ಅನಾಥರ ಆಶಾಕಿರಣ “ಕಾರುಣ್ಯಧಾಮ”


Team Udayavani, Jan 9, 2022, 5:51 PM IST

20sindhanuru

ಸಿಂಧನೂರು: ಇಲ್ಲಿನ ಕುಷ್ಟಗಿ ರಸ್ತೆಯ ಬಾಡಿಗೆ ಶೆಡ್‌ವೊಂದರಲ್ಲಿ ತಲೆ ಎತ್ತಿದ ಆಶ್ರಮ ಮೂರೇ ವರ್ಷದಲ್ಲಿ ವೃದ್ಧರು, ಬುದ್ಧಿಮಾಂದ್ಯರಿಗೆ ಆಶ್ರಯ ನೀಡುವ ಮೂಲಕ ಅನಾಥರ ಪಾಲಿಗೆ ಆಶಾಕಿರಣವಾಗಿದೆ.

ತಾಲೂಕಿನ ಹರೇಟನೂರು ಗ್ರಾಮದ ಶ್ರೀಮಠ ಸೇವಾ ಟ್ರಸ್ಟ್‌ನ ಮೂಲಕ ನಡೆಯುತ್ತಿರುವ ಕಾರುಣ್ಯನೆಲೆ ವೃದ್ಧಾಶ್ರಮ ನೊಂದವರ ಬಾಳಿಗೆ ಬೆಳಕಾಗಿದೆ. ಹರೇಟನೂರು ಗ್ರಾಮದ ಅಮರಯ್ಯ ಸ್ವಾಮಿ ಹಿರೇಮಠ ಹಾಗೂ ಅವರ ಸೊಸೆ ಸುಜಾತ ಹಿರೇಮಠ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದವರು. ಜನರೊಂದಿಗೆ ಬೆರೆತು ಕೆಲಸ ಮಾಡಿದ ಹಿನ್ನೆಲೆಯುಳ್ಳ ಇದೇ ಕುಟುಂಬದ ಮೂಲಕ “ಕಾರುಣ್ಯಾಶ್ರಮ’ 52 ಜನರಿಗೆ ವಸತಿ ಕಲ್ಪಿಸುವ ಮಟ್ಟಿಗೆ ಬೆಳೆದಿದೆ.

ನೊಂದವರಿಗೆ ಬೆಳಕು

3 ವರ್ಷದ ಹಿಂದೆ ಸ್ಥಾಪನೆಯಾದ ಕಾರುಣ್ಯಾಶ್ರಮದಲ್ಲಿ ನೆಲೆ ಪಡೆದವರ ಪೈಕಿ 28 ಜನ ಮತ್ತೆ ತಮ್ಮ ಕುಟುಂಬದ ಮಡಿಲು ಸೇರಿದ್ದಾರೆ. ಪಾಲಕರನ್ನು ಸಂಪರ್ಕಿಸಿ ಅವರ ಮನವೊಲಿಸಿ ಕಳುಹಿಸುವ ಪ್ರಯತ್ನವೂ ಯಶಸ್ಸು ಕಂಡಿದೆ.

ದಾನಿಗಳೇ ಶಕ್ತಿ

ಕುಷ್ಟಗಿ ರಸ್ತೆಯಲ್ಲಿ ಟೆಂಟ್‌ವೊಂದನ್ನು ಬಾಡಿಗೆ ಪಡೆದಿದ್ದಾರೆ. ಇದಕ್ಕೆ ತಿಂಗಳಿಗೆ 15 ಸಾವಿರ ರೂ. ಬಾಡಿಗೆ, ತಿಂಗಳಿಗೆ 85 ಸಾವಿರ ರೂ. ಖರ್ಚು ಬರುತ್ತಿದೆ. ಇದನ್ನೆಲ್ಲ ದಾನಿಗಳ ನೆರವಿನಿಂದಲೇ ಭರಿಸಲಾಗುತ್ತಿದೆ ಎನ್ನುತ್ತಾರೆ ಕಾರುಣ್ಯಾಶ್ರಮದ ಆಡಳಿತಾಧಿಕಾರಿ.

ಆರಂಭದಲ್ಲಿ ಹಳ್ಳಿಗಳಿಗೆ ಸುತ್ತಾಡಿ ದಾನಿಗಳ ನೆರವು ಪಡೆಯಲಾಗುತ್ತಿತ್ತು. ಇದೀಗ ಜನರೇ ಬಂದು ವೃದ್ಧರಿಗೆ ಊಟೋಪಚಾರ ಖರ್ಚು, ಅಗತ್ಯ ಸಾಮಗ್ರಿ ಕೊಡಿಸುವಲ್ಲಿ ಕೈ ಜೋಡಿಸಿದ್ದಾರೆ. 7 ಜನ ಸಿಬ್ಬಂದಿ ನೇಮಿಸಿದ್ದು, ದಿನದ 24 ಗಂಟೆಯಲ್ಲಿ ನಿರ್ಗತಿಕರು, ಅನಾಥರು ಆಶ್ರಯ ಬಯಸಿ ಹೋದರೆ ಅವರಿಗೆ ವಸತಿ, ಊಟದ ವ್ಯವಸ್ಥೆ ಕಲ್ಪಿಸುವ ಕೆಲಸ ನಿರಂತರ ಇಲ್ಲಿ ಸಾಗಿದೆ.

ನಿರ್ಗತಿಕರ ಅಂತ್ಯಸಂಸ್ಕಾರ ಇದುವರೆಗೆ ಆಶ್ರಮದಲ್ಲಿ ಆಶ್ರಯ ಪಡೆದವರ ಪೈಕಿ ವಯೋವೃದ್ಧ, ಬುದ್ಧಿಮಾಂದ್ಯ 13 ಜನ ಮೃತಪಟ್ಟಿದ್ದಾರೆ. ಸಂಘ-ಸಂಸ್ಥೆ ನೆರವಿನ ಮೂಲಕ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಜೀವಸ್ಪಂದನಾ ಸಂಸ್ಥೆ ಅವಿನಾಶ್‌ ದೇಶಪಾಂಡೆ, ಅಕ್ಷಯ ಆಹಾರ ಜೋಳಿಗೆ ಟ್ರಸ್ಟ್‌ ಕಾರ್ಯದರ್ಶಿ ಅಶೋಕ ನಲ್ಲಾ, ಯುವಶಕ್ತಿ ಟ್ರಸ್ಟ್‌ನ ಅಧ್ಯಕ್ಷ ಸಂತೋಷ್‌ ಅಂಗಡಿ ಸೇರಿದಂತೆ ಅನೇಕರು ಆಶ್ರಮದ ಸೇವಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ.

ಪುಟ್ಟರಾಜರು ಅನೇಕರಿಗೆ ಸೇವೆ ಮಾಡಿದ್ದರು. ನಮ್ಮ ಶ್ರೀಮಠದ ಮೂಲಕವೂ ನೊಂದವರಿಗೆ ನೆರವಾಗಲು ಆಶ್ರಮ ಆರಂಭಿಸಿದ್ದು, ಜನರಿಗಾಗಿ ಏನಾದರೂ ಮಾಡಬೇಕೆಂಬ ಸಂಕಲ್ಪವೇ ಕಾರಣ. -ಅಮರಯ್ಯಸ್ವಾಮಿ ಹರೇಟನೂರು, ಅಧ್ಯಕ್ಷರು, ಕಾರುಣ್ಯಾಶ್ರಮ.

ಪುಟ್ಟರಾಜ ಗವಾಯಿಗಳು ಮಾಡಿದ್ದ ಸೇವೆಯೇ ನನಗೆ ಮಾರ್ಗದರ್ಶನ. ಕಷ್ಟ ಬಂದರೆ ನನಗೆ ಪಿತ್ರಾರ್ಜಿತವಾಗಿ ಬಂದ 9 ಎಕರೆ ಭೂಮಿಯ ಆದಾಯವನ್ನು ವ್ಯಯಿಸಿಯಾದರೂ ಈ ಆಶ್ರಮ ಮುನ್ನಡೆಸುತ್ತೇನೆ. -ಚನ್ನಬಸವಸ್ವಾಮಿ, ಆಡಳಿತಾಧಿಕಾರಿ, ಕಾರುಣ್ಯಾಶ್ರಮ

-ಯಮನಪ್ಪ ಪವಾರ

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.