ಮೂರು ತಿಂಗಳಿಂದ ಪೂರೈಕೆಯಾಗಿಲ್ಲ ನೀರು!

ಅವ್ಯವಸ್ಥೆ ಬಗ್ಗೆ ಯಾರೊಬ್ಬರೂ ಧ್ವನಿ ಎತ್ತದಿರುವುದರಿಂದ ನೀರಿನ ಹಾಹಾಕಾರ ಮಾತ್ರ ತಪ್ಪದಾಗಿದೆ.

Team Udayavani, Jan 10, 2022, 6:24 PM IST

ಮೂರು ತಿಂಗಳಿಂದ ಪೂರೈಕೆಯಾಗಿಲ್ಲ ನೀರು!

ತೆಲಸಂಗ: ಕಳೆದ ಮೂರು ತಿಂಗಳಿಂದ ತೆಲಸಂಗ ಗ್ರಾಮಕ್ಕೆ ಜಾಕ್ವೆಲ್‌ನಿಂದ ಕುಡಿವ ನೀರು ಪೂರೈಕೆ ಆಗದ ಹಿನ್ನೆಲೆ ಗ್ರಾಪಂನವರು ಕೆರೆ ನೀರಿನಿಂದ ಇಷ್ಟು ದಿನಗಳವರೆಗೆ ಹೇಗೋ ನಿರ್ವಹಣೆ ಮಾಡಿದ್ದಾರೆ. ಆದರೆ ಇದೀಗ ದಿನದಿಂದ ದಿನಕ್ಕೆ ಕುಡಿವ ನೀರಿನಹಾಹಾಕಾರ ಭುಗಿಲೆದ್ದಿದ್ದು, ತಾಲೂಕು ಆಡಳಿತದ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.

13 ಹಳ್ಳಿಗಳು ಅವಲಂಬಿತವಾಗಿರುವ ರಾಜೀವ್‌ ಗಾಂಧಿ  ಕುಡಿಯುವ ನೀರಿನ ಸಬ್‌ಮಿಷನ್‌ ನಿರ್ವಹಣೆ ನಿರ್ಲಕ್ಷéಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ತೆಲಸಂಗ ಮಾತ್ರವಲ್ಲದೇ 13 ಹಳ್ಳಿಯ ಜನರು ಗುಟುಕು ನೀರಿಗಾಗಿ ಪರಿತಪಿಸುವಂತಾಗಿದೆ.

ಅಧಿಕಾರಿಗಳ ಬೇಜವಾಬ್ದಾರಿ, ನಿರ್ಲಕ್ಷ್ಯದಿಂದ ಬಂದ್‌ ಬಿದ್ದಿರುವ ಜಾಕ್ವೆಲ್‌ ನೀರು ಪೂರೈಕೆಯಾಗುತ್ತಿಲ್ಲ. ಮೋಟಾರ್‌ ಸುಟ್ಟಿದೆ, ಪೈಪ್‌ ಒಡೆದಿದೆ, ರಿಪೇರಿ ಕಾರ್ಯ ಪ್ರಗತಿಯಲ್ಲಿದೆ ಹೀಗೆ ಹೀಗೆ ಸಬೂಬು, ನೆಪ ಹೇಳುತ್ತಲೇ ಸಾಗಹಾಕಲಾಗುತ್ತಿದೆ.

ಯಾವುದೇ ತೊಂದರೆ ಇದ್ದರೂ ಒಂದೆರಡು ದಿನಗಳಲ್ಲಿ ಸರಿ ಮಾಡಬಹುದು. ಆದರೆ ಕಳೆದ 3 ತಿಂಗಳಿಂದ ಕುಂಟು ನೆಪ ಹೇಳುತ್ತ 13 ಹಳ್ಳಿಯ ಜನ ನಿತ್ಯ ನೀರಿಗಾಗಿ ಪರಿತಪಿಸುವಂತೆ ಮಾಡಿದ್ದಾರೆ ಎನ್ನುವ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಹಳ್ಳ ಹಿಡಿದ ಯೋಜನೆ: ಯೋಜನೆ ಸಮರ್ಪಕ ನಿರ್ವಹಣೆ ಆಗದ್ದರಿಂದ ಜನರು ಹನಿ ನೀರಿಗಾಗಿ ಪರಿತಿಸುತ್ತಿದ್ದಾರೆ. ಒಂದು ದಿನ ನೀರು ಬಂದರೆ ಮತ್ತೆ ತಿಂಗಳುಗಟ್ಟಲೇ ಬರುವುದೇ ಇಲ್ಲ.

ಅದೆಷ್ಟು ಬಾರಿ ಗ್ರಾಪಂಯವರು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ನದಿಯಲ್ಲಿ ನೀರು ತುಂಬಿ ಹರಿಯುತ್ತಿರುವುದರಿಂದ ಎರಡು ದಿನಕ್ಕೊಮ್ಮೆಯಾದರೂ ನೀರು ಪೂರೈಸಬಹುದು. ಆದರೆ ಇಲ್ಲಿಯ ಅವ್ಯವಸ್ಥೆ ಬಗ್ಗೆ ಯಾರೊಬ್ಬರೂ ಧ್ವನಿ ಎತ್ತದಿರುವುದರಿಂದ ನೀರಿನ ಹಾಹಾಕಾರ ಮಾತ್ರ ತಪ್ಪದಾಗಿದೆ.

ವರದಾನವಾಗಿತ್ತು: ಈ ವ್ಯವಸ್ಥೆ ಮೊದಲು 13 ಹಳ್ಳಿಗಳಿಗೆ ವರದಾನವಾಗಿದ್ದು ನಿಜ. ಆದರೆ ಇಲ್ಲಿಗೆ ಕೃಷ್ಣಾ ನದಿಯಿಂದ ಝುಂಜರವಾಡ ಗ್ರಾಮದ ಹತ್ತಿರ ನದಿ ತೀರದಲ್ಲಿ ಜಾಕ್ವೆಲ್‌ ಮತ್ತು ಪಂಪ್‌ ಮನೆ ನಿರ್ಮಿಸಿ ಅದರಿಂದ ಐಗಳಿ ಕ್ರಾಸ್‌ ಹತ್ತಿರ ನಿರ್ಮಿಸಿರುವ ಶುದ್ಧೀಕರಣ ಘಟಕದ ಮೂಲಕ ನೀರು ಶುದ್ಧೀಕರಣಗೊಳಿಸಿ ಬ್ಯಾಲನ್ಸಿಂಗ್‌ ಟ್ಯಾಂಕ್‌ ಮತ್ತು ಸೆಂಟ್ಲಿಂಗ್ ಟ್ಯಾಂಕ್‌ಗೆ ಹರಿಸಲಾಗುತ್ತದೆ.

ನಂತರ ಇಲ್ಲಿಂದಲೇ ಎಲ್ಲ ಹಳ್ಳಿಗೂ ಕುಡಿಯಲು ನೀರು ಹರಿಸಲಾಗುತ್ತದೆ. ಈ ಯೋಜನೆಗೆ ಜಾಕ್ವೆಲ್‌ ಸಮೀಪ 250 ಕೆವಿಎ ಟ್ರಾನ್ಸ್‌ಫಾರ್ಮರ್‌ ಮೂಲಕ ನಿರಂತರ ವಿದ್ಯುತ್‌ ಸರಬರಾಜು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಪಂಪ್‌ಹೌಸ್‌ ಹತ್ತಿರ ಡಬ್ಲ್ಯುಟಿಪಿ 100 ಕೆವಿಎ ಟ್ರಾನ್ಸ್‌ಫಾರ್ಮರ್‌ ನಿರ್ಮಿಸಲಾಗಿದೆ.

ಆದರೂ ಇತ್ತೀಚಿನ ವರ್ಷಗಳಲ್ಲಿ ಇದರ ನಿರ್ವಹಣೆ ಹಳ್ಳ ಹಿಡಿದಿದೆ. ಮೊದಲು ಎರಡು ದಿನಕ್ಕೊಮ್ಮೆ ದೊರೆಯುತ್ತಿದ್ದ ನೀರು ವಾರಕ್ಕೊಮ್ಮೆ ನಂತರ 15 ದಿನಕ್ಕೊಮ್ಮೆ ಹೀಗೆ ತಿಂಗಳುಗಟ್ಟಲೇ ಬರುತ್ತಿದೆ. ಈ ಅವ್ಯವಸ್ಥೆ ವಿರುದ್ಧ ಯಾವೊಬ್ಬ ಜನಪ್ರತಿನಿಧಿಗಳು ಚಕಾರವೆತ್ತುತ್ತಿಲ್ಲ. ಹೀಗಾಗಿ ಸಾರ್ವಜನಿಕರ ಕೆಂಗಣ್ಣು ಅಧಿಕಾರಿಗಳು-ಜನಪ್ರತಿನಿಧಿಗಳ ಮೇಲೆ ನೆಟ್ಟಿದೆ.

ಜಾಕ್ವೆಲ್‌ ನೀರು ಪೂರೈಕೆಗೆ ತಾಂತ್ರಿಕ ತೊಂದರೆ ಇರುವುದಾಗಿ ಮೇಲಾಧಿಕಾರಿಗಳು ತಿಳಿಸಿದ್ದಾರೆ. ಕೆರೆ ನೀರು ಮಾತ್ರ ಪೂರೈಕೆಯಿಂದ ವಿಳಂಬವಾಗುತ್ತಿದೆ. ಜಾಕ್ವೆಲ್‌ ಆರಂಭವಾದ ತಕ್ಷಣದಿಂದ ನೀರಿನ ಸಮಸ್ಯೆ ಬಗೆಹರಿಸಲಾಗುವುದು.
ಬೀರಪ್ಪ ಕಡಗಂಚಿ, ಪಿಡಿಒ ತೆಲಸಂಗ

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.