ಅಭಿವೃದ್ದಿಗೆ ಅಧಿಕಾರಿಗಳ ಸಹಕಾರ ಅಗತ್ಯ
Team Udayavani, Jan 11, 2022, 6:03 PM IST
ಚಡಚಣ: ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಜನರ ಆರೋಗ್ಯದ ಜೊತೆಗೆ ಮತಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಬೇಕಾದ ಅನಿವಾರ್ಯತೆಯಿದ್ದು ಇದಕ್ಕೆ ಅಧಿಕಾರಿಗಳ ಸಹಕಾರ ಅಗತ್ಯ ಎಂದು ಶಾಸಕ ದೇವಾನಂದ ಚವ್ಹಾಣ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎರಡನೇ ಅಲೆಯಲ್ಲಿ ನಮ್ಮ ಸಂಬಂಧಿಕರನ್ನು, ಪ್ರಾಮಾಣಿಕ ಅಧಿಕಾರಿಗಳನ್ನು ಕಳೆದುಕೊಂಡಿದ್ದೇವೆ. ರಾಜ್ಯದಲ್ಲಿ ಪ್ರಾರಂಭವಾದ ಮೂರನೇ ಅಲೆಯನ್ನು ಬಹಳ ಜಾಣ್ಮೆಯಿಂದ ಎದುರಿಸಬೇಕಾಗಿದೆ ಎಂದು ಅವರು, ದೇಶದ ಬೆನ್ನೆಲುಬಾಗಿ ನಿಲ್ಲಬೇಕಾದ ಕೃಷಿ ಇಲಾಖೆ ಅಧಿಕಾರಿಗಳು ಹಣದ ಆಸೆಗೆ ಕಚೇರಿಗಳಿಗೆ ಸುಖಾ ಸುಮ್ಮನೆ ರೈತರನ್ನು ಅಲೆದಾಡಿಸಬೇಡಿ ಎಂದರು.
ವಿವಿಧ ಇಲಾಖೆಗಳಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು ಮಾರ್ಚ್ ತಿಂಗಳೊಳಗಾಗಿ ಪೂರ್ಣಗೊಳಿಸಬೇಕು. ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ನೀಡಬೇಕು. ಪಟ್ಟಣ ಸೇರಿದಂತೆ ತಾಲೂಕಿನಲ್ಲಿನ ದಾಬಾಗಳಲ್ಲಿ ಅವ್ಯಾಹತವಾಗಿ ನಡೆದಿರುವ ಅಕ್ರಮ ಚಟುವಟಿಕೆಗಳಿಗೆ ಅಬಕಾರಿ ಇಲಾಖೆ ಅಕಾರಿಗಳು ಕಡಿವಾಣ ಹಾಕಬೇಕು. ಕಟ್ಟಡ ಕಾರ್ಮಿಕ ಇಲಾಖೆಯಲ್ಲಿ ಶೇ. 50 ಯೋಜನೆಗಳು ಮೂಲಭೂತ ಸೌಲಭ್ಯ ಇಲ್ಲದವರಿಗೆ ಮುಟ್ಟುತ್ತಿವೆ. ಕೋವಿಡ್ ಮುಗಿದ ತಕ್ಷಣ ಪಂಚಾಯ್ತಿ ಮಟ್ಟದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸಭೆ ಆಯೋಜಿಸಿ ಅರ್ಹ ಕಾರ್ಮಿಕ ಫಲಾನುಭವಿಗಳಿಗೆ ಯೋಜನೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಎಚ್ಚರಿಸಿದರು.
ತಹಶೀಲ್ದಾರ್ ಸುರೇಶ ಚವಲರ, ತಾಪಂ ಆಡಳಿತಾಧಿಕಾರಿ ಬಸವರಾಜ ಬಿರಾದಾರ, ಇಒ ಸಂಜೀವ ಖಡಗೇಕರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ