ಕಲ್ಲಂಗಡಿ ತೋಟಕ್ಕೆ ಕರಡಿ ದಾಳಿ: ಅಧಿಕಾರಿಗಳಿಂದ ಪರಿಶೀಲನೆ
Team Udayavani, Dec 29, 2021, 7:43 PM IST
ಕುಷ್ಟಗಿ: ಕರಡಿಗಳಿಗೆ ಕಲ್ಲಂಗಡಿ ಹಣ್ಣು ಎಂದರೆ ತುಂಬಾ ಇಷ್ಟವಾಗಿರುವ ಹಿನ್ನೆಲೆಯಲ್ಲಿ ಪುನಃ ದಾಳಿ ಮಾಡುವ ಸಾದ್ಯತೆಗಳಿರುತ್ತವೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಉಪ ವಲಯಾಧಿಕಾರಿ ರಿಯಾಜ್ ಗನಿ ಹೇಳಿದರು.
ಬುಧವಾರ ಬೆಳಗ್ಗೆ ಹೊನಗಡ್ಡಿ ಗ್ರಾಮದ ಶರಣಪ್ಪ ಮ್ಯಾದನೇರಿ ಅವರ ಕಲ್ಲಂಗಡಿ ತೋಟಕ್ಕೆ ಭೇಟಿ ನೀಡಿ, ಕರಡಿಗಳಿಂದಾಗಿರುವ ಹಾನಿಯನ್ನು ಸ್ಥಾನಿಕವಾಗಿ ಪರಿಶೀಲಿಸಿದರು.
ಕರಡಿಗಳಿಂದ ಕಲ್ಲಂಗಡಿ ಉತ್ಪನ್ನ ಹಾನಿಯಾಗಿದ್ದು ಇಲಾಖೆಯಿಂದ ಪರಿಹಾರಕ್ಕೆ ಪತ್ರ ಬರೆಯುವ ಭರವಸೆ ನೀಡಿದರು.ರೈತ ಶರಣಪ್ಪ ಮ್ಯಾದನೇರಿ ಅವರ ಕಲ್ಲಂಗಡಿ ತೋಟದಲ್ಲಿ ಕರಡಿಗಳ ದಾಳಿಯ ನಂತರ ಒಣ ಭೂಮಿಯಾಗಿದ್ದರಿಂದ ಹೆಜ್ಜೆ ಗುರುತು ಮೂಡಿಲ್ಲ. ಹಣ್ಣುಗಳನ್ನು ಉಗುರುಗಳಿಂದ ಕಿತ್ತುಕೊಂಡು ತಿಂದಿವೆ. ಕರಡಿಗಳಿಗೆ ಹಸಿವಾದರೆ ಈ ರೀತಿ ದಾಳಿ ಇಟ್ಟು ಹಾಳು ಮಾಡುತ್ತವೆ. ಇದನ್ನು ನಿಯಂತ್ರಿಸಲು ಡಿ.30 ರಂದು ಕರಡಿಗಳ ಚಲನ ವಲನ ಗಮನಿಸಿ ಬೋನು ಇಡುವ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಕನಕಗಿರಿ, ಯಲಬುರ್ಗಾ ತಾಲೂಕುಗಳ ಗಡಿ ಪ್ರದೇಶದಲ್ಲಿ ಗುಡ್ಡಗಾಡು ಪ್ರದೇಶವಿದೆ.ಕರಡಿಗಳಿಂದ ದಾಳಿಯಾಗಿರುವ ಪ್ರದೇಶ ಕುಷ್ಟಗಿ ತಾಲೂಕಿನ ಹೊನಗಡ್ಡಿ ಪ್ರದೇಶವಾಗಿದೆ. ಮೂರು ತಾಲೂಕಿನ ಅರಣ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ಕೈಗೊಳ್ಳಬೇಕಿದೆ ಎಂದು ಉಪ ವಲಯ ಅರಣ್ಯಾಧಿಕಾರಿ ರಿಯಾಜ್ ಗನಿ ಉದಯವಾಣಿ ಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ