ಮೂರು ರಾಜ್ಯ ಬಿಜೆಪಿಗೆ? ಪಂಜಾಬ್‌ ಆಮ್‌ ಆದ್ಮಿ ಪಕ್ಷದ ತೆಕ್ಕೆಗೆ: ಟೈಮ್ಸ್‌ ನೌ ಸಮೀಕ್ಷೆ ವರದಿ


Team Udayavani, Jan 11, 2022, 6:15 AM IST

ಮೂರು ರಾಜ್ಯ ಬಿಜೆಪಿಗೆ? ಪಂಜಾಬ್‌ ಆಮ್‌ ಆದ್ಮಿ ಪಕ್ಷದ ತೆಕ್ಕೆಗೆ: ಟೈಮ್ಸ್‌ ನೌ ಸಮೀಕ್ಷೆ ವರದಿ

ಹೊಸದಿಲ್ಲಿ: “ಉತ್ತರಪ್ರದೇಶ, ಉತ್ತರಾಖಂಡ ಮತ್ತು ಗೋವಾದಲ್ಲಿ ಮತ್ತೆ ಬಿಜೆಪಿಯ ವಿಜಯ ಪತಾಕೆ ಹಾರಲಿದ್ದು, ಪಂಜಾಬ್‌ನಲ್ಲಿ ಕಾಂಗ್ರೆಸ್‌ ತೀವ್ರ ಮುಖಭಂಗ ಎದುರಿಸಲಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್‌ ರಾಜ್ಯವು ಆಮ್‌ ಆದ್ಮಿ ಪಕ್ಷದ ಪಾಲಾಗಲಿದೆ.’ ಟೈಮ್ಸ್‌ ನೌ ನಡೆಸಿದ ಜನಾಭಿಪ್ರಾಯ ಸಂಗ್ರಹದ ವರದಿ ಈ ಭವಿಷ್ಯ ನುಡಿದಿದೆ.

ಪಂಚರಾಜ್ಯಗಳಲ್ಲಿ ಚುನಾವಣೆಯ ಕಾವು ಏರುತ್ತಿರುವಂತೆಯೇ, ಜನಮತ ಸಂಗ್ರಹ ಮಾಡಲಾಗಿದ್ದು, ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಸರಕಾರಕ್ಕೆ ಬಹುಮತ ಖಚಿತ ಎಂದು ಹೇಳಲಾಗಿದೆ. 403 ಕ್ಷೇತ್ರಗಳ ಪೈಕಿ 227-254 ಸೀಟ್‌ಗಳನ್ನು ಪಡೆಯುವ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೇರಲಿದೆ. ಕಳೆದ ಚುನಾವಣೆಗಿಂತ ಈ ಬಾರಿ ಕಡಿಮೆ ಸೀಟುಗಳು ಬರಲಿದ್ದು, ಎಸ್ಪಿಗೆ 136-151 ಸೀಟುಗಳು ಲಭ್ಯವಾಗಲಿದೆ. ರಾಮಮಂದಿರ ಮತ್ತು ಕಾಶಿ ವಿಶ್ವನಾಥ ಕಾರಿಡಾರ್‌ ಯೋಜನೆಯು ಕಮಲ ಪಕ್ಷಕ್ಕೆ ಹೆಚ್ಚಿನ ಲಾಭ ತಂದುಕೊಡಲಿದೆ ಎಂದು ಸಮೀಕ್ಷೆ ಹೇಳಿದೆ.

ಪಂಜಾಬ್‌ನಲ್ಲಿ 41-47 ಸೀಟು ಗಳಿಸುವ ಮೂಲಕ ಮತ್ತೂಂದು ರಾಜ್ಯವು ಆಮ್‌ ಆದ್ಮಿ ಪಕ್ಷದ ತೆಕ್ಕೆಗೆ ಬೀಳಲಿದೆ. ಉತ್ತರಾಖಂಡದಲ್ಲಿ ಹಾಲಿ ಸಿಎಂ ಪುಷ್ಕರ್‌ ಸಿಂಗ್‌ ಧಮಿ ಬಗ್ಗೆ ಜನರ ಒಲವಿದ್ದು,  44-50 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ.

ಇದನ್ನೂ ಓದಿ:ಅನಗತ್ಯ ಸುತ್ತಾಡುವರಿಗೆ ಪೊಲೀಸರಿಂದ ದಂಡ

ಗೋವಾದಲ್ಲಿ ಆಪ್‌ ಉತ್ತಮ ಪ್ರದರ್ಶನ:  ಗೋವಾದಲ್ಲಿ ಸಿಎಂ ಪ್ರಮೋದ್‌ ಸಾವಂತ್‌ ವಿರುದ್ಧದ ಭ್ರಷ್ಟಾಚಾರ ಆರೋಪವು ಬಿಜೆಪಿಗೆ ಹೊಡೆತ ನೀಡಲಿದೆಯಾದರೂ, ಬಹುಮತ ಪಡೆಯುವಲ್ಲಿ ಯಶಸ್ವಿಯಾಗಲಿದೆೆ. ಕಾಂಗ್ರೆಸ್‌ ಹಾಗೂ ಟಿಎಂಸಿಗೆ ಹೋಲಿಸಿದರೆ ಆಮ್‌ ಆದ್ಮಿ ಪಕ್ಷ ಉತ್ತಮ ಪ್ರದರ್ಶನ ನೀಡಲಿದೆ. 8-11 ಸ್ಥಾನಗಳಲ್ಲಿ ಆಪ್‌ ಜಯ ಸಾಧಿಸುವ ಮೂಲಕ ರಾಜ್ಯದಲ್ಲಿ ಬೇರೂರುವ ಸಾಧ್ಯತೆಯಿದೆ ಎಂದಿದೆ ವರದಿ.

ಉತ್ತರಪ್ರದೇಶ ಚುನಾವಣೆಯಲ್ಲಿ ಕೇವಲ ಧರ್ಮ ಮತ್ತು ಜಾತಿಯೇ ಪ್ರಮುಖ ವಿಚಾರವಾಗಿದೆ. ಇವುಗಳ ಬಗ್ಗೆ ಚರ್ಚಿಸಬಾರದು ಎಂದು ನಾನು ಹೇಳುವುದಿಲ್ಲ. ಆದರೆ, ನೈಜ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ಕೊಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ.
-ಪ್ರಿಯಾಂಕಾ ವಾದ್ರಾ, ಕಾಂಗ್ರೆಸ್‌ ನಾಯಕಿ

ಟಾಪ್ ನ್ಯೂಸ್

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.