ಮುಖದ ಸೌಂದರ್ಯಕ್ಕೆ ಕಾಂತಿಯ ಹಲ್ಲುಗಳೇ ಭೂಷಣ

ಪುಟ್ಟ ವಯಸ್ಸಿನಲ್ಲಿ ಹಲ್ಲುಗಳಲ್ಲಿ ಹುಳುಕು ಉಂಟಾಗುವ ಸಾಧ್ಯತೆಗಳೇ ಹೆಚ್ಚು.

Team Udayavani, Jan 7, 2022, 4:51 PM IST

ಮುಖದ ಸೌಂದರ್ಯಕ್ಕೆ ಕಾಂತಿಯ ಹಲ್ಲುಗಳೇ ಭೂಷಣ

ಗದಗ: ಹಲ್ಲುಗಳ ಸ್ವಚ್ಛತೆ, ಸುರಕ್ಷತೆ ಯಿಂದ ಉತ್ತಮ ಆರೋಗ್ಯ ಪಡೆಯ ಬಹುದಾಗಿದೆ. ಮುಖದ ಸೌಂದರ್ಯಕ್ಕೆ ಕಾಂತಿಯುಕ್ತ ಹಲ್ಲುಗಳೇ ಭೂಷಣ ಎಂದು ಡಾ|ಆರ್‌.ಬಿ.ಉಪ್ಪಿನ ಅವರು ಹೇಳಿದರು.

ಗದಗ-ಬೆಟಗೇರಿ ರೋಟರಿ ಕ್ಲಬ್‌ ದಿಂದ ತಾಲೂಕಿನ ಹರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಉಚಿತ ದಂತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಟೂಥ್‌ಬ್ರಷ್‌ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಚಿಕ್ಕ ವಯಸ್ಸಿನಲ್ಲಿ ದಂತಗಳ ರಕ್ಷಣೆ ಅವಶ್ಯಕವಾಗಿದೆ. ಪುಟ್ಟ ವಯಸ್ಸಿನಲ್ಲಿ ಹಲ್ಲುಗಳಲ್ಲಿ ಹುಳುಕು ಉಂಟಾಗುವ ಸಾಧ್ಯತೆಗಳೇ ಹೆಚ್ಚು. ಅದನ್ನು ತಡೆಗಟ್ಟಲು ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ಹಾಗೂ ರಾತ್ರಿ ಮಲಗುವ ಮುನ್ನ ಹಲ್ಲುಗಳನ್ನು ಸ್ವಚ್ಛಗೊಳಿಸುವ ರೂಢಿ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಕ್ಲಬ್‌ ಅಧ್ಯಕ್ಷ ಅರವಿಂದಸಿಂಗ್‌ ಬ್ಯಾಳಿ, ರೋಟರಿ ಕ್ಲಬ್‌ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ಮಕ್ಕಳಿಗೆ ಹಲ್ಲುಗಳ ಸ್ವಚ್ಛತೆ, ಅವುಗಳ ಉಪಯೋಗ ಮುಂತಾದ ತಿಳಿವಳಿಕೆಯ ಕಾರ್ಯ ಕ್ರಮಗಳನ್ನು ಕ್ಲಬ್‌ ವತಿಯಿಂದ ಆಯೋಜನೆ ಮಾಡುತ್ತಿದ್ದು, ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಶಾಲಾ ಮುಖ್ಯೋಪಾಧ್ಯಾಯ ಕೆ.ಎಫ್‌.ಹಳಾಳ ಹಾಗೂ ಎಸ್‌.ಪಿ. ಹಿರೇಮಠ ಮಾತನಾಡಿ, ಮಕ್ಕಳು ಆರೋಗ್ಯದಿಂದಿರಲು ಸ್ವಚ್ಛತೆ, ಉತ್ತಮ ಆಹಾರ ಸೇವನೆ ಅವಶ್ಯಕವಾಗಿದೆ. ಅದರೊಂದಿಗೆ ಹಲ್ಲುಗಳ ರಕ್ಷಣೆ ಪ್ರಮುಖವಾಗಿದೆ. ಪ್ರತಿದಿನ ಊಟದ ಮೊದಲು ಹಾಗೂ ಊಟದ ನಂತರ ಹಲ್ಲು ಸ್ವಚ್ಛಗೊಳಿಸುವ ಪ್ರಕ್ರಿಯೆ ರೂಢಿಸಿಕೊಂಡರೆ ಆರೋಗ್ಯ ಉತ್ತಮವಾಗಿರುವುದರ ಜೊತೆಗೆ ಹಲ್ಲುಗಳು ಹುಳುಕಿನ ಬಾಧೆಯಿಂದ ರಕ್ಷಣೆಗೊಳ್ಳುತ್ತವೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇದೇ ವೇಳೆ ಶಾಲಾ ಮಕ್ಕಳ ದಂತ ತಪಾಸಣಾ ಶಿಬಿರ ನಡೆಯಿತು. ರೊಟೇರಿಯನ್‌ ಎಸ್‌.ಎಸ್‌. ಹೊಸಳ್ಳಿಮಠ, ಜಿ.ಎಂ.ಅಣ್ಣಿಗೇರಿ, ಸಿ.ಎಸ್‌.ಬಾರಿಗಿಡದ, ಹಾಗೂ ಶಿಕ್ಷಕರಾದ ಟಿ.ಎಸ್‌.ಬಡ್ನಿ, ಆರ್‌. ಕೆ.ಕುದರಿಯವರ, ಸುವಾಸಿನಿ ಬಿರಾದಾರ, ವಿ.ಎಚ್‌.ಬಿಂಕದಕಟ್ಟಿ, ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು. ಎಚ್‌.ಎಚ್‌.ಹಳ್ಳಿಕೇರಿ ಸ್ವಾಗತಿಸಿ, ಕ್ಲಸ್ಟರ್‌ ಸಿಆರ್‌ಪಿ ಐ.ಎ.ಗಾಡಗೋಳಿ ನಿರೂಪಿಸಿ, ವಿ.ಆರ್‌.ಕೇರಿ ವಂದಿಸಿದರು.

ಟಾಪ್ ನ್ಯೂಸ್

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.