ಅರಳುವ ಹೆಮ್ಮಾಡಿ ಸೇವಂತಿಗೆ ಕಮರುವ ಭೀತಿ!

ಜಾತ್ರೆಗಳಿಗೆ ನಿರ್ಬಂಧ: ಬೆಳೆಗಾರರಿಗೆ ಬರೆ;  ಋತುವಿನ ಆರಂಭದಲ್ಲೇ ದೊಡ್ಡ ಹೊಡೆತ

Team Udayavani, Jan 9, 2022, 7:50 AM IST

ಅರಳುವ ಹೆಮ್ಮಾಡಿ ಸೇವಂತಿಗೆ ಕಮರುವ ಭೀತಿ!

ಕುಂದಾಪುರ: ಎರಡು ವರ್ಷಗಳಿಂದ ಲಾಕ್‌ಡೌನ್‌, ನೆರೆ, ಅತಿವೃಷ್ಟಿಯಿಂದ ಸಂಕಷ್ಟ ಅನುಭವಿಸಿದ್ದ ಹೆಮ್ಮಾಡಿಯ ಸೇವಂತಿಗೆ ಬೆಳೆಗಾರ ರಿಗೆ ಈ ಬಾರಿಯೂ ಕೊರೊನಾ ಗಾಯದ ಮೇಲೆ ಬರೆ ಎಳೆದಿದೆ.

ಕೊಯ್ಲು ಆರಂಭವಾಗುವಷ್ಟರಲ್ಲೇ ವಾರ್ಷಿಕ ಕೆಂಡ, ಉತ್ಸವಗಳಿಗೆ ನಿರ್ಬಂಧ ಹೇರಲಾಗಿದ್ದು, ಹೂಗಳನ್ನು ವಿಲೇವಾರಿ ಮಾಡಲಾರದೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ.

ಹೆಮ್ಮಾಡಿ ಪರಿಸರದಲ್ಲಿ ಮಾತ್ರ ಬೆಳೆಯುವ ಸೇವಂತಿಗೆ ಬಹುಪಾಲು ವ್ಯಾಪಾರವಾಗುವುದು ಮಕರ ಸಂಕ್ರಾಂತಿ ಸಮಯದಲ್ಲಿ ನಡೆಯವ ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರನ ಜಾತ್ರೆ ಯಲ್ಲಿ. ಈ ಬಾರಿ ವಾರಾಂತ್ಯ ಕರ್ಫ್ಯೂ, ರಾತ್ರಿ ಕರ್ಫ್ಯೂ ವಿಧಿಸಲಾಗಿರುವುದರಿಂದ ಸರಳ ಆಚರಣೆ ನಡೆಯಲಿದೆ. ಇದರಿಂದಾಗಿ ಹೂವಿನ ವ್ಯಾಪಾರಕ್ಕೆ ಪೆಟ್ಟು ಬೀಳಲಿದೆ.

3 ತಿಂಗಳು ಮಾತ್ರ ವಹಿವಾಟು
ಹೆಮ್ಮಾಡಿ, ಕನ್ಯಾನ ಮತ್ತು ಕಟ್‌ಬೆಲೂ¤ರು ಗ್ರಾಮಗಳ 22 ಎಕರೆಯಲ್ಲಿ 60 ರೈತರು ಹೆಮ್ಮಾಡಿ ಸೇವಂತಿಗೆ ಬೆಳೆಯುತ್ತಾರೆ. ಪ್ರತೀ ವರ್ಷ ಜ. 3ರ ಬಸ್ರೂರು ದೇವಿ ದೇವಸ್ಥಾನದ ಹಬ್ಬದಿಂದ ಆರಂಭಗೊಂಡು ಮಾರ್ಚ್‌ ಕೊನೆಯ ಅಸೋಡು ಹಬ್ಬದವರೆಗೂ ದಿನಕ್ಕೆರಡು ಜಾತ್ರೆ, ಕೆಂಡೋತ್ಸವಗಳಿಗೆ ಸೇವಂತಿಗೆ ಹೂವಿಗೆ ಬೇಡಿಕೆ ಯಿರುತ್ತದೆ. ಈ ಬಾರಿ ಋತುವಿನ ಆರಂಭದಲ್ಲೇ ದೊಡ್ಡ ಹೊಡೆತ ಬಿದ್ದಿದೆ.

ಹೂವನ್ನು ಏನು ಮಾಡಲಿ?
ಅನೇಕ ವರ್ಷಗಳಿಂದ ಸೇವಂತಿಗೆ ಬೆಳೆಯು ತ್ತಿದ್ದು, ಜನವರಿ ಮೊದಲ ವಾರದಿಂದ ಕೊçಲು ಆರಂಭವಾಗಿ ಮಾರ್ಚ್‌ವರೆಗೆ ಇರುತ್ತದೆ.

ಮಾರಣಕಟ್ಟೆ ಹಬ್ಬದಲ್ಲಿ ಹೆಚ್ಚು ಹೂವು ಬೆಳೆದವರಿಗೆ ಕನಿಷ್ಠ 1 ಲಕ್ಷದಿಂದ 2.5. ಲಕ್ಷ ರೂ. ವರೆಗೂ ವ್ಯಾಪಾರ ಕುದುರುತ್ತದೆ. ಇನ್ನುಳಿದ ಜಾತ್ರೆ, ಕೆಂಡಗಳಲ್ಲಿ 10 ಸಾವಿರದಿಂದ 50 ಸಾವಿರ ರೂ. ವರೆಗೆ ನಿತ್ಯ ವಹಿವಾಟು ಆಗುತ್ತದೆ. ಕೊಯ್ಲು  ವೇಳೆಗೇ ಸರಕಾರ ಹಬ್ಬಗಳಿಗೆ ನಿರ್ಬಂಧ ವಿಧಿಸಿದರೆ ಬೆಳೆದ ಹೂವನ್ನು ಏನು ಮಾಡುವುದು ಎಂದು ಬೆಳೆಗಾರ ಪ್ರಶಾಂತ್‌ ಭಂಡಾರಿ ಪ್ರಶ್ನಿಸಿದ್ದಾರೆ.

ಶಾಸಕರಿಗೆ ಮನವಿ
ಉತ್ಸವ, ಜಾತ್ರೆ ಇತ್ಯಾದಿಗಳಿಗೆ ವಿಧಿಸಿರುವ ನಿರ್ಬಂಧಗಳನ್ನು ಕರಾವಳಿ ಭಾಗಕ್ಕಾದರೂ ಸ್ವಲ್ಪ ಮಟ್ಟಿಗೆ ಸಡಿಲಿಸು ವಂತೆ ಸರಕಾರದ ಗಮನಕ್ಕೆ ತರುವುದಾಗಿ ಶುಕ್ರವಾರ ಬೆಳೆಗಾರರ ಸಂಘದ ವತಿಯಿಂದ ಮನವಿ ಸ್ವೀಕರಿಸಿದ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಭರವಸೆ ನೀಡಿದರು.

ಕೈಗೆ ಬಂದ ತುತ್ತು..
ಈ ಬಾರಿ ಪೂರಕ ಹವಾಮಾನದಿಂದಾಗಿ ಸೇವಂತಿಗೆ ಇಳುವರಿ ಉತ್ತಮವಾಗಿದೆ. ಆದರೆ ಕೈಗೆ ಬಂದ ತುತ್ತು ಬಾಯಿಗೆ ಇಲ್ಲ ಎಂಬ ಪರಿಸ್ಥಿತಿ ಬೆಳೆಗಾರರದ್ದು !

ಬದುಕೇ ನಾಶ
ಧಾರ್ಮಿಕ ಉತ್ಸವಗಳನ್ನೇ ನಂಬಿ ಸೇವಂತಿಗೆ ಬೆಳೆಯುವವರು ನಾವು. ಕೊಯ್ಲುನ ವೇಳೆಗೆ ನಿರ್ಬಂಧ ವಿಧಿಸುವುದೆಂದರೆ ವರ್ಷ ಪೂರ್ತಿ ಶ್ರಮಿಸಿ ಬೆಳೆದ ಹೂವು ಕಮರುವುದರೊಂದಿಗೆ ನಮ್ಮ ಬದುಕೇ ನಾಶವಾದಂತೆ. ಸರಕಾರ ನಮ್ಮ ಹಿತವನ್ನೂ ಗಮನಿಸಬೇಕು. ಇಲ್ಲದೇ ಹೋದರೆ ಕಾಯಬೇಕಾಗಿರುವ ಸರಕಾರವೇ ನಮ್ಮ ಬದುಕಿಗೆ ಕೊಳ್ಳಿ ಇಟ್ಟಂತೆ.
– ಮಹಾಬಲ ದೇವಾಡಿಗ, ಹೆಮ್ಮಾಡಿ ಸೇವಂತಿಗೆ ಬೆಳೆಗಾರರ ಸಂಘದ ಅಧ್ಯಕ್ಷ

 

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.