31ರಂದು ಕರ್ನಾಟಕ ಬಂದ್ ಶತಸಿದ್ದ: ಗುಡುಗಿದ ವಾಟಾಳ್ ನಾಗರಾಜ್
Team Udayavani, Dec 29, 2021, 4:21 PM IST
ಬೆಳಗಾವಿ : ಡಿ.31ರಂದು ಕರ್ನಾಟಕ ಬಂದ್ಗೆ ಗೊಂದಲ ವಿಚಾರಕ್ಕೆ ಸಂಬಂಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಬುಧವಾರ ಹೇಳಿಕೆ ನೀಡಿದ್ದು, 31ರಂದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಬಂದ್ ಶತ ಸಿದ್ದ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ದಿನಗಳ ಹಿಂದೆ ನಾವು ಬಂದ್ಗೆ ಕರೆ ಕೊಟ್ಟಿದ್ದೇವೆ. ನಮ್ಮ ಹೋರಾಟ ಎಂಇಎಸ್ ನಿಷೇಧ ಮಾಡಲು, ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದವರ ವಿರುದ್ಧ. ಬೆಳಗಾವಿಯ ಎಲ್ಲಾ ಕನ್ನಡಪರ ಸಂಘಟನೆಗಳು ಬೆಂಬಲ ಕೊಟ್ಟಿದ್ದಾರೆ. ಈಗಾಗಲೇ ಬಂದ್ಗೆ ಕರೆ ಕೊಟ್ಟಿದ್ದೇವೆ ಯಾವುದೇ ಬದಲಾವಣೆ ಇಲ್ಲ ಎಂದರು.
ನಾನು ಬೆಳಗಾವಿಯಲ್ಲಿದ್ದೇನೆ, ಪ್ರವೀಣ್ ಶೆಟ್ಟಿ ಅವರ ಪತ್ರ ಬಂದಿರೋದು ಗೊತ್ತಿಲ್ಲ.ಅವರು ಹೇಳಿಕೆ ಕೊಡಲು ಸ್ವತಂತ್ರರು ಅದರ ಬಗ್ಗೆ ಚಿಂತೆ ಇಲ್ಲ ಎಂದರು.
ನಾಳೆ ಸಭೆ ಸೇರಿ ಚರ್ಚೆ ಮಾಡುತ್ತೇವೆ ಎಂದು ಸಾರಾ ಗೋವಿಂದ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸೂರ್ಯ ಈಕಡೆ ಬರಲಿ ಚಂದ್ರ ಆ ಕಡೆ ಹೋಗಲಿ ಬಂದ್ ಶತಸಿದ್ಧ.ಇಡೀ ದೇಶದಲ್ಲಿ ಎಲ್ಲಾ ಹೋರಾಟಗಳು ಒಂದಲ್ಲಾ ಒಂದು ರೀತಿಯಲ್ಲಿ ಸ್ವಲ್ಪ ವ್ಯತ್ಯಾಸ ಇರುತ್ತವೆ. ಇದೆಲ್ಲವನ್ನೂ ದೊಡ್ಡದು ಮಾಡಲು ಆಗುವುದಿಲ್ಲಾ. ಎಂಇಎಸ್ ನಿಷೇಧ ಆದರೆ ಗಡಿಯಲ್ಲಿ ಪುಂಡಾಟಿಕೆ ನಿಲ್ಲುತ್ತದೆ. ನಾನಂತೂ ನನ್ನ ಉಸಿರಿರುವವರೆಗೂ ಎಂಇಎಸ್ ನಿಷೇಧಕ್ಕೆ ಹೋರಾಟ ಮಾಡುತ್ತೇನೆ. 31ರಂದು ಬಂದ್ ಯಾವ ಯಾವ ರೀತಿ ಆಗುತ್ತದೆ ಎನ್ನುವುದು ಕನ್ನಡಿಗರಿಗೆ ಬಿಟ್ಟದ್ದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್