24 ಗಂಟೆಯಲ್ಲಿ  ಟ್ರಾನ್ಸ್‌ಫಾರ್ಮರ್‌ ಬದಲಾವಣೆ: ಸಚಿವ ವಿ. ಸುನಿಲ್‌ ಕುಮಾರ್‌


Team Udayavani, Dec 31, 2021, 6:12 AM IST

24 ಗಂಟೆಯಲ್ಲಿ  ಟ್ರಾನ್ಸ್‌ಫಾರ್ಮರ್‌ ಬದಲಾವಣೆ: ಸಚಿವ ವಿ. ಸುನಿಲ್‌ ಕುಮಾರ್‌

ಬೆಂಗಳೂರು: ವಿಫ‌ಲಗೊಂಡ ವಿದ್ಯುತ್‌ ಪರಿವರ್ತಕ (ಟ್ರಾನ್ಸ್‌ ಫಾರ್ಮರ್‌) ಬದಲಾವಣೆಗಾಗಿ ವರ್ಷಾನುಗಟ್ಟಲೆ ಹೋರಾಟ ಮಾಡಬೇಕಿದ್ದ ರೈತರ ಬವಣೆಗೆ ರಾಜ್ಯ ಇಂಧನ ಇಲಾಖೆ ಈಗ ಕೊನೆ ಹಾಡಿದೆ ಎಂದು ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರೈತರ ಟ್ರಾನ್ಸ್‌ ಫಾರ್ಮರ್‌ ಬದಲಾವಣೆಯನ್ನು ದೂರು ಸಲ್ಲಿಕೆಯಾದ 24 ಗಂಟೆಯೊಳಗೆ ಮಾಡಬೇಕೆಂಬ ಗುರಿ ಸಾಧನೆಯಲ್ಲಿ ಇಂಧನ ಇಲಾಖೆ ಈಗ ಶೇ. 100ರಷ್ಟು ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲ ವಿದ್ಯುತ್‌ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಟ್ರಾನ್ಸ್‌ ಫಾರ್ಮರ್‌ ಬ್ಯಾಂಕ್‌ ಸ್ಥಾಪನೆ ಮಾಡಲಾಗಿದ್ದು, ಸದ್ಯಕ್ಕೆ 10248 ಟ್ರಾನ್ಸ್‌ ಫಾರ್ಮರ್‌ಗಳ ದಾಸ್ತಾನು ಲಭ್ಯವಿದೆ. ರೈತರ ಮನವಿಗೆ ಸ್ಪಂದಿಸುವ ಮೂಲಕ ಜನಸ್ನೇಹಿ ಕಾರ್ಯದಲ್ಲಿ ಉಳಿದ ಇಲಾಖೆಗಿಂತ ನಮ್ಮ ಇಲಾಖೆ ಒಂದು ಹೆಜ್ಜೆ ಮುಂದೆ ಸಾಗಿದೆ.

27,637 ಅಳವಡಿಕೆ:

ತಾವು ಅಧಿಕಾರ ಅಳವಡಿಸಿಕೊಂಡ ಆರಂಭದಿಂದ ಇಲ್ಲಿಯವರೆಗೆ ಹಿಂಬಾಕಿ ಬೇಡಿಕೆಯೂ ಸೇರಿ ಎಲ್ಲ ವಿದ್ಯುತ್‌ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ 27,650 ವಿದ್ಯುತ್‌ ಪರಿವರ್ತಕಗಳು ವಿಫ‌ಲಗೊಂಡಿರುವ ಬಗ್ಗೆ ರೈತರು ದೂರು ದಾಖಲಿಸಿದ್ದರು. ಈ ಪೈಕಿ 21,145 ಪ್ರಕರಣಗಳಲ್ಲಿ 24 ಗಂಟೆಯೊಳಗಾಗಿ ಪರಿವರ್ತಕಗಳನ್ನು ಬದಲಾವಣೆ ಮಾಡಲಾಗಿದೆ. ರಸ್ತೆ ಸಂಪರ್ಕ ಸೇರಿದಂತೆ ಉಳಿದ ಅಡೆತಡೆಗಳು ಇರುವ ಕಡೆಗಳಲ್ಲಿ 24 ಗಂಟೆ ಕಳೆದ ಕೆಲ ತಾಸಿನ ಒಳಗಾಗಿ ಪರಿವರ್ತಕ ಬದಲಾವಣೆ ಮಾಡಿದ ಪ್ರಕರಣ 6492 ಎಂದು ತಿಳಿಸಿದ್ದಾರೆ.

ಹಿಂದೆ ಹೇಗಿತ್ತು ?  :

ಈ ಹಿಂದೆ ಪರಿವರ್ತಕ ಬದಲಾವಣೆ ವ್ಯವಸ್ಥೆ ಶೋಚನೀಯವಾಗಿತ್ತು. ರೈತರು ದೂರು ನೀಡಿ ಬದಲಾವಣೆಗೆ ಅರ್ಜಿ ಸಲ್ಲಿಸಿದ ಬಳಿಕ ತಿಂಗಳಾನುಗಟ್ಟಲೆ ಕಾಯಬೇಕಿತ್ತು. ನಾನಾ ಕಾರಣಗಳನ್ನು ನೀಡಿ ವಿಳಂಬ ಮಾಡಲಾಗುತ್ತಿತ್ತು. ಇದರಿಂದ ಕೃಷಿ ಚಟುವಟಿಕೆಗೆ ತೊಂದರೆಯಾಗು ತ್ತಿತ್ತು. ಅಲ್ಲದೆ ವಿಫ‌ಲಗೊಂಡ ಪರಿವರ್ತಕಗಳನ್ನು ರೈತರು ಎತ್ತಿನಗಾಡಿ ಅಥವಾ ತಮ್ಮ ವಾಹನಗಳಲ್ಲಿ ಆಯಾ ಸರಬರಾಜು ಕಚೇರಿಗೆ ತಲುಪಿಸುತ್ತಿದ್ದರು. ಆದರೆ ರಾಜ್ಯ ಸರಕಾರ ಈ ಪದ್ಧತಿಯಲ್ಲೂ ಬದಲಾವಣೆ ತಂದಿದೆ. ಈಗ ವಿಫ‌ಲಗೊಂಡ ಪರಿವರ್ತಕವನ್ನು ಇಲಾಖೆ ವತಿಯಿಂದಲೇ ಉಚಿತವಾಗಿ ಸಾಗಿಸಿ ಹೊಸ ಟ್ರಾನ್ಸ್‌ ಫಾರ್ಮರ್‌ ಸರಬರಾಜು ಮಾಡಲಾಗುತ್ತದೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.