ರೈತರಿಗೆ 20,900 ಕೋಟಿ ರೂ. ವರ್ಗಾಯಿಸಿದ ಪ್ರಧಾನಿ ಮೋದಿ
Team Udayavani, Jan 2, 2022, 5:10 AM IST
ಹೊಸದಿಲ್ಲಿ: ಕೊರೊನಾ ಸೋಂಕಿನ ವಿರುದ್ಧ ದೇಶ ಅತ್ಯಂತ ಎಚ್ಚರಿಕೆ ಯಿಂದ ಹೋರಾಟ ನಡೆಸಲಿದೆ. ಜತೆಗೆ ದೇಶದ ಹಿತಾಸಕ್ತಿಯನ್ನೂ ಕಾಯ್ದುಕೊಳ್ಳಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಿಎಂ- ಕಿಸಾನ್ ಯೋಜನೆಯ ಅನ್ವಯ 10.09 ಕೋಟಿ ರೈತರಿಗೆ 10ನೇ ಕಂತಿನ ರೂಪ ದಲ್ಲಿ ಶನಿ ವಾರ 20,900 ಕೋಟಿ ರೂ. ಮೊತ್ತವನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಿದ ಬಳಿಕ ಅವರು ಮಾತನಾಡಿದರು.
ದೇಶದಲ್ಲಿ ಇದುವರೆಗೆ 145 ಕೋಟಿ ಡೋಸ್ ಕೊರೊ ನಾ ಲಸಿಕೆ ನೀಡಲಾಗಿದೆ. ಇದೊಂದು ಸಾಧನೆಯಾಗಿ ದೆ ಎಂದು ಪ್ರಧಾನಿ ಮೋದಿಯವರು ಪ್ರತಿಪಾದಿಸಿದ್ದಾರೆ. ಸೋಂಕಿನ ಅತ್ಯಂತ ತುರ್ತು ಸಂದರ್ಭದಲ್ಲಿ 80 ಕೋಟಿ ಮಂದಿ ಬಡವರಿಗೆ ಉಚಿತವಾಗಿ ಆಹಾರ ಧಾನ್ಯ ಪೂರೈಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಬಾಂಗ್ಲಾದೇಶ ವಿರುದ್ಧದ ಪ್ರಥಮ ಟೆಸ್ಟ್: ಕಾನ್ವೆ ಶತಕ; ಚೇತರಿಸಿದ ಕಿವೀಸ್
ಇದೇ ಕಾರ್ಯಕ್ರಮದಲ್ಲಿ 351 ರೈತ ಉತ್ಪಾದನ ಕೇಂದ್ರ (ಎಫ್ಪಿಒ)ಗಳಿಗೆ 14 ಕೋಟಿ ರೂ. ಮೊತ್ತದ ನೆರವನ್ನು ನೀಡಿದ್ದಾರೆ. ಈ ಕೇಂದ್ರಗಳಿಂದ 1.24 ಲಕ್ಷ ರೈತರಿಗೆ ನೆರವಾಗಲಿದೆ. ವರ್ಚುವಲ್ ಆಗಿ ನಡೆದ ಕಾರ್ಯಕ್ರಮದಲ್ಲಿ ಒಂಬತ್ತು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಏಳು ರಾಜ್ಯಗಳ ಕೃಷಿ ಸಚಿವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ