ಸೈಕಲ್ ಜಾಥಾ ನಡೆಸಿ ಜನಜಾಗೃತಿ
Team Udayavani, Jan 2, 2022, 5:30 PM IST
ಮಾನ್ವಿ: ಪಟ್ಟಣದ ಬಸವ ವೃತ್ತದಲ್ಲಿ ರಾಯಚೂರು ರೈಡರ್ ಸಹಯೋಗದಲ್ಲಿ ಹಮ್ಮಿಕೊಂಡ ಸೈಕಲ್ ಜಾಥಾಕ್ಕೆ ಹೃದಯರೋಗ ತಜ್ಞ ಡಾ| ಸಕಲೇಶ ಪಾಟೀಲ್ ಬೆಟ್ಟದೂರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕೊರೊನಾ ಹೊಸ ತಳಿ ಒಮಿಕ್ರಾನ್ ಕುರಿತು ಭಯ ಪಡದೆ ಸಾಮಾಜಿಕ ಅಂತರ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸುವಂತೆ ಜನರಿಗೆ ಜಾಗೃತಿ ಮೂಡಿಸಲಾಗುವುದು ಎಂದರು.
ರಾಯಚೂರು ಜಿಲ್ಲೆಯ ವೈದ್ಯರ ಸಮೂಹದಿಂದ ನೂತನ 2022 ಹೊಸ ವರ್ಷವನ್ನು ವಿನೂತನವಾಗಿ ಆಚರಿಸುವ ಉದ್ದೇಶದಿಂದ ವೈದ್ಯರ ತಂಡದಿಂದ ಸೈಕಲ್ ಮೂಲಕ ಮಾನ್ವಿ ಯಿಂದ ಹಂಪಿ ವರೆಗೆ (120 ಕಿ.ಮೀ.) ತೆರಳಿ ಮಾರ್ಗದಲ್ಲಿ ಬರುವ ಪಟ್ಟಣ ಹಾಗೂ ಗ್ರಾಮಗಳ ಜನರಿಗೆ ದೈಹಿಕ ಸದೃಢತೆಗೆ ಸೈಕಲ್ ಬಳಸುವುದನ್ನು ರೂಢಿಸಿಕೊಂಡಲ್ಲಿ ಮಧುಮೇಹ ಹಾಗೂ ಹೃದಯದ ಕಾಯಿಲೆಗಳು ಬರದಂತೆ ತಡೆಯಬಹುದು ಎಂದರು.
ಡಾ| ಮಂಜುನಾಥ, ಡಾ| ಬಸವರಾಜ ಪಾಟೀಲ್, ಡಾ| ಜಯಪ್ರಕಾಶ ಪಾಟೀಲ್, ಡಾ| ಸುನೀಲ್, ರಾಘವೇಂದ್ರ, ಪ್ರವೀಣಚೂಡ ಸೇರಿದಂತೆ ಇನ್ನಿತರರು ಸೈಕಲ್ ಜಾಥದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ