ಮುಖ್ಯಮಂತ್ರಿ ಅಭ್ಯರ್ಥಿಯಿಲ್ಲದೇ ಚುನಾವಣೆ ಎದುರಿಸಲಿದೆ ಕಾಂಗ್ರೆಸ್‌


Team Udayavani, Jan 10, 2022, 7:30 AM IST

ಮುಖ್ಯಮಂತ್ರಿ ಅಭ್ಯರ್ಥಿಯಿಲ್ಲದೇ ಚುನಾವಣೆ ಎದುರಿಸಲಿದೆ ಕಾಂಗ್ರೆಸ್‌

ಹೊಸದಿಲ್ಲಿ: ವಿಧಾನಸಭೆ ಚುನಾವಣೆ ನಡೆಯಲಿರುವ ಐದೂ ರಾಜ್ಯಗಳಲ್ಲಿ “ಮುಖ್ಯಮಂತ್ರಿ ಅಭ್ಯರ್ಥಿ’ಯಿಲ್ಲದೆಯೇ ಚುನಾವಣೆ ಎದುರಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

ಫ‌ಲಿತಾಂಶ ಬಂದ ಅನಂತರವೇ ಸಿಎಂ ಯಾರು ಎಂದು ನಿರ್ಧರಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಂಜಾಬ್‌ನಲ್ಲಿ ಅಧಿಕಾರ ಉಳಿಸಿಕೊಳ್ಳುವ ಸವಾಲು ಕಾಂಗ್ರೆಸ್‌ಗೆ ಎದುರಾಗಿದೆ. ಇನ್ನುಳಿದಂತೆ ಉತ್ತರಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲೂ ಬಿಜೆಪಿ ವಿರುದ್ಧ ಉತ್ತಮ ಸಾಧನೆ ಮಾಡಬೇಕಾದ ಅನಿವಾರ್ಯತೆಯಿದೆ. ಪಂಜಾಬ್‌ನಲ್ಲಿ ಚರಣ್‌ಜಿತ್‌ ಸಿಂಗ್‌ ಚನ್ನಿ, ಮಣಿಪುರದಲ್ಲಿ ಮಾಜಿ ಸಿಎಂ ಒಕ್ರಾಂ ಇಬೋಬಿ ಸಿಂಗ್‌ ಇದ್ದರೂ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಸದ್ಯಕ್ಕೆ ಘೋಷಿಸದೇ ಇರಲು ಪಕ್ಷ ನಿರ್ಧರಿಸಿದೆ.

ಗೋವಾ ಪಕ್ಷೇತರ ಶಾಸಕ ರಾಜೀನಾಮೆ:  ಚುನಾವಣೆಗೆ ಒಂದು ತಿಂಗಳು ಬಾಕಿಯಿರುವಂತೆಯೇ ಗೋವಾ ಪಕ್ಷೇತರ ಶಾಸಕ ಪ್ರಸಾದ್‌ ಗಾಂವ್ಕರ್‌ ರವಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಮಥುರಾದಲ್ಲಿ ದೇಗುಲ ನಿರ್ಮಿಸಲಾಗದೇ?: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವಷ್ಟು ತಾಕತ್ತು ನಮಗಿದೆ ಎಂದ ಮೇಲೆ ಮಥುರಾದಲ್ಲಿ ದೇವಾಲಯ ನಿರ್ಮಿಸಲು ನಮ್ಮಿಂದಾಗದೇ ಎಂದು ಪ್ರಶ್ನಿಸಿದ್ದಾರೆ ಉತ್ತರಪ್ರದೇಶ ಸಿಎಂ ಯೋಗಿ. ರವಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಂಸನ ಪ್ರತಿಮೆಯನ್ನು ಸ್ಥಾಪಿಸಿದವರ ಕನಸಲ್ಲಿ ಕೃಷ್ಣ ಬರುತ್ತಾನೆಂದ ಮೇಲೆ, ತನ್ನದೇ ಭಕ್ತರ ಕನಸಲ್ಲಿ ಶ್ರೀಕೃಷ್ಣ ಬಾರದೇ ಇರುತ್ತಾನೆಯೇ ಎಂದೂ ಪ್ರಶ್ನಿಸುತ್ತಾ ಎಸ್‌ಪಿ ನಾಯಕ ಅಖೀಲೇಶ್‌ ಅವರ ಕಾಲೆಳೆದಿದ್ದಾರೆ. 325ರಷ್ಟು ಸ್ಥಾನಗಳನ್ನು ಗೆಲ್ಲುವ ಭರವಸೆಯಿದೆ. ಮಾ.10ರಂದು ಬಿಜೆಪಿ ಸಿಎಂ ಪ್ರಮಾಣ ಸ್ವೀಕರಿ ಸಲಿದ್ದಾರೆ  ಎಂದಿದ್ದಾರೆ.

ಇದನ್ನೂ ಓದಿ:ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಉಲ್ಬಣ : 340 ಮಂದಿಗೆ ಪಾಸಿಟಿವ್‌; ಶೇ.3.86 ಪಾಸಿಟಿವಿಟಿ ದರ

ಮೋದಿ ಫೋಟೋ ಇರದು
ಪಂಚರಾಜ್ಯಗಳಲ್ಲಿ ಚುನಾವಣ ನೀತಿ ಸಂಹಿತೆ ಜಾರಿಯಾಗಿದ್ದು, ಇಲ್ಲಿ ಜನರಿಗೆ ನೀಡಲಾಗುವ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಫೋಟೋ ಮುದ್ರಿಸದಿರಲು ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿ ಕೋವಿನ್‌ ಪೋರ್ಟಲ್‌ನಲ್ಲಿ ಬದಲಾವಣೆ ತಂದು, ಫೋಟೋ ಮುದ್ರಿತವಾಗದಂತೆ ನೋಡಿಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ನಡೆದ ಪಂಚರಾಜ್ಯ ಚುನಾವಣೆಗಳ ವೇಳೆಯೂ ಆರೋಗ್ಯ ಸಚಿವಾಲಯ ಇದೇ ನಿರ್ಧಾರ ಕೈಗೊಂಡಿತ್ತು.

ಪ್ರಧಾನಮಂತ್ರಿಯ ಭದ್ರತೆ ಮುಖ್ಯವಾದದ್ದೇ. ಆದರೆ ಇದೇ ಕೇಂದ್ರ ಸರಕಾರ ಹಲವು ನಾಯಕರ ಭದ್ರತೆಯನ್ನು ಹಿಂಪಡೆದಿಲ್ಲವೇ? ಅಂಥವರ ಭದ್ರತೆಗೆ ಮಹತ್ವವೇ ಇಲ್ಲವೇ?
-ಅಖಿಲೇಶ್ ಯಾದವ್,
ಎಸ್‌ಪಿ ನಾಯಕ

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.