ಪಂಚರಾಜ್ಯ ಚುನಾವಣೆ: ಕೇಂದ್ರ ಬಜೆಟ್ ಮಂಡನೆಯಲ್ಲಿ ಹಸ್ತಕ್ಷೇಪವಿಲ್ಲ; ಸಿಇಸಿ
Team Udayavani, Jan 8, 2022, 8:39 PM IST
ನವದೆಹಲಿ: ಕೇಂದ್ರ ಬಜೆಟ್ ಮಂಡನೆಯಲ್ಲಿ ಮಧ್ಯಪ್ರವೇಶಿಸಲು ಆಯೋಗ ಬಯಸುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುಶೀಲ್ ಚಂದ್ರ ಶನಿವಾರ ಹೇಳಿದ್ದಾರೆ.
ವಾರ್ಷಿಕ ಬಜೆಟ್ ಐದು ರಾಜ್ಯಗಳ ಚುನಾವಣೆಯ ಸಮಯದಲ್ಲಿ ಪಕ್ಷಗಳ ಚುನಾವಣಾ ಕಣಕ್ಕೆ ಅಡ್ಡಿಯಾಗುವುದಿಲ್ಲ ಎಂದು ಸುಶೀಲ್ ಚಂದ್ರ ಪ್ರತಿಪಾದಿಸಿದ್ದಾರೆ.
ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾದರೆ, ಅದಕ್ಕೂ ಮೊದಲು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಅಧ್ಯಕ್ಷರ ಭಾಷಣವು ಚುನಾವಣೆಗೆ ಅಡ್ಡಿಪಡಿಸುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಇಸಿ, ಕೇಂದ್ರ ಬಜೆಟ್ ಸಂಸತ್ತಿನ ಮುಂದೆ ಇಡಬೇಕಾದ ವಾರ್ಷಿಕ ಹೇಳಿಕೆಯಾಗಿದೆ.ಚುನಾವಣಾ ಆಯೋಗವು ಬಜೆಟ್ ಮಂಡನೆಯಲ್ಲಿ ಹಸ್ತಕ್ಷೇಪ ಮಾಡಲು ಇಷ್ಟಪಡುವುದಿಲ್ಲ ಏಕೆಂದರೆ ಅದು ಇಡೀ ದೇಶಕ್ಕೆ ಸೀಮಿತವಾಗಿದ್ದು ಐದು ರಾಜ್ಯಗಳಿಗೆ ಮಾತ್ರ ಸೀಮಿತವಾಗಿಲ್ಲ ಎಂದು ಹೇಳಿದರು.
ಬಜೆಟ್, ವೆಚ್ಚ ಮತ್ತು ಆದಾಯದ ಹೇಳಿಕೆಯಾಗಿದೆ ಎಂದು ಪ್ರತಿಪಾದಿಸಿದ ಚುನಾವಣಾ ಆಯುಕ್ತರು ,ಚುನಾವಣಾ ಕಣಕ್ಕೆ ಹೇಗೆ ತೊಂದರೆಗೊಳಗಾಗುತ್ತದೆ? ತೊಂದರೆಯಾಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಸಂಸತ್ ಅಧಿವೇಶನ ನಡೆಯುವ ಸಾಧ್ಯತೆ ಇದೆ. ಬಜೆಟ್ ಅಧಿವೇಶನದ ದಿನಾಂಕಗಳು ಇನ್ನಷ್ಟೇ ಪ್ರಕಟವಾಗಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು