ದಂಡಗುಂಡ ಕ್ಷೇತ್ರ; ಹಲ್ಲೆ ವಿಡಿಯೋ ವೈರಲ್
Team Udayavani, Jan 13, 2022, 12:39 PM IST
ಚಿತ್ತಾಪುರ: ದಂಡಗುಂಡ ಸುಕ್ಷೇತ್ರದ ಬಸವಣ್ಣ ಕಾರ್ಯಾಲಯದಲ್ಲಿ ಇತ್ತೀಚಿಗೆ ನಡೆದ ಶ್ರೀದಂಡಗುಂಡ ಬಸವಣ್ಣ ಟ್ರಸ್ಟ್ ಕಮಿಟಿ ಸದಸ್ಯರ ಸಭೆಯಲ್ಲಿ ಹೊಲದ ವಿಷಯಕ್ಕೆ ಸಂಬಂಧಪಟ್ಟಂತೆ ಟ್ರಸ್ಟ್ನ ಸದಸ್ಯರೇ ದೇವಸ್ಥಾನದ ಸ್ವಾಮೀಜಿ ಅವರ ಸಹೋದರ ಮೇಲೆ ಹಲ್ಲೆ ಮಾಡಿದ್ದಾರೆನ್ನುವ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟ್ರಸ್ಟ್ ಪದಾಧಿಕಾರಿಗಳಾದ ಎಂಎಲ್ಸಿ ಬಿ.ಜಿ.ಪಾಟೀಲ, ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಭಾಗಣ್ಣಗೌಡ ಸಂಕನೂರ, ನ್ಯಾಯವಾದಿ ಚಂದ್ರಶೇಖರ ಅವಂಟಿ ಸಮ್ಮುಖದಲ್ಲಿಯೇ ಈ ಘಟನೆ ನಡೆದಿದೆ.
ಹಿಂದಿನ ಸಭೆಯ ನಡಾವಳಿಗೆ ಒಪ್ಪಿಗೆ ಪಡೆಯುವುದೂ ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಭಕ್ತಾದಿಗಳಿಂದ ಸಾಕಷ್ಟು ಕಾಣಿಕೆ ಸಂಗ್ರಹವಾಗುತ್ತಿದ್ದರೂ ಈ ಶ್ರದ್ಧಾ ಕೇಂದ್ರ ಮಾತ್ರ ಅಭಿವೃದ್ಧಿ ಆಗಿಲ್ಲ. ಅಕ್ರಮಗಳು ನಡೆಯುತ್ತಿವೆ. ಆದ್ದರಿಂದ ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳಬೇಕು ಎಂದು ಸಂಘಟನೆಗಳ ಪ್ರಮುಖರು ಈಗಾಗಲೇ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ದಂಡಗುಂಡ ಗ್ರಾಮದಲ್ಲಿ ನಡೆದ ಮಾರಾಮಾರಿ ವಿಷಯ ತಿಳಿದ ತಕ್ಷಣ ಭೇಟಿ ನೀಡಿದಾಗ ಅಲ್ಲಿ ಯಾರೂ ದೂರು ನೀಡಲಿಲ್ಲ. ಹೀಗಾಗಿ ಅವರಿಂದ ಮುಚ್ಚಳಿಕೆ ಪತ್ರ ಬರೆಯಿಸಿಕೊಂಡು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರ ಆದೇಶದಂತೆ ಮುಂಜಾಗ್ರತಾ ಕ್ರಮವಾಗಿ ಸಿಆರ್ಪಿಸಿ 107 ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. -ಗಂಗಮ್ಮ ಪಿಎಸ್ಐ, ಚಿತ್ತಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!