ರಾಷ್ಟ್ರಭಾಷೆ ಅಭಿಮಾನ ಬೆಳೆಸಿಕೊಳ್ಳಿ: ರಾಠೊಡ
Team Udayavani, Jan 11, 2022, 5:58 PM IST
ಇಂಡಿ: ಜಗತ್ತಿನಲ್ಲಿ ಇಂದು ಸುಮಾರು 40ಕ್ಕೂ ಹೆಚ್ಚು ದೇಶಗಳ 100ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಲ್ಲಿ ಹಿಂದಿ ಭಾಷೆಯನ್ನು ಬೋಧಿಸಲಾಗುತ್ತಿದೆ. ಜಗತ್ತಿನಲ್ಲಿ ಮಂದಾರಿನಿ ಮತ್ತು ಇಂಗ್ಲಿಷ್ ಭಾಷೆಗಳ ನಂತರ ಅತಿ ಹೆಚ್ಚು ಮಾತನಾಡುವ ಭಾಷೆ ಹಿಂದಿಯಾಗಿದೆ ಎಂದು ಹಿಂದಿ ವಿಭಾಗ ಸಹಾಯಕ ಪ್ರಾಧ್ಯಾಪಕ ಶ್ರೀಕಾಂತ ರಾಠೊಡ ಹೇಳಿದರು.
ಸೋಮವಾರ ಪಟ್ಟಣದ ಜಿ.ಆರ್. ಗಾಂಧಿ ಕಲಾ, ವೈ.ಎ. ಪಾಟೀಲ ವಾಣಿಜ್ಯ ಹಾಗೂ ಎಂ.ಎಫ್. ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಹಿಂದಿ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಜ. 10, 1975ರಲ್ಲಿ ಮೊದಲನೇ ವಿಶ್ವ ಹಿಂದಿ ಸಮ್ಮೇಳನ ಅಯೋಜಿಸಲಾಯಿತು. ಸಮ್ಮೇಳನದಲ್ಲಿ ಸುಮಾರು 30ಕ್ಕೂ ಹೆಚ್ಚು ದೇಶಗಳು ಪಾಲ್ಗೊಂಡಿದ್ದವು. ಇದರ ಸ್ಮರಣಾರ್ಥ ಮಾಜಿ ಪ್ರಧಾನಿ ಡಾ| ಮನಮೋಹನ ಸಿಂಗ್ರವರು 2006ರಲ್ಲಿ ಜ. 10ನೇ ತಾರೀಖು ವಿಶ್ವ ಹಿಂದಿ ದಿವಸವನ್ನಾಗಿ ಘೋಷಿಸಿದರು. ಹಿಂದಿ ಭಾಷೆಯನ್ನು ವಿಶ್ವಮಟ್ಟದಲ್ಲಿ ಪ್ರಚಾರ ಹಾಗೂ ಪ್ರಸಾರಗೊಳಿಸಿವುದು ಇದರ ಉದ್ದೇಶವಾಗಿದೆ ಎಂದರು.
ಪ್ರಾಚಾರ್ಯ ಎಸ್.ಬಿ. ಜಾಧವ ಮಾತನಾಡಿ, ಕನ್ನಡ ಭಾಷೆ ನಮ್ಮ ಮಾತೃಭಾಷೆಯಾಗಿದೆ. ಆದರೆ ಹಿಂದಿ ಭಾರತದಲ್ಲಿ ಅತಿ ಹೆಚ್ಚು ಮಾತನಾಡುವ ಭಾಷೆಯಾಗಿದ್ದರಿಂದ ಕನ್ನಡದ ಜೊತೆಗೆ ಹಿಂದಿ ಭಾಷಾಜ್ಞಾನವನ್ನು ಹೊಂದುವುದು ಅನಿವಾರ್ಯವಾಗಿದೆ. ಕನ್ನಡ ಭಾಷೆ ಬಗ್ಗೆ ಸ್ವಾಭಿಮಾನ ಮತ್ತು ಹಿಂದಿ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಿಖತ ತೆನ್ನಳ್ಳಿ, ಸತೀಶ ರಾಠೊಡ, ಆಕಾಶ ಶಿಂಧೆ ಮಾತ ನಾಡಿದರು. ಸಹಾಯಕ ಪ್ರಾಧ್ಯಾಪಕರಾದ ಡಾ| ಆನಂದ ನಡವಿನಮನಿ, ಡಾ| ವಿ.ಎ. ಕೋರವಾರ, ಡಾ| ಪಿ.ಕೆ. ರಾಠೊಡ, ಡಾ| ಸುರೇಂದ್ರ ಕೆ, ಶ್ರೀಶೈಲ, ಡಾ| ಸಿ.ಎಸ್. ಬಿರಾದಾರ, ಎಂ.ಆರ್. ಕೋಣದೆ, ಆರ್ .ಪಿ. ಇಂಗನಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು
Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು
Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ