಪ್ರದಾನ

ಮುಂಬಯಿ: ಮುಂಬಯಿ ವಿಶ್ವವಿದ್ಯಾನಿಲಯದ 2021 ಘಟಿಕೋ ತ್ಸವ ಸಮಾರಂಭವು ಡಿ. 27ರಂದು ಫೋರ್ಟ್‌ ಕ್ಯಾಂಪಸ್‌ನ ಜಹಾಂಗೀರ್‌ ಹಾಲ್‌ನಲ್ಲಿ  ಅದ್ದೂರಿಯಾಗಿ ನೆರ ವೇರಿತು. ಕನ್ನಡ ವಿಭಾಗದ 2019- 2020ನೇ ಸಾಲಿನ ಎಂಎ ರ್‍ಯಾಂಕ್‌ ವಿಜೇತ ವಿದ್ಯಾರ್ಥಿನಿ ಪಾರ್ವತಿ ಪೂಜಾರಿ ಮತ್ತು 2020-2021ನೇ ಸಾಲಿನ ಎಂಎ ರ್‍ಯಾಂಕ್‌ ವಿಜೇತ ವಿದ್ಯಾರ್ಥಿನಿ ಕಲಾ ಭಾಗ್ವತ್‌ ಅವರಿಗೆ ಗಣ್ಯರ ಸಮ್ಮುಖದಲ್ಲಿ  ಪ್ರತಿಷ್ಠಿತ ಎಂ. ಬಿ. ಕುಕ್ಯಾನ್‌ ಸುವರ್ಣ ಪದಕವನ್ನು  ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಕುಲಪತಿ ಭಗತ್‌ ಸಿಂಗ್‌ ಕೋಶ್ಯಾರಿ ಅವರು ಪದಕ ಹಾಗೂ ಪ್ರಮಾಣ ಪತ್ರ ನೀಡಿದರು. ಅತಿಥಿಯಾಗಿದ್ದ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಓಶಿಯಾನೋಗ್ರಫಿ ಗೋವಾ ಇದರ ನಿರ್ದೇಶಕ ಪ್ರೊ| ಸುನೀಲ್‌ ಕುಮಾರ್‌ ಸಿಂಗ್‌ ಮಾತನಾಡಿ, ಕಲಿಕೆ ಎಂದಿಗೂ ನಿಲ್ಲಬಾರದು. ಗಳಿಸಿದ ಜ್ಞಾನವು ಅಂತಿಮವಾಗಿ ವೈಯಕ್ತಿಕ ಹಾಗೂ ಸಾಮಾಜಿಕ ಸ್ವಾಸ್ಥ್ಯ ಮತ್ತು ಸಂತೋಷಕ್ಕೆ ಕಾರಣವಾಗುತ್ತದೆ. ವಿದ್ಯಾರ್ಥಿಗಳಿಗೆ ಅನೇಕ ಸವಾಲುಗಳನ್ನು ಎದುರಿಸುವ ಹಾಗೂ ಜಯಿಸುವ ಕೌಶಲ ಮತ್ತು ಜ್ಞಾನವನ್ನು ಮುಂಬಯಿ ವಿವಿ ನೀಡಿದೆ. ಇದನ್ನು ಪಡೆದ ಎಲ್ಲರೂ ಮಹತ್ವಾಕಾಂಕ್ಷೆ ಯಿಂದ ಆದರ್ಶವಾಗಿ ಮುನ್ನಡೆಯ ಬೇಕು ಎಂದು ಕರೆ ನೀಡಿದರು.

ಐತಿಹಾಸಿಕ ಮಹತ್ವವಿರುವ ಮುಂಬಯಿ ವಿವಿಯಲ್ಲಿ  ಅನೇಕ ಮಹಾಪುರುಷರು ವಿದ್ಯಾರ್ಜನೆ ಮಾಡಿ ತ್ಯಾಗ-ಬಲಿದಾನ, ವಿಜ್ಞಾನ, ಕಲೆ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ದೇಶಕ್ಕೆ ಮಹತ್ವದ ಕೊಡುಗೆ ನೀಡಿರುತ್ತಾರೆ. ಈ ವಿವಿಯಲ್ಲಿ  ಕಲಿತು ಸಾಧನೆ ಮಾಡಿ ರುವುದು ಅಭಿಮಾನದ ಸಂಗತಿ ಎಂದು ರಾಜ್ಯಪಾಲರು ಶುಭ ಹಾರೈಸಿದರು.

ವಿವಿ ಉಪ ಕುಲಪತಿ ಪ್ರೊ| ಸುಹಾಸ್‌ ಪೆಡ್ನೇಕರ್‌ ಅವರು ಕೊರೊನಾ ದುರಿತ ಕಾಲದಲ್ಲಿಯೂ ವಿವಿಯ ಚಟುವಟಿಕೆಗಳನ್ನು ಸಶಕ್ತವಾಗಿ ನಿಭಾ ಯಿಸಿದ ಎಲ್ಲ ವಿಭಾಗಗಳನ್ನೂ ಶ್ಲಾಘಿಸಿ ಅಭಿನಂದಿಸಿದರು. ಪ್ರವಾಸೋದ್ಯಮ ಹಾಗೂ ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ, ಸಹ ಕುಲಪತಿ ಪ್ರೊ| ರವೀಂದ್ರ ಕುಲಕರ್ಣಿ, ಉಪ ಕುಲಸಚಿವ ರಾಜೇಂದ್ರ ಪಗಾರೆ, ಪರೀಕ್ಷಾ ಮಂಡಳಿಯ ಸಂಚಾ ಲಕ ವಿನೋದ್‌ ಪಾಟೀಲ್‌, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ| ಜಿ. ಎನ್‌. ಉಪಾಧ್ಯ, ವಿವಿ ಆಡಳಿತ

ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಚಿದಾನಂದ ಭಾಗ್ವತ್‌, ದೀಪಾ ಪೂಜಾರಿ ಮತ್ತಿತರರಿದ್ದರು.

ಅಪಾರ ಪರಿಶ್ರಮ, ಮನೆಯಲ್ಲಿ  ಪೂರಕ ವಾತಾವರಣ ಇವೆಲ್ಲದರ ಜತೆಗೆ ಕನ್ನಡ ವಿಭಾಗ ನೀಡಿದ ವಿಷಯ ಜ್ಞಾನ, ನಿರಂತರ ಪ್ರೋತ್ಸಾಹ, ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಅದು ವಹಿಸಿದ ಶ್ರಮ ಹಾಗೂ ತರಬೇತಿಯು ಮನೋಸ್ಥೈರ್ಯವನ್ನು ಹೆಚ್ಚಿಸಿದೆ. ಅದರಿಂದಲೇ ಈ ಹಂತ ತಲುಪಲು ಸಾಧ್ಯವಾಯಿತು ಎಂಬುದಾಗಿ ಪಾರ್ವತಿ ಪೂಜಾರಿ, ಕಲಾ ಭಾಗ್ವತ್‌ ತಮ್ಮ ಅನಿಸಿಕೆ ಹಂಚಿಕೊಂಡರು. ವಿಭಾಗದ ಪ್ರಾಧ್ಯಾಪಕ, ಮುಖ್ಯಸ್ಥರಾದ ಪ್ರೊ| ಜಿ. ಎನ್‌. ಉಪಾಧ್ಯ ಅವರು ಇಬ್ಬರೂ ವಿದ್ಯಾರ್ಥಿನಿಯರನ್ನು ಅಭಿನಂದಿಸಿದರು.

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.