ವೀಕೆಂಡ್ ಕರ್ಪ್ಯೂ: ನಿಗದಿತ ಪ್ರಯಾಣಿಕರಾಗದೇ ಮುಂದೆ ಹೋಗದ ಬಸ್ಸುಗಳು
Team Udayavani, Jan 8, 2022, 5:48 PM IST
ದಾಂಡೇಲಿ: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ವೀಕೆಂಡ್ ಕರ್ಪ್ಯೂವನ್ನು ಜಾರಿಗೊಳಿಸಿದ್ದು, ದಾಂಡೇಲಿಯಲ್ಲಿ ವೀಕೆಂಡ್ ಕರ್ಪ್ಯೂ ಕಟ್ಟಿನಿಟ್ಟಿನಿಂದ ಜಾರಿಯಲ್ಲಿದೆ. ಈ ನಡುವೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿಗಾಗಿ ಕಾಯುವ ಸ್ಥಿತಿ ನಿರ್ಮಾಣವಾದರೇ, ಇನ್ನೂ ಸಾರಿಗೆ ಸಿಬ್ಬಂದಿಗಳು ನಿಗಧಿತ ಸಂಖ್ಯೆಯ ಪ್ರಯಾಣಿಕರಿಗಾಗಿ ಕಾಯುವಂತಾಗಿದೆ.
ಪರಿಣಾಮವಾಗಿ ನಗರದ ಬಸ್ ನಿಲ್ದಾಣದಿಂದ ಬಸ್ಸುಗಳು ಮುಂದೆ ಹೋಗದೇ ಪ್ರಯಾಣಿಕರಿಗಾಗಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಮಾಹಿತಿಯ ಪ್ರಕಾರ ಒಂದು ಬಸ್ಸಿನಲ್ಲಿ 30 ಪ್ರಯಾಣಿಕರನ್ನು ಕರೆದುಕೊಂಡು ಹೋಗಬೇಕಾಗಿರುವುದರಿಂದ ಅಷ್ಟೊಂದು ಸಂಖ್ಯೆಯಲ್ಲಿ ಆಯಾಯ ಬಸ್ಸಿಗೆ ಪ್ರಯಾಣಿಕರು ಆಗುತ್ತಿಲ್ಲ. ಆ ಕಾರಣದಿಂದ ನಿಗದಿತ ಸಮಯಕ್ಕೆ ಬಸ್ ಬಿಡಲಾಗುತ್ತಿಲ್ಲ. ಇದರಿಂದ ಬಸ್ ನಿಲ್ದಾಣಕ್ಕೆ ಬಂದಿರುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
ಇನ್ನೂ ಸಾರ್ವಜನಿಕರು ಸಹ ವೀಕೆಂಡ್ ಕರ್ಪ್ಯೂ ಸಮಯದಲ್ಲಿ ಹೊರಗಡೆ ಹೋಗುವುದನ್ನು ಮುಂದೂಡುವುದೇ ಒಳಿತೆಂಬ ಮಾತು ಕೇಳಿಬರುತ್ತಿದೆ. ಜೋಯಿಡಾದ ರಾಮನಗರ ಬಸ್ ನಿಲ್ದಾಣದಿಂದ ಬಂದಿರುವ ಬಸ್ಸಿನಲ್ಲಿ ಒಬ್ಬನೆ ಒಬ್ಬ ಪ್ರಯಾಣಿಕ ಬಂದಿರುವುದು ವಿಶೇಷವಾಗಿತ್ತು. 30 ಕ್ಕಿಂತ ಕಡಿಮೆ ಪ್ರಯಾಣಿಕರಿದ್ದಲ್ಲಿ ಬಸ್ ಹೋಗುವುದಾದರೂ ಹೇಗೆ, ನಷ್ಟದಲ್ಲಿ ಹೋಗಬೇಕಾದ ಸ್ಥಿತಿ ಇದೆ.
ಸಾರಿಗೆ ಬಸ್ಸುಗಳ ಚಾಲಕರು, ನಿರ್ವಾಹಕರು ಮಾತ್ರ ಕರ್ತವ್ಯಕ್ಕೆ ಅಣಿಯಾಗಿದ್ದಾರೆ. ನಿಗಧಿತ ಸಂಖ್ಯೆಯ ಪ್ರಯಾಣಿಕರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಇನ್ನೂ ಬಂದಿರುವ ಪ್ರಯಾಣಿಕರು ಬಸ್ಸು ಬಿಡುವುದಕ್ಕಾಗಿ ಕಾಯುತ್ತಿದ್ದಾರೆ. ಒಟ್ಟಿನಲ್ಲಿ ಅತ್ತ ಸಾರಿಗೆ ಸಿಬ್ಬಂದಿಗಳಲ್ಲಿ ಮತ್ತು ಇತ್ತ ಪ್ರಯಾಣಿಕರಲ್ಲಿ ಗೊಂದಲ ಏರ್ಪಟ್ಟಿರುವುದಂತು ನಿಜ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ