ಮಡಿಕೇರಿ: ದಂಪತಿಯ ಸಮಯ ಪ್ರಜ್ಞೆ; ತಪ್ಪಿತು ಅನಾಹುತ


Team Udayavani, Dec 30, 2021, 11:36 AM IST

crime (2)

ಮಡಿಕೇರಿ: ಬೆಳೆಗಾರ ದಂಪತಿಯ ಸಮಯ ಪ್ರಜ್ಞೆ ಮತ್ತು ಸಾಹಸದ ಪ್ರತಿರೋಧದಿಂದ ಚೋರನೊಬ್ಬ ನಡೆಸಬಹುದಾಗಿದ್ದ ಕುಕೃತ್ಯವೊಂದು ತಪ್ಪಿದ ಘಟನೆ ದಕ್ಷಿಣ ಕೊಡಗಿನ ಶ್ರೀಮಂಗಲ ಸಮೀಪ ನಾಲ್ಕೇರಿ ಗ್ರಾಮದಲ್ಲಿ ನಡೆದಿದೆ. ಬೆಳೆಗಾರನ ಕೈಗೆ ಚಾಕುವಿನಿಂದ ಇರಿದು ತೀವ್ರವಾಗಿ ಗಾಯಗೊಳಿಸಿ ದರೋಡೆಕೋರ ಕಾಫಿ ತೋಟದೊಳಗೆ ಪರಾರಿಯಾಗಿದ್ದಾನೆ.

ಪೊನ್ನಂಪೇಟೆ ಕೊಡವ ಸಮಾಜದ ಮಾಜಿ ಅಧ್ಯಕ್ಷ, ನಾಲ್ಕೇರಿ ಗ್ರಾಮದ ಸುಳ್ಳಿಮಾಡ ಗೋಪಾಲ್‌ ತಿಮ್ಮಯ್ಯ ಅವರು ಪತ್ನಿಯೊಂದಿಗೆ ಮನೆಯಲ್ಲಿದ್ದಾಗ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾಸ್ಕ್ ಹಾಕಿಕೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ಲಾಕ್‌ ಮಾಡದ ಬಾಗಿಲನ್ನು ನೂಕಿಕೊಂಡು ಒಳನುಗ್ಗಿದ್ದಾನೆ. ಇದನ್ನು ಕಂಡ ಗೋಪಾಲ್‌ ಅವರ ಪತ್ನಿ ಒಳಕೋಣೆಯಲ್ಲಿದ್ದ ಗೋಪಾಲ್‌ ತಿಮ್ಮಯ್ಯ ಅವರನ್ನು ಕೂಗಿದಾಗ, ಅಪರಿಚಿತ ಮನೆಯ ಮತ್ತೂಂದು ಕೋಣೆಗೆ ನುಗ್ಗಿ ಚಾಕು ತೋರಿಸಿ ಹಲ್ಲೆಗೆ ಮುಂದಾಗಿದ್ದಾನೆ. ಅಪರಿಚಿತ ವ್ಯಕ್ತಿಯನ್ನು ಮನೆಯಿಂದ ಹೊರಹಾಕಲು ಗೋಪಾಲ್‌ ತಿಮ್ಮಯ್ಯ ಅವರು ಅಲ್ಲಿಯೇ ಇದ್ದ ಕೋಲಿನಿಂದ ಅಪರಿಚಿತನೊಂದಿಗೆ ಹೋರಾಟ ನಡೆಸಿದ್ದು, ಈ ಸಂದರ್ಭ ಅಪರಿಚಿತ ತನ್ನ ಬಳಿ ಇದ್ದ ಚಾಕುವಿನಿಂದ ಗೋಪಾಲ್‌ ಅವರ ಕೊರಳಿನ ಭಾಗಕ್ಕೆ ಇರಿಯಲು ಮುಂದಾಗಿದ್ದಾನೆ. ಅದನ್ನು ತಡೆಯುವಾಗ ಗೋಪಾಲ್‌ ತಿಮ್ಮಯ್ಯ ಅವರು ಎಡ ಕೈಗೆ ಆಳವಾದ ಗಾಯವಾಗಿದೆ. ಅದರೂ ಅಪರಿಚಿತನನ್ನು ಹೊರ ಹಾಕಲು ಕೋಲಿನಿಂದ ಪ್ರಹಾರ ಮುಂದುವರಿಸಿದ್ದು, ಈ ವೇಳೆ ಪತ್ನಿ ಸಹ ಜೋರಾಗಿ ಕೂಗಿಕೊಂಡ ಹಿನ್ನೆಲೆ ದರೊಡೆಕೋರ ಅಲ್ಲಿಂದ ಪರಾರಿಯಾಗಿದ್ದಾನೆ.

ಕೂಡಲೇ ಗ್ರಾಮದಲ್ಲಿರುವ ತನ್ನ ಸಹೋದರನ ಪುತ್ರ, ರಜೆಯಲ್ಲಿ ಬಂದಿದ್ದ ಸೇನಾಧಿಕಾರಿ ಕರ್ನಲ್‌ ಡಾ| ದಿಲನ್‌ ಭೀಮಯ್ಯ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಅವರಿಂದ ಪ್ರಥಮ ಚಿಕಿತ್ಸೆ ಪಡೆದ ಗೋಪಾಲ್‌ ತಿಮಯ್ಯ, ಗೋಣಿಕೊಪ್ಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಅಪರಿಚಿತ ವ್ಯಕ್ತಿ ಕಳೆದ ವರ್ಷವೂ ಬಂದಿದ್ದು, ಮನೆಯ ಎದುರಿನ ಬಾಗಿಲಿನಲ್ಲಿ ನಿಂತು ಬೆಲ್‌ ಮಾಡಿದ್ದರು. ಬಾಗಿಲು ಲಾಕ್‌ ಮಾಡಿದ್ದರಿಂದ ಕಿಟಿಕಿ ಮೂಲಕ ವಿಚಾರಿಸಿದಾಗ ಮಾತನಾಡದೇ ಇದ್ದುದನ್ನು ಕಂಡು ಆತಂಕದಿಂದ ತಮ್ಮ ಕಾರ್ಮಿಕರನ್ನು ಕೂಗಿದಾಗ, ತೋಟದೊಳಗೆ ಪರಾರಿಯಾಗಿದ್ದ ಎಂದು ಗೋಪಾಲ್‌ ತಿಮ್ಮಯ್ಯ ಅವರ ಪತ್ನಿ ಹೇಳಿದ್ದಾರೆ. ಡಿ.ವೈ,ಎಸ್‌.ಪಿ.ಜಯಕುಮಾರ್‌ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದು ತನಿಖೆ ಕೈಗೊಂಡಿದ್ದಾರೆ. ಕುಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ದಕ್ಷಿಣ ಕೊಡಗಿನ ಬೆಳೆಗಾರರಲ್ಲಿ ಆತಂಕ ಸೃಷ್ಟಿಯಾಗಿದೆ.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.