ಬೆಂಗಳೂರಿಗೆ ಕೊನೆಗೂ ಸಿಕ್ಕಿತು ಎನ್ಐಎ ಕಚೇರಿ!
ಡಿಐಜಿ ನೇತೃತ್ವದ ಅಧಿಕಾರಿಯ ನೇತೃತ್ವ; ಉದ್ಯಾನ ನಗರಿಯ ಕಚೇರಿಯಲ್ಲಿ 50 ಮಂದಿ ಸಿಬ್ಬಂದಿ-ಅಧಿಕಾರಿಗಳು
Team Udayavani, Jan 5, 2022, 8:45 PM IST
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಒಂದು ಶಾಖಾ ಕಚೇರಿ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ.
ಈ ಬಗ್ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರ ಜತೆಗೆ ಅಹ್ಮದಾಬಾದ್, ಪಾಟ್ನಾ, ಜೈಪುರ, ಭೋಪಾಲ, ಭುವನೇಶ್ವರದಲ್ಲಿ ಎನ್ಐಎ ಶಾಖಾ ಕಚೇರಿಗಳನ್ನು ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ. ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ನಡೆಸುವ ದಾಳಿಯ ಸಂಖ್ಯೆ ಹೆಚ್ಚುತ್ತಿರುವಂತೆಯೇ ಕೇಂದ್ರ ಸರ್ಕಾರದ ಈ ನಿರ್ಧಾರ ಕೈಗೊಂಡಿದೆ.
ಬೆಂಗಳೂರು, ಪಾಟ್ನಾ ಮತ್ತು ಭೋಪಾಲದಲ್ಲಿರುವ ಕಚೇರಿಗಳು ಡೆಪ್ಯುಟಿ ಇನ್ಸೆ$³ಕ್ಟರ್ ಜನರಲ್ ಹುದ್ದೆಯ ಅಧಿಕಾರಿಯ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಿದ್ದರೆ, ಇನ್ನುಳಿದ ನಗರಗಳಲ್ಲಿರುವ ಕಚೇರಿಗಳಲ್ಲಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಯ ಅಧಿಕಾರಿಯ ನೇತೃತ್ವ ಇರಲಿದೆ.
ಇದನ್ನೂ ಓದಿ:ಶಬರಿಮಲೆಗೆ ಪಾದಯಾತ್ರೆ: ಬಂಟ್ವಾಳ ತಂಡದ ಜತೆ ಹೆಜ್ಜೆ ಹಾಕಿದ ದಾರಿಯಲ್ಲಿ ಸಿಕ್ಕ ಶ್ವಾನ !
ಆರು ಹೊಸ ಕಚೇರಿಗಳಿಗಾಗಿ 435 ಹುದ್ದೆಗಳನ್ನು ಹೊಸತಾಗಿ ಸೃಷ್ಟಿಸಬೇಕಾಗುತ್ತದೆ. ಬೆಂಗಳೂರು ಕಚೇರಿ ಸೇರಿದಂತೆ ಪ್ರತಿಯೊಂದು ಕಚೇರಿಯಲ್ಲಿ 70 ಸಿಬ್ಬಂದಿ ಮತ್ತು ಅಧಿಕಾರಿ ಹುದ್ದೆ ಸೃಷ್ಟಿಸಲು ಕೇಂದ್ರ ಗೃಹ ಸಚಿವಾಲಯ ವಿತ್ತ ಸಚಿವಾಲಯಕ್ಕೆ ಮನವಿ ಮಾಡಿತ್ತು. ಮನವಿ ಸ್ಪಂದಿಸಿದ ವಿತ್ತ ಸಚಿವಾಲಯ ಪ್ರತಿ ಕಚೇರಿಯಲ್ಲಿ 50 ಹುದ್ದೆಗಳ ಸೃಷ್ಟಿಗೆ ಅನುಮೋದನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ