ಮೊದಲ ಬಾರಿ ರಾಮನಗರಕ್ಕೆ ಆಗಮಿಸಿದ ಸಿಎಂ; ಕಪ್ಪು ಪಟ್ಟಿ ಪ್ರದರ್ಶಿಸಿ ಪ್ರತಿಭಟನೆ
Team Udayavani, Jan 3, 2022, 1:39 PM IST
ರಾಮನಗರ: ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲು ಸಿಎಂ ವೇದಿಕೆಗೆ ಬರುತ್ತಿದ್ದಂತೆ ದಲಿತ ಮುಖಂಡರು ಕಪ್ಪು ಪಟ್ಟಿ ಪ್ರದರ್ಶನ ಮಾಡಿ, ಡಿಕೆ ಸಹೋದರರ ಪರ ಘೋಷಣೆ ಕೂಗಿದ ಘಟನೆ ನಡೆಯಿತು.
ಪ್ರತಿಭಟನಾಕಾರರು ಜಿಲ್ಲಾಡಳಿತ ಹಾಗು ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ಇನ್ನೊಂದೆಡೆ ವೇದಿಕೆ ಕಾರ್ಯಕ್ರಮ ಆರಂಭವಾಗಿ,ನಾಡ ಗೀತೆ ಶುರುವಾದರೂ, ಪ್ರತಿಭಟನೆಯ ಘೋಷಣೆ ಕಡಿಮೆಯಾಗಿರಲಿಲ್ಲ. ಬಳಿಕ ಕೆಲ ಹೊತ್ತು ಸುಮ್ಮನಾದ ಪ್ರತಿಭಟನಾಕಾರರು ನಾಡ ಗೀತೆ ಬಳಿಕ ಮತ್ತೆ ಪ್ರತಿಭಟನೆ ಮುಂದುವರೆಸಿದರು.
ಇದನ್ನೂ ಓದಿ: ಲಖೀಂಪುರ್ ಖೇರಿ ಹಿಂಸಾಚಾರ: 5,000 ಪುಟಗಳ ಆರೋಪಪಟ್ಟಿ ಸಲ್ಲಿಕೆ, ಸಚಿವರ ಪುತ್ರ ಪ್ರಮುಖ ಆರೋಪಿ
ವೇದಿಕೆಯಲ್ಲೇ ಸಚಿವ ಅಶ್ವತ್ಥ ನಾರಾಯಣ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.
ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಕಾಂಗ್ರೆಸ್ ನ ಎಂಎಲ್ಸಿ ರಸ್.ರವಿ ಮಧ್ಯ ಪ್ರವೇಶಿಸಿ, ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರೂ, ಅದು ಸಾಧ್ಯವಾಗಲಿಲ್ಲ.
ಈ ವೇಳೆ ಡಿ.ಕೆ. ಸುರೇಶ್ ನಿಮ್ಮ ನೋವನ್ನು ಸಿಎಂ ಗೆ ಹೇಳುತ್ತೆನೆ. ನಡೀರಿ ನಡೀರಿ ಎಂದರು. ಇದು ಕಾಂಗ್ರೆಸ್ ಕಾರ್ಯಕ್ರಮ ಅಲ್ಲ. ಮುಖ್ಯಮಂತ್ರಿಗ ಕಾರ್ಯಕ್ರಮ . ಕೆಳಗಡೆ ಇಳೀರಿ. ಸಿಎಂ ಮೊದಲ ಬಾರಿಗೆ ಬಂದಿದ್ದಾರೆ. ವೇದಿಕೆಗೆ ಅಗೌರವ ತರಬೇಡಿ ಎಂದರು. ಸುರೇಶ್ ಮಧ್ಯ ಪ್ರವೇಶಿಸಿದ ಬಳಿಕವೇ ಕಾರ್ಯಕರ್ತರು ಹಾಗು ಪ್ರತಿಭಟನಾಕಾರರು ತಣ್ಣಾಗಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ