ಹಲವು ವರ್ಷಗಳ ಬಳಿಕ ಶೆಟ್ಟೇರಹಳ್ಳಿ ರಸ್ತೆ ಸಮಸ್ಯೆಗೆ ಮುಕ್ತಿ


Team Udayavani, Jan 3, 2022, 12:33 PM IST

ಹಲವು ವರ್ಷಗಳ ಬಳಿಕ ಶೆಟ್ಟೇರಹಳ್ಳಿ ರಸ್ತೆ ಸಮಸ್ಯೆಗೆ ಮುಕ್ತಿ

ದೇವನಹಳ್ಳಿ: ಹಲವು ವರ್ಷಗಳಿಂದ ಸುಗಮ ಸಂಚಾರಕ್ಕೆ ಸೂಕ್ತ ರಸ್ತೆಯಿಲ್ಲದ ಕಾರಣ, ಶೆಟ್ಟೆರಹಳ್ಳಿಗ್ರಾಮಸ್ಥರು ಪರದಾಡುತ್ತಿದ್ದರು. ಶಾಸಕ ಎಲ್‌.ಎನ್‌. ನಾರಾಯಣಸ್ವಾಮಿ ನೇತೃತ್ವದಲ್ಲಿ ರೈತರೊಂದಿಗೆ ನಡೆಸಿದ ಸಂಧಾನ ಸಫ‌ಲವಾಗಿದ್ದು, ರೈತ ತನ್ನ ಭೂಮಿಯಲ್ಲಿ ಲಕ್ಷಾಂತರ ರೂ. ಮೌಲ್ದಯ ಸುಮಾರು 6 ಗುಂಟೆ ಭೂಮಿಯನ್ನು ಸಾರ್ವಜನಿಕ ರಸ್ತೆಗೆ ಬಿಟ್ಟುಕೊಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

ತಾಲೂಕಿನ ವಿಶ್ವನಾಥಪುರ ಗ್ರಾಪಂ ವ್ಯಾಪ್ತಿಯ ಶೆಟ್ಟೆರಹಳ್ಳಿ ಗ್ರಾಮದ ಬೆಂಗಳೂರು ಮೂಲಕದ ರೈತಜಾಕೀರ್‌ ಖಾನ್‌ ಅವರು, ಸರ್ವೆ ನಂಬರ್‌ 3/1 ರಲ್ಲಿ ರಸ್ತೆಗಾಗಿ 10 ಅಡಿಗಳು ಅಗವಿರುವ ಭೂಮಿ ಯನ್ನು ಬಿಟ್ಟುಕೊಟ್ಟಿದ್ದಾರೆ. ಈ ಹಿಂದೆ ಸಮೀಪದ ರೈತರ ಮನವೊಲಿಸಿ, ಗ್ರಾಮಠಾಣೆಯವರೆಗೂ ರಸ್ತೆ ನಿರ್ಮಾಣ ಮಾಡಿಕೊಡುವಂತೆ ಸಾಕಷ್ಟು ಬಾರಿ, ಅಧಿಕಾರಿಗಳು, ಹಾಗೂ ಜನಪ್ರತಿನಿಧಿಗಳು ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ.

ರೈತ ಜಾಕೀರ್‌ ಖಾನ್‌ ಮಾತನಾಡಿ, ನಮ್ಮೂರಿನ ಜನತೆಗೆ ಒಳ್ಳೆಯದಾಗಬೇಕು ಎನ್ನುವ ಉದ್ದೇಶದಿಂದ ಯಾವುದೇ ರೀತಿಯ ಪರಿಹಾರ ಪಡೆದುಕೊಳ್ಳದೇ, ಉಚಿತವಾಗಿ ಭೂಮಿ ಬಿಟ್ಟುಕೊಟ್ಟಿದ್ದೇನೆ. ನಾನು ಬಿಟ್ಟುಕೊಟ್ಟಿರುವ ಭೂಮಿಗೆ ಹಣ ಪಡೆದುಕೊಂಡರೆ ಅದು ಖರ್ಚಾಗುತ್ತದೆ. ಜನರು ನೆಮ್ಮದಿಯಿಂದ ಓಡಾಡಿದರೆ ನಮಗೆ ಒಳ್ಳೆಯದಾಗುತ್ತದೆ. ಶೆಟ್ಟೆರಹಳ್ಳಿ ಗ್ರಾಮಕ್ಕೆ ಹೋಗಿ ಬರಲಿಕ್ಕೆ ಬಂಡಿದಾರಿ 20 ಅಡಿಗಳಷ್ಟು ಇತ್ತು. ಗ್ರಾಮಸ್ಥರ ವಾಹನಗಳ ಸಂಚಾರ ಸೇರಿದಂತೆ ಪ್ರತಿಯೊಂದು ಕಾರ್ಯಚಟುವಟಿಕೆಗಳಿಗೂ ತುಂಬಾ ತೊಂದರೆಯಾಗಿತ್ತು. ಶಾಸಕ ಎಲ್‌.ಎನ್‌. ನಾರಾಯಣಸ್ವಾಮಿ ಸೇರಿದಂತೆ ಹಲವಾರು ಮಂದಿ ಬಂದು ನನ್ನ ಬಳಿ ಮನವಿ ಮಾಡಿಕೊಂಡರು ಎಂದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ಆರ್‌.ಮುನೇಗೌಡ ಮಾತನಾಡಿ, ತಾಲೂಕಿನಲ್ಲಿ ಹಲವಾರು ಗ್ರಾಮಗಳಲ್ಲಿ ಬಹಳ ವರ್ಷಗಳಿಂದ ಇದ್ದಂತಹ ಸಮಸ್ಯೆಗಳನ್ನು ಹಳ್ಳಿಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜಕೀಯ ರಹಿತವಾಗಿ ಬಗೆಹರಿಸಿದ್ದೇವೆ. ಈ ರಸ್ತೆಯೂ ಕೂಡಾ ದೊಡ್ಡಗೊಲ್ಲಹಳ್ಳಿಗೆ ಸೇರಿಕೊಳ್ಳಲಿದೆ. ಈಗ ಬೈಪಾಸ್‌ ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ, ಶೆಟ್ಟೆರಹಳ್ಳಿ ಗ್ರಾಮದ ರಸ್ತೆಯೂ ಉಪಯುಕ್ತವಾಗಲಿದೆ. ಹಲವಾರು ವರ್ಷಗಳಿಂದ ಇಲ್ಲಿ ರಸ್ತೆಯ ಸಮಸ್ಯೆಯಿದೆ. ಕ್ಷೇತ್ರದಲ್ಲಿ ಎಲ್ಲೆಲ್ಲಿ ರಸ್ತೆ ಸಮಸ್ಯೆಗಳಿವೆ ಎನ್ನುವುದನ್ನುಸ್ಥಳೀಯರಿಂದ ಮಾಹಿತಿ ಪಡೆದುಕೊಂಡು, ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸುವಂತಹ ಕೆಲಸವನ್ನು ನಾವು ಮಾಡಿಕೊಂಡು ಬರುತ್ತಿದ್ದೇವೆ ಎಂದರು.

ಉಚಿತವಾಗಿ ರಸ್ತೆಗೆ ಭೂಮಿ ಬಿಟ್ಟುಕೊಟ್ಟಿರುವ ಜಾಕೀರ್‌ ಖಾನ್‌ ಅವರನ್ನು ಗ್ರಾಮಸ್ಥರು ಅಬಿನಂದಿ ಸಿದರು. ಪುರಸಭೆ ಸದಸ್ಯರಾದ ಜಿ.ಎ.ರವೀಂದ್ರ,ಎಸ್‌.ನಾಗೇಶ್‌, ಗ್ರಾಪಂ ಮಾಜಿ ಅಧ್ಯಕ್ಷ ರಾಮಮೂರ್ತಿ, ಗ್ರಾಪಂ ಮಾಜಿ ಸದಸ್ಯನಾರಾಯಣಸ್ವಾಮಿ, ಭೂ ಮಾಪನ ಇಲಾಖೆಯಭೂಮಾಪಕ ಗಿರೀಶ್‌, ಮುಖಂಡ ನಾರಾಯಣಸ್ವಾಮಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.