ಶ್ರೀರಂಗಪಟ್ಟಣ : ಅಪಘಾತದಲ್ಲಿ ಗಾಯಗೊಂಡಿದ್ದ ನಗುವನಹಳ್ಳಿ ವೆಂಕಟೇಶ್ ಇನ್ನಿಲ್ಲ
Team Udayavani, Jan 6, 2022, 6:45 PM IST
ಶ್ರೀರಂಗಪಟ್ಟಣ : ತಾಲ್ಲೂಕಿನ ನಗುವನಹಳ್ಳಿ ಗ್ರಾಮದ ಚೇರ್ಮನ್ ವೆಂಕಟೇಶ್ (70) ಗುರುವಾರ ನಿಧನ ಹೊಂದಿ ದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ
ಕಳೆದ 5 ದಿನಗಳ ಹಿಂದೆ ಪಟ್ಟಣದ ಹೆದ್ದಾರಿಯಲ್ಲಿ ಬೈಕ್ ಅಪಘಾತವಾಗಿ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.ಶುಕ್ರವಾರ 11 ಗಂಟೆಗೆ ಸ್ವಗ್ರಾಮ ನಗುವನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ.
ಶ್ರೀರಂಗಪಟ್ಟಣ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಮಂಡ್ಯ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಅವರು ಹಲವು ವರ್ಷಗಳ ಕಾಲ ಜೆಡಿಎಸ್ ಅಧ್ಯಕ್ಷರಾಗಿದ್ದರು, ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ,ಮಾಜಿ ಪ್ರಧಾನಿ ದೇವೇಗೌಡರ ಆಪ್ತರಲ್ಲಿ ಒಬ್ಬರಾಗಿದ್ದರು.
ವೆಂಕಟೇಶ್ ನಿಧನಕ್ಕೆ ಶಾಸಕ ರವೀಂದ್ರ ಶ್ರೀಕಂಠಯ್ಯ, ಸಂಸದೆ ಸುಮಲತಾ ಅಂಬರೀಶ್, ಮಾಜಿ ಶಾಸಕರಾದ ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ,ರಮೇಶ್ ಬಂಡಿಸಿದ್ದೇಗೌಡ, ಪಾರ್ವತಮ್ಮ ಶ್ರೀಕಂಠಯ್ಯ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಸ್.ಎಲ್.ಲಿಂಗರಾಜು, ವಕೀಲ ಎಂ ಪುಟ್ಟೇಗೌಡ, ಬಿಜೆಪಿ ಮುಖಂಡ ನಂಜುಂಡೇ ಗೌಡ,ಟಿ ಶ್ರೀಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ಜೆಡಿಎಸ್ ಅಧ್ಯಕ್ಷ ಮುಕುಂದ ಸೇರಿದಂತೆ ನಗುವನಹಳ್ಳಿ ಗ್ರಾಮಸ್ಥರು ಇತರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ