ಹುಣಸೂರು: ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ,ಆಕ್ರೋಶ


Team Udayavani, Jan 6, 2022, 5:28 PM IST

1-sadadda

ಹುಣಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಮ್ಮುಖದಲ್ಲೇ ಸಂಸದ ಡಿ.ಕೆ.ಸುರೇಶ್ ಅಸಭ್ಯವಾಗಿ ವರ್ತಿಸಿರುವುದು ಅವರಿಗೆ ಶೋಭೆ ತರುವುದಿಲ್ಲವೆಂದು ತಾಲೂಕು ಬಿಜೆಪಿ ಅಧ್ಯಕ್ಷ ಹಳ್ಳದ ಕೊಪ್ಪಲು ನಾಗಣ್ಣ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸಂವಿದಾನ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ದ ಧಿಕ್ಕಾರ ಮೊಳಗಿಸಿ ಗಮನ ಸೆಳೆದರು.

ನಂತರ ಮಾತನಾಡಿದ ಬಿಜೆಪಿ ಅಧ್ಯಕ್ಷ ನಾಗಣ್ಣಗೌಡ ಸಂಸದ ಡಿ.ಕೆ.ಸುರೇಶ್ ರಾಮನಗರ ಜಿಲ್ಲೆಯ ಸಮಗ್ರ ಅಭಿವೃದ್ದಿ ಜೊತೆಗೆ ಅಂಬೇಡ್ಕರ್ ಪುತ್ಥಳಿ ಅನಾವರಣ ಸಮಾರಂಭದ ವೇಳೆ ಕಾರ್ಯಕರ್ತರನ್ನು ಎತ್ತಿಕಟ್ಟಿ ಗಲಾಟೆ ನಡೆಸಿದ್ದಲ್ಲದೆ ಸಂಸದನಾಗಿದ್ದೇನೆ ಎನ್ನುವುದನ್ನೇ ಮರೆತು ಅಸಭ್ಯರೀತಿಯಲ್ಲಿ ನಡೆದುಕೊಂಡು ಹುದ್ದೆಗೆ ಅವಮಾನ ಮಾಡಿದ್ದಾರೆ, ಸಂಸ್ಕೃತಿ , ಸಮಯ ಪ್ರಜ್ಞೆಯ ಅರಿವಿಲ್ಲದ ರಾಜಕಾರಣಿ ಸಂಸದ ಡಿ.ಕೆ.ಸುರೇಶ್ ಉದ್ದೇಶ ಪೂರ್ವಕವಾಗಿ ವೇದಿಕೆಯಲ್ಲಿ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಮುಖ್ಯವಂತ್ರಿಗಳಿರುವ ವೇದಿಕೆಗೆ ನಿಗದಿತ ಸಮಯಕ್ಕೂ ಆಗಮಿಸದೆ ಶಿಕ್ಷಾಚಾರ ಅನುಸರಿಸಿಲ್ಲವೆಂದು ಡಿ.ಸಿ.ಎಂ.ಡಾ.ಅಶ್ವತ್ಥನಾರಾಯಣ್ ವಿರುದ್ದ ಕಿಡಿಕಾರಲು ವೇದಿಕೆಯನ್ನು ಬಳಸಿಕೊಂಡು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಕಿಡಿ ಕಾರಿದರು.

ಹುಡಾ ಅಧ್ಯಕ್ಷ ಗಣೇಶ ಕುಮಾರಸ್ವಾಮಿ ಮಾತನಾಡಿ ಜನಪ್ರತಿನಿಧಿಯಾಗಿ ಸಾರ್ವಜನಿಕ ಸಭೆಗಳಲ್ಲಿ ಹೇಗೆ ನಡೆದುಕೊಳ್ಳಬೇಕೆಂಬ ಸಾಮಾನ್ಯ ಪ್ರಜ್ಞೆಯೂ ಇಲ್ಲದೆ ಗೂಂಡಾಗಿರಿ ನಡೆಸಿದ್ದಲ್ಲದೆ ಕಾರ್ಯಕರ್ತರನ್ನು ಎತ್ತಿಕಟ್ಟಿರುವುದು ಇಡೀ ರಾಜ್ಯದ ಜನತೆ ತಲೆ ತಗ್ಗಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಿನಾಮೆ ನೀಡಲಿ
ಸಹೋದರನ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಆ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗಾನಂದಕುಮಾರ್, ನಗರಸಭೆ ಸದಸ್ಯರಾದ ರಮೇಶ್, ಅರುಣ್ ಚೌವ್ಹಾಣ್, ಶ್ರೀನಿವಾಸ್, ಉಮೇಶ್, ಸಾಯಿನಾಥ್, ಮುಖಂಡರಾದ ನಾಗರಾಜಮಲ್ಲಾಡಿ, ನೀಮಾ ಶ್ರೀನಿವಾಸ್, ಕಮಲಮ್ಮ, ನೀಲು ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.