ಬಿಜನಗೇರಾ ಬಳಿ ಶೀಘ್ರವೇ ಜಿಲ್ಲಾ ಕಾರಾಗೃಹ!


Team Udayavani, Jan 2, 2022, 5:17 PM IST

20police

ರಾಯಚೂರು: ಬಹುದಿನಗಳ ಬೇಡಿಕೆ ಜಿಲ್ಲಾ ಕಾರಾಗೃಹ ಸ್ಥಳಾಂತರಕ್ಕೆ ಶೀಘ್ರವೇ ಚಾಲನೆ ಸಿಗುವ ಲಕ್ಷಣ ಗೋಚರವಾಗಿವೆ.

ಸಮೀಪದ ಬಿಜನಗೇರಾ ಬಳಿ 19.15 ಎಕರೆ ಸರ್ಕಾರಿ ಜಮೀನು ಗುರುತಿಸಿದ್ದು, ಜಿಲ್ಲಾಧಿಕಾರಿ ಅನುಮೋದನೆ ನೀಡುವುದೊಂದೇ ಬಾಕಿ ಇದೆ. ಜಿಲ್ಲೆಗೆ ಈಚೆಗೆ ಭೇಟಿ ನೀಡಿದ್ದ ಬೆಳಗಾವಿ ಡಿಐಜಿ ಉತ್ತರ ಕರ್ನಾಟಕ ಭಾಗದಲ್ಲಿ ಕಾರಾಗೃಹಗಳ ನಿರ್ಮಾಣಕ್ಕೆ ಒತ್ತು ನೀಡುತ್ತಿದ್ದು, 100 ಕೋಟಿ ರೂ. ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದರು. ಅದರ ಭಾಗವಾಗಿ ಅಧಿಕಾರಿಗಳು ಜಿಲ್ಲಾ ಕಾರಾಗೃಹ ಸ್ಥಳ ಶೋಧನೆಗೆ ಮುಂದಾಗಿದ್ದರು.

ಸುಸಜ್ಜಿತ ಕಾರಾಗೃಹ ನಿರ್ಮಾಣಕ್ಕೆ ವಿಶಾಲವಾದ ಸ್ಥಳ ಬೇಕಿರುವ ಕಾರಣ ನಗರ ಹೊರವಲಯದ ಬಿಜನಗೇರಾ ಬಳಿ ಸ್ಥಳ ಆಯ್ಕೆ ಮಾಡಲಾಗಿದೆ. ಡಿಸಿ ಅನುಮೋದನೆ ನೀಡುತ್ತಿದ್ದಂತೆ ಆ ಸ್ಥಳವನ್ನು ಇಲಾಖೆ ಹೆಸರಿಗೆ ವರ್ಗಾಯಿಸಿ ಕಾರಾಗೃಹ ನಿರ್ಮಾಣಕ್ಕೆ ಮುಂದಾಗುವ ನಿರೀಕ್ಷೆ ಇದೆ.

ಇಕ್ಕಟ್ಟು ಪ್ರದೇಶದಲ್ಲಿತ್ತು ಈಗಿರುವ ಕಾರಾಗೃಹ

ಈಗಿರುವ ಜೈಲು ನಗರದ ಹೃದಯ ಭಾಗದಲ್ಲಿದ್ದು, ಒಂದೂವರೆ ಎಕರೆ ಪ್ರದೇಶದಲ್ಲಿದೆ. ಜೈಲಿನ ಸುತ್ತಲೂ ಜನವಾಸವಿದ್ದಾರೆ. ಇದು 170 ಕೈದಿಗಳ ಕೂಡಿಡುವ ಸಾಮರ್ಥ್ಯ ಹೊಂದಿದ್ದು, ಈಗ 212 ಕೈದಿಗಳಿದ್ದಾರೆ. ಅಂದರೆ ಅಗತ್ಯಕ್ಕಿಂತ ಹೆಚ್ಚಿನ ಕೈದಿಗಳನ್ನು ಇರಿಸಲಾಗುತ್ತಿದೆ. ಅಲ್ಲದೇ ಯಾವುದೇ ಚಟುವಟಿಕೆ ನಡೆಸಬೇಕಾದರೂ ಇಲ್ಲಿ ಸ್ಥಳಾಭಾವ ಎದುರಾಗುತ್ತಿದೆ. ಇನ್ನು ಕೈದಿಗಳನ್ನು ಕರೆ ತರುವುದು, ನ್ಯಾಯಾಲಯಕ್ಕೆ ಹಾಜರು ಪಡಿಸುವುದು ಸೇರಿದಂತೆ ಇತ್ಯಾದಿ ಪ್ರಕ್ರಿಯೆಗಳು ನಿತ್ಯ ನಡೆಯುತ್ತಿದ್ದು, ರಸ್ತೆ ಮಧ್ಯೆಯೇ ಪೊಲೀಸ್‌ ವಾಹನ ನಿಲ್ಲಿಸುವ ಅನಿವಾರ್ಯತೆ ಇದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಈ ಎಲ್ಲ ಕಾರಣಗಳಿಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಕಾರಾಗೃಹ ವ್ಯಾಪ್ತಿ ವಿಸ್ತರಿಸುವ ನಿಟ್ಟಿನಲ್ಲಿ ಬೃಹತ್‌ ಕಾರಾಗೃಹ ನಿರ್ಮಾಣ ಅನಿವಾರ್ಯವಾಗಿತ್ತು.

ಕೈದಿಗಳ ಚಟುವಟಿಕೆಗೆ ಪೂರಕ

ಈಗಿರುವ ಜೈಲುಗಳು ಕೇವಲ ಶಿಕ್ಷೆ ನೀಡುವ ತಾಣವಾಗಿರದೆ ಕೈದಿಗಳ ಮನಪರಿವರ್ತನೆ ತಾಣಗಳಾಗಿ ಮಾರ್ಪಟ್ಟಿವೆ. ಜೈಲುಗಳಲ್ಲೂ ನಾನಾ ರೀತಿಯ ಚಟುವಟಿಕೆಗಳು, ಒಂದಿಲ್ಲೊಂದು ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಅದಕ್ಕೆಲ್ಲ ಈಗಿರುವ ಜೈಲಿನ ವಾತಾವರಣ ಅಷ್ಟೊಂದು ಪೂರಕವಾಗಿಲ್ಲ. ಉದ್ದೇಶಿತ ಕಾರಾಗೃಹದಲ್ಲಿ 19.15 ಎಕರೆ ಸ್ಥಳಾವಕಾಶ ಸಿಗಲಿದ್ದು, ಅಲ್ಲಿ ದೊಡ್ಡ ಕಟ್ಟಡದ ಜತೆ ವಿವಿಧ ಚಟುವಟಿಕೆ ನಡೆಸಲು ಸಾಕಷ್ಟು ಜಾಗ ಸಿಗಲಿದೆ. ಕ್ರೀಡೆಗಳಿಗೆ, ತೋಟಗಾರಿಕೆಗೆ, ಉದ್ಯಾನಕ್ಕೆ ಯಾವುದಾದರೂ ದೊಡ್ಡ ಕಾರ್ಯಕ್ರಮ ಆಯೋಜಿಸಲು ನಾನಾ ಕಾರಣಗಳಿಗೆ ದೊಡ್ಡ ಮೈದಾನ ಉಪಯೋಗವಾಗಲಿದೆ.

ಹೊಸ ಕಾರಾಗೃಹ ನಿರ್ಮಾಣದ ಉದ್ದೇಶದಿಂದ ಸಮೀಪದ ಬಿಜನಗೇರಾ ಹತ್ತಿರ 19.15 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದೆ. ಇಲಾಖೆಗೆ ಹಸ್ತಾಂತರಿಸಲು ಡಿಸಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಿರುವ ಕೈದಿಗಳಿಗೆ ಈ ಸ್ಥಳ ಸಾಲದಾಗಿದೆ. ಅಲ್ಲದೇ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ಆಗುತ್ತಿಲ್ಲ. ಡಿಸಿಯವರ ಅನುಮೋದನೆ ಬಳಿಕ ಮುಂದಿನ ಚಟುವಟಿಕೆ ಆರಂಭಿಸಲಾಗುವುದು. -ಬಿ.ಆರ್‌.ಅಂದಾನಿ, ಅಧೀಕ್ಷಕರು, ಜಿಲ್ಲಾ ಕಾರಾಗೃಹ

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.