31.75 ಲಕ್ಷ ವಿದ್ಯಾರ್ಥಿಗಳಿಗೆ ಲಸಿಕೆ: ಇಲಾಖೆ ಸಜ್ಜು

ಶಾಲೆಯಿಂದ ಹೊರಗುಳಿದವರಿಗೂ ಲಸಿಕೆ ತಲುಪಿಸುವ ಗುರಿ

Team Udayavani, Jan 1, 2022, 7:25 AM IST

31.75 ಲಕ್ಷ ವಿದ್ಯಾರ್ಥಿಗಳಿಗೆ ಲಸಿಕೆ: ಇಲಾಖೆ ಸಜ್ಜು

ಬೆಂಗಳೂರು: ಕೇಂದ್ರ ಸರಕಾರದ ನಿರ್ದೇಶನದಂತೆ ರಾಜ್ಯದಲ್ಲಿ 15ರಿಂದ 18ವರ್ಷದೊಳಗಿನ 31.75 ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆಗೆ ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಕೋವ್ಯಾಕ್ಸಿನ್‌ ಲಸಿಕೆ ನೋಂದಣಿಗೆ ವಿದ್ಯಾರ್ಥಿಗಳಿಗೆ ಪೋಷಕರ ಮೊಬೈಲ್‌ ನಂಬರ್‌ ಬಳಿಸಿಕೊಂಡು ಅವರ ಅಕೌಂಟ್‌ ಮೂಲಕ ವಿದ್ಯಾರ್ಥಿಗಳ ನೊಂದಣಿ ಮಾಡಲಾಗುತ್ತಿದೆ. ಈ ವ್ಯವಸ್ಥೆ ಸಾಧ್ಯವಾಗದ ಕಡೆಯಲ್ಲಿ ಶಾಲೆ ಮುಖ್ಯೋಪಾಧ್ಯಾಯರ ದೂರವಾಣಿಯ ಮೂಲಕ ನೋಂದಣಿ ಮಾಡಿಕೊಳ್ಳಲಾಗಿದೆ. ಶಾಲೆಯ ಗುರುತಿನ ಚೀಟಿ ಹಾಗೂ ಆಧಾರ್‌ ಕಾರ್ಡ್‌ ಬಳಸಿಕೊಂಡು ಫೋಟೋ ಐಡಿಯನ್ನು ಕೋವಿನ್‌ ಪೋರ್ಟಲ್‌ ಮೂಲಕ ದಾಖಲಿಸಲಾಗಿದೆ.

ಆರೋಗ್ಯ ಇಲಾಖೆಯ ವಿಶೇಷ ತರಬೇತಿ ಪಡೆದುಕೊಂಡ ಸಿಬಂದಿ ತಂಡ ಭಾಗವಹಿಸಲಿದ್ದಾರೆ. ಅವರು ಮಕ್ಕಳ ಲಸಿಕೆಯಲ್ಲಿ ವೈದ್ಯಕೀಯ ಅರ್ಹತೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಮಕ್ಕಳಲ್ಲಿ ಯಾರಾದರೂ ಟಿಡಿ ಹಾಗೂ ಇತರ ಯಾವುದಾದರೂ ಲಸಿಕೆಯನ್ನು ಪಡೆದಿದ್ದರೆ ಅಂತಹ ಮಕ್ಕಳಿಗೆ 15 ದಿನಗಳ ಅನಂತರ ಕೋವ್ಯಾಕ್ಸಿನ್‌ ಲಸಿಕೆ ವಿತರಿಸಲಾಗುತ್ತದೆ. ಜತೆಗೆ ಲಸಿಕೀಕರಣದ ಸಮಯ ಯಾವುದೇ ಅಡ್ಡಪರಿಣಾಮಗಳ ನಿರ್ವಹಣೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಾರ್ಮಿಕ ಇಲಾಖೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ , ಪಂಚಾಯತ್‌ ರಾಜ್‌ ಇಲಾಖೆಗಳು ಶಾಲೆಯಿಂದ ಹೊರಗುಳಿದ ಅಥವಾ ಶಾಲೆ ಬಿಟ್ಟ ಮಕ್ಕಳ ಲಸಿಕೀಕರಣಕ್ಕೆ ವಿಶೇಷ ಸಹಕಾರ ನೀಡಲಿದೆ. ಈ ಮಕ್ಕಳನ್ನು ಗುರುತಿಸಿ ಸಮೀಪದ ಆರೋಗ್ಯ ಇಲಾಖೆ ಹತ್ತಿರದ ಸರಕಾರಿ ಲಸಿಕೀಕರಣ ಕೇಂದ್ರದಲ್ಲಿ ಲಸಿಕೆ ನೀಡಲಾಗುತ್ತದೆ.

ಇದನ್ನೂ ಓದಿ:ಬೂಸ್ಟರ್‌ ಡೋಸ್‌ ಪಡೆಯಲು ವಾಕ್‌-ಇನ್‌ ಮೂಲಕ ನೋಂದಣಿ

ವಾಹನ, ತಿಂಡಿ ವ್ಯವಸ್ಥೆ
ರಾಜ್ಯದಲ್ಲಿ ಕೆಲ ಜಿಲ್ಲೆಗಳಲ್ಲಿ ಶಿಕ್ಷಣ ಇಲಾಖೆ, ದಾನಿ, ಶಾಲೆಗಳ ಸಹಯೋಗದಲ್ಲಿ ಮಕ್ಕಳಿಗೆ ಉಪಹಾರ, ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಲಸಿಕೀಕರಣಕ್ಕೆ ಅಗತ್ಯವಿರುವ ವಾಹನ ವ್ಯವಸ್ಥೆಯನ್ನು ಶಾಲೆಗಳಲ್ಲಿ ಮಾಡಿಕೊಳ್ಳಲಾಗಿದೆ.

ರಾಜ್ಯದಲ್ಲಿ 15-18 ವರ್ಷದೊಳಗಿನ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿರುವ ಪಟ್ಟಿಯಲ್ಲಿ ಬಿಬಿಎಂಪಿ ಮೊದಲ ಸ್ಥಾನದಲ್ಲಿದ್ದು 4.42 ಲಕ್ಷ ವಿದ್ಯಾರ್ಥಿಗಳನ್ನು ಹೊಂದಿದೆ. ಬೆಳಗಾವಿ 2.47 ಲಕ್ಷ, ಬಳ್ಳಾರಿ 1.64 ಲಕ್ಷ, ಕಲಬುರಗಿ 1.59 ಲಕ್ಷ, ಮೈಸೂರು 1.47 ಲಕ್ಷ, ವಿಜಯಪುರ 1.23 ಲಕ್ಷ, ತುಮಕೂರು 1.22 ಲಕ್ಷ, ರಾಯಚೂರು 1.14, ಬೀದರ್‌ 1.5 ಲಕ್ಷ, ದ.ಕ. 1.1 ಲಕ್ಷ, ಬಾಗಲಕೋಟೆಯಲ್ಲಿ 1 ಲಕ್ಷ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲು ಎರಡೂ ಇಲಾಖೆ ಸಜ್ಜಾಗಿದೆ. ದಾವಣಗೆರೆ, ಉಡುಪಿ, ಉತ್ತರ ಕನ್ನಡ, ಯಾದಗಿರಿ ಸೇರಿದಂತೆ ಉಳಿದ ಜಿಲ್ಲೆಯಲ್ಲಿ 40,000ದಿಂದ 88,000 ಫ‌ಲಾನುಭವಿಗಳಿದ್ದಾರೆ.

2007ರಲ್ಲಿ ಜನಿಸಿದ 15 ವರ್ಷ ಮೇಲ್ಪಟ್ಟ ಮಕ್ಕಳು ಕೋವ್ಯಾಕ್ಸಿನ್‌ ಲಸಿಕೆ ಪಡೆಯುವ ಅರ್ಹತೆಯನ್ನು ಪಡೆದುಕೊಂಡಿದ್ದು ಈಗಾಗಲೇ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಲಸಿಕಾಕರಣಕ್ಕೆ ಮುನ್ನ ಮಕ್ಕಳ ಪೋಷಕರೊಂದಿಗೆ ವಿಶೇಷ ಜಾಗೃತಿ ಸಭೆಯನ್ನು ಏರ್ಪಡಿಸಿ, ಲಸಿಕೀಕರಣದ ಮಹತ್ವ ಹಾಗೂ ಆವಶ್ಯಕತೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.