ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಜಿ.ಎಲ್.ಹೆಗಡೆ ನೇಮಕ
Team Udayavani, Jan 12, 2022, 7:24 PM IST
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕರನ್ನಾಗಿ ಹಿರಿಯ ಅರ್ಥಧಾರಿ, ಸಾಹಿತಿ ಡಾ.ಜಿ.ಎಲ್ . ಹೆಗಡೆ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕುಮಟಾದ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಜಿ.ಎಲ್.ಹೆಗಡೆ ಯಕ್ಷಗಾನ ಸಂಶೋಧನಾ ಕ್ಷೇತ್ರದಲ್ಲಿ ದೊಡ್ಡ ಹೆಸರು. ಯಕ್ಷಗಾನ ವರ್ಣವೈಭವ, ಶೇಣಿ ರಾಮಾಯಣ, ಶೇಣಿ ಭಾರತ, ನಮ್ಮ ಚಿಟ್ಟಾಣಿ ಸೇರಿದಂತೆ ಹಲವು ಪುಸ್ತಕಗಳ ಲೇಖಕರಾಗಿರುವ ಡಾ.ಹೆಗಡೆ ಆಟ ಹಾಗೂ ಕೂಟ ಎರಡರಲ್ಲೂ ಸೈ ಎನಿಸಿಕೊಂಡವರು.
ಯಕ್ಷಗಾನ ವೇಷಧಾರಿಯಾಗಷ್ಟೇ ಅಲ್ಲ, ದಕ್ಷಿಣೋತ್ತರ ಕನ್ನಡದ ಪ್ರಸಿದ್ಧ ಯಕ್ಷಗಾನ ತಾಳಮದ್ದಳೆ ಅರ್ಥಧಾರಿಯಾಗಿಯೂ ಹೆಸರು ಪಡೆದಿದ್ದಾರೆ.ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಎಂ.ಎ.ಹೆಗಡೆ ನಿಧನ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಜಿ.ಎಲ್.ಹೆಗಡೆ ಅವರನ್ನು ನೇಮಕ ಮಾಡಿ ಕನ್ನಡ ಹಾಗೂ ಸಂಸ್ಕ್ರತಿ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್