ಸಂಪುಟಕ್ಕೆ ಚುನಾವಣೆ ರಕ್ಷೆ; ಉ.ಪ್ರದೇಶ ಫ‌ಲಿತಾಂಶ ಆಧರಿಸಿ ರಾಜ್ಯದಲ್ಲೂ ಬದಲಾವಣೆ?


Team Udayavani, Jan 10, 2022, 7:05 AM IST

ಸಂಪುಟಕ್ಕೆ ಚುನಾವಣೆ ರಕ್ಷೆ; ಉ.ಪ್ರದೇಶ ಫ‌ಲಿತಾಂಶ ಆಧರಿಸಿ ರಾಜ್ಯದಲ್ಲೂ ಬದಲಾವಣೆ?

ಬೆಂಗಳೂರು: ದೇಶದಲ್ಲಿ ಪಂಚರಾಜ್ಯಗಳ ಚುನಾವಣೆ ಘೋಷಣೆ ಆಗಿರುವುದರಿಂದ ಫ‌ಲಿತಾಂಶ ಬರುವವರೆಗೂ ರಾಜ್ಯ ಸಚಿವ ಸಂಪುಟ ಪುನಾರಚನೆ ಅನುಮಾನವಾಗಿದೆ. ಹೀಗಾಗಿ 2023ರ ಚುನಾವಣೆಗೆ ಎಲೆಕ್ಷನ್‌ ಕ್ಯಾಬಿನೆಟ್‌ ರಚಿಸಬೇಕು ಎಂಬ ಸಚಿವಾಕಾಂಕ್ಷಿಗಳ ಆಗ್ರಹದ ಈಡೇರಿಕೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.

2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಉತ್ತರ ಪ್ರದೇಶದ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ಪಕ್ಷದ ರಾಷ್ಟ್ರೀಯ ನಾಯಕರು ಈ ಚುನಾವಣೆಯ ಕಡೆಗೆ ಹೆಚ್ಚಿನ ಗಮನ ಹರಿಸಿದ್ದಾರೆ. ಫ‌ಲಿತಾಂಶ ಬರುವ ವರೆಗೂ ಬೇರೆ ರಾಜ್ಯಗಳ ರಾಜಕೀಯ ಬದಲಾವಣೆಗಳ ಬಗ್ಗೆ ಬಿಜೆಪಿ ವರಿಷ್ಠರು ಹೆಚ್ಚಿನ ಗಮನ ನೀಡುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇಲ್ಲಿನ ಫ‌ಲಿತಾಂಶ ಯಾವ ರೀತಿ ಬರುತ್ತದೆ ಎನ್ನುವ ಬಗ್ಗೆಯೂ ಬಿಜೆಪಿ ವರಿಷ್ಠರು ಕಾಯುತ್ತಿದ್ದಾರೆ. ಅದರ ಆಧಾರದ ಮೇಲೆ ಇತರ ರಾಜ್ಯಗಳಲ್ಲಿ ಪಕ್ಷದ ಸಂಘಟನೆ ಮತ್ತು ಸರಕಾರದಲ್ಲಿ ಬದಲಾವಣೆಗಳು ಆಗಬೇಕಾಗಿದ್ದರೂ ಅನಂತರವೇ ಕೈಗೆತ್ತಿಕೊಳ್ಳುವ ಸಾಧ್ಯತೆ ಬಗ್ಗೆ ಚರ್ಚೆಯಾಗುತ್ತಿದೆ.

ಬಜೆಟ್‌ವರೆಗೂ ಅನುಮಾನ
ಸಂಕ್ರಾಂತಿಯ ಅನಂತರ ಸಂಪುಟ ಪುನಾರಚನೆ ಆಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಸಚಿವಾಕಾಂಕ್ಷಿಗಳು ಸಂಪುಟ ಸೇರಲು ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದಲ್ಲಿ ಸ್ವಾಮೀಜಿಗಳು ಹಾಗೂ ಸಮುದಾಯದ ನಾಯಕರ ಮೂಲಕ ಒತ್ತಡ ಹೇರುವ ಕಸರತ್ತನ್ನು ತೆರೆಮರೆಯಲ್ಲಿ ನಡೆಸುತ್ತಿದ್ದಾರೆ.

ಸಂಪುಟದಲ್ಲಿ 4 ಸ್ಥಾನಗಳು ಖಾಲಿ ಇದ್ದು, ಅದರ ಜತೆಗೆ ಕೆಲವು ಹಿರಿಯ ಸಚಿವರನ್ನು ಕೈ ಬಿಟ್ಟು ಪಕ್ಷ ಸಂಘಟನೆಗೆ ಬಳಸಿಕೊಂಡು ಹೊಸಬರಿಗೆ ಅವಕಾಶ ಕೊಡಬೇಕೆಂಬ ಬೇಡಿಕೆ ಇದೆ. ಪಕ್ಷದ ನಾಯಕರಲ್ಲಿಯೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಆದರೆ ಈಗ ಪಂಚರಾಜ್ಯಗಳ ಚುನಾವಣೆ ಘೋಷಣೆ ಆಗಿರುವುದರಿಂದ ಇನ್ನು ಎರಡು ತಿಂಗಳು ಸಂಪುಟ ಪುನಾರಚನೆಗೆ ಮತ್ತೆ ಮೋಡ ಕವಿದಂತಾಗಿದ್ದು, ಆಕಾಂಕ್ಷಿಗಳಿಗೆ ನಿರಾಸೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಕೂಡ ಬಜೆಟ್‌ ಸಿದ್ಧತೆ ಬಗ್ಗೆ ಗಮನಹರಿಸಲಿರುವುದರಿಂದ ಬದಲಾ ವಣೆಯತ್ತ ಮನಸ್ಸು ಮಾಡುವುದು ಅಸಾಧ್ಯ ಎನ್ನಲಾಗುತ್ತಿದೆ.

ಇದನ್ನೂ ಓದಿ:ಹಿಮವರ್ಷ : ರಾಜ್ಯದ 400ಕ್ಕೂ ಅಧಿಕ ಪ್ರಮುಖ ರಸ್ತೆಗಳು ಬಂದ್‌

ಸಚಿವರು ನಿರಾಳ?
ಸೋಂಕಿನ ನಿಯಂತ್ರಣಕ್ಕಾಗಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ರುವುದರಿಂದ ಜ. 7ರಿಂದ 9ರ ವರೆಗೆ ನಡೆಯಬೇಕಾಗಿದ್ದ ಚಿಂತನ ಬೈಠಕ್‌ ಮುಂದೂಡಿಕೆಯಾಗಿದೆ. ಹೊಸ ದಿನಾಂಕ ನಿಗದಿಯಾಗಿಲ್ಲ.  ಇದು ಸಚಿವರಿಗೆ ನಿರಾಳತೆ ತಂದಿದೆ. ಬೈಠಕ್‌ನಲ್ಲಿ ಯಾರನ್ನು ಕೈಬಿಡಬೇಕು ಎಂಬ ಬಗ್ಗೆ ಚರ್ಚೆಯಾಗುವುದರಲ್ಲಿತ್ತು. ಚುನಾವಣೆ ಫ‌ಲಿತಾಂಶದವರೆಗೂ ಪುನಾರಚನೆ ಅನುಮಾನ ಎಂಬ ಮಾತುಗಳು ಕೇಳಿ ಬರುತ್ತಿರುವುದು ಸಚಿವರು ಮತ್ತಷ್ಟು ನಿರಾಳರಾಗುವಂತೆ ಮಾಡಿದೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.