ಉತ್ತರ ಪ್ರದೇಶ: ಚುನಾವಣಾ ಸಿದ್ದತೆ ಸಭೆ ನಡೆಸಿದ ಸಚಿವೆ ಶೋಭಾ ಕರಂದ್ಲಾಜೆ
ಉತ್ತರದ ಚುನಾವಣಾ ಕಣದಲ್ಲಿ ದಕ್ಷಿಣದ ಮಹಿಳೆ
Team Udayavani, Jan 8, 2022, 5:24 PM IST
ಬೆಂಗಳೂರು: ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉತ್ತರ ಪ್ರದೇಶ ಚುನಾವಣಾ ಸಹ ಉಸ್ತುವಾರಿ ಜವಾಬ್ದಾರಿಯನ್ನೂ ಹೊಂದಿರುವ ಹಿನ್ನೆಲೆಯಲ್ಲಿ ಲಖಿಂಪುರದಲ್ಲಿ ಸಿದ್ಧತಾ ಸಭೆ ನಡೆಸಿದರು.
ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳಿಗೆ ಆಯೋಗ ದಿನಾಂಕ ನಿಗದಿ ಮಾಡುವುದಕ್ಕೂ ಕೆಲ ಗಂಟೆಗಳಿಗೆ ಮುನ್ನ ಈ ಸಭೆ ನಡೆಯಿತು. ಚುನಾವಣೆಗೆ ಜಿಲ್ಲಾವಾರು ತಂತ್ರಗಾರಿಕೆ ನಡೆಸುವುದು ಸೇರಿದಂತೆ ಮಹತ್ವ ದ ವಿಚಾರಗಳಿಗೆ ಚಾಲನೆ ನೀಡುವ ಉದ್ದೇಶದಿಂದ ಈ ಸಭೆ ನಡೆಸಲಾಯಿತು.
ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾದ ಕೆಲವೇ ದಿನದಲ್ಲಿ ಶೋಭಾ ಕರಂದ್ಲಾಜೆ ಅವರನ್ನು ಉತ್ತರ ಪ್ರದೇಶ ಚುನಾವಣಾ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿತ್ತು. ಕಳೆದ ಕೆಲ ತಿಂಗಳಿಂದ ಶೋಭಾ ಕರಂದ್ಲಾಜೆ ಉತ್ತರ ಪ್ರದೇಶ ದಲ್ಲಿ ಸಂಘಟನಾತ್ಮಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ವರೆಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ಶೋಭಾ ಕರಂದ್ಲಾಜೆ ಉತ್ತರದ ರಾಜಕೀಯದಲ್ಲಿ ಬ್ಯುಸಿಯಾಗಲಿದ್ದಾರೆ. ಉತ್ತರ ಪ್ರದೇಶದಂತ ದೊಡ್ಡ ರಾಜ್ಯದ ಚುನಾವಣಾ ಸಹ ಉಸ್ತುವಾರಿಯಾಗಿ ತಂತ್ರಗಾರಿಕೆ ನಡೆಸುವ ಕರ್ನಾಟಕದ ಮೊದಲ ಮಹಿಳಾ ರಾಜಕಾರಣಿ ಶೋಭಾ ಕರಂದ್ಲಾಜೆ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು