ಕರಾವಳಿಯಲ್ಲಿ ವಾರಾಂತ್ಯ ಕರ್ಫ್ಯೂ ಯಶಸ್ವಿ ಮುಕ್ತಾಯ


Team Udayavani, Jan 10, 2022, 6:15 AM IST

ಕರಾವಳಿಯಲ್ಲಿ ವಾರಾಂತ್ಯ ಕರ್ಫ್ಯೂ ಯಶಸ್ವಿ ಮುಕ್ತಾಯ

ಮಂಗಳೂರು/ಉಡುಪಿ: ಕರಾವಳಿಯಾದ್ಯಂತ ಶುಕ್ರವಾರ ರಾತ್ರಿಯಿಂದ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂ ಸೋಮವಾರ ಮುಂಜಾನೆ 5 ಗಂಟೆಗೆ ಮುಕ್ತಾಯಗೊಂಡಿದೆ. ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಜ.19ರ ವರೆಗೆ ಜಾರಿಯಲ್ಲಿರುತ್ತದೆ.

ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ರವಿವಾರವೂ ಉಭಯ ಜಿಲ್ಲೆಯಾದ್ಯಂತ ಜನಜೀವನ ವ್ಯತ್ಯಯಗೊಂಡಿತ್ತು. ಜೀನಸು ಅಂಗಡಿಗಳು, ಮೀನು ,ಮಾಂಸ, ತರಕಾರಿ, ಔಷಧ ಅಂಗಡಿಗಳು ಸೇರಿದಂತೆ ಜೀವನಾವಶ್ಯಕ ವಸ್ತುಗಳ ಮಳಿಗೆಗಳು ಎಂದಿನಂತೆ ಕಾರ್ಯಾಚರಿಸಿದವು. ಆದರೆ ರವಿವಾರ ರಜಾದಿನದ ಹಿನ್ನೆಲೆಯಲ್ಲಿ ನಗರ ಪ್ರದೇಶಗಳಲ್ಲಿ ಕೆಲವು ಅಂಗಡಿಗಳು ಮಧ್ಯಾಹ್ನದ ಬಳಿಕ ಮುಚ್ಚಿದ್ದರೆ ಗ್ರಾಮಾಂತರ ಪ್ರದೇಶಗಳಲ್ಲಿ ಎಂದಿನಂತೆ ತೆರೆದಿದ್ದವು.
ಬಸ್‌, ರಿಕ್ಷಾಗಳ ಸಂಚಾರವೂ ಕಡಿಮೆ ಇತ್ತು. ಶನಿವಾರ ಶೇ.50ರಷ್ಟು ಬಸ್‌ಗಳು ಸಂಚಾರ ನಡೆಸಿದ್ದರೆ. ರವಿವಾರ ಬಸ್‌ಗಳ ಸಂಚಾರದಲ್ಲಿ ಇನ್ನಷ್ಟು ಇಳಿಕೆಯಾಗಿತ್ತು.

ಪೂರ್ವ ನಿಗದಿತ ಮದುವೆ, ಧಾರ್ಮಿಕ ಕಾರ್ಯಕ್ರಮಗಳು ಅಬಾಧಿತವಾಗಿ ನಡೆದಿವೆ. ಖಾಸಗಿ ವಾಹನಗಳಲ್ಲಿ ಬರುವವರಿಗೆ ತಪಾಸಣೆಯ ಕಿರಿಕಿರಿ ಎದುರಾಯಿತು. ಬಸ್‌ಗಳ ಸಂಚಾರವಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಲ್ಲಿ ಜನರ ಪಾಲ್ಗೊಳ್ಳುವಿಕೆಯಲ್ಲಿ ಹೆಚ್ಚಿನ ವ್ಯತ್ಯಯ ಕಂಡುಬರಲಿಲ್ಲ.

ಉಡುಪಿ: ಉತ್ತಮ ಸ್ಪಂದನೆ
ಉಡುಪಿ: ವಾರಾಂತ್ಯ ಕರ್ಫ್ಯೂ ಎರಡನೇ ದಿನ ಉಡುಪಿಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಸಂತೆಕಟ್ಟೆ ಸಂತೆಗೆ ಅವಕಾಶವಿಲ್ಲದಿದ್ದರೂ ಬೀದಿಬದಿ ವ್ಯಾಪಾರಸ್ಥರು ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಕಾರಣ ಸಂತೆಯ ವಾತಾವರಣವೇ ಸೃಷ್ಟಿಯಾಗಿತ್ತು.

ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ
ಮಂಗಳೂರು ನಗರ, ದ.ಕ. ಮತ್ತು ಉಡುಪಿ ಜಿಲ್ಲೆಯ ವಿವಿಧೆಡೆ ಹಾಕಲಾಗಿದ್ದ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್‌ ಸಿಬಂದಿ ವಾಹನಗಳ ತಪಾಸಣೆ ನಡೆಸಿ ಅನಗತ್ಯವಾಗಿ ಹಾಗೂ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಹಿಮವರ್ಷ : ರಾಜ್ಯದ 400ಕ್ಕೂ ಅಧಿಕ ಪ್ರಮುಖ ರಸ್ತೆಗಳು ಬಂದ್‌

ನಿಯಮ ಉಲ್ಲಂಘನೆ: 534 ವಾಹನಗಳಿಗೆ ದಂಡ
ನಿಯಮ ಉಲ್ಲಂಘಿಸಿ ಸಂಚರಿಸಿದ ಆರೋಪ ಮೇಲೆ ಮಂಗಳೂರು ಪೊಲೀಸರು 534 ವಾಹನಗಳ ವಿರುದ್ಧ ಮೋಟಾರು ವಾಹನ ಕಾಯ್ದೆಯನ್ವಯ ಪ್ರಕರಣ ದಾಖಲಿಸಿಕೊಂಡು 1,75,400 ರೂ. ದಂಡ ವಿಧಿಸಿದ್ದಾರೆೆ. ಮಾಸ್ಕ್ ಧರಿಸದ 240 ಮಂದಿಯ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು 39,570 ರೂ. ದಂಡ ವಿಧಿಸಲಾಗಿದೆ. 40 ವಾಹನಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗಿದೆ.

ಉಡುಪಿ: 59 ಲ.ರೂ. ದಂಡ ಸಂಗ್ರಹ
ಮಾಸ್ಕ್ ನಿಯಮಾವಳಿ ಉಲ್ಲಂಘನೆಗೆ ಸಂಬಂಧಿಸಿ ಜಿಲ್ಲೆಯಲ್ಲಿ ಇದುವರೆಗೆ 53, 916 ಮಂದಿಗೆ ದಂಡ ವಿಧಿಸಲಾಗಿದ್ದು, 59,73,770 ರೂ.ಸಂಗ್ರಹಿಸಲಾಗಿದೆ. ಪ್ರಸ್ತುತ 9 ಕಡೆಗಳಲ್ಲಿ ಕಂಟೈನ್‌ಮೆಂಟ್‌ ವಲಯ ಸಕ್ರಿಯವಾಗಿದೆ.

 

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.