ಉತ್ತರಪ್ರದೇಶ: ಸಚಿವ ಧರಂ ಸಿಂಗ್ ಬಿಜೆಪಿಗೆ ರಾಜೀನಾಮೆ, 7 ಶಾಸಕರು ಗುಡ್ ಬೈ
ಉತ್ತರಪ್ರದೇಶದಲ್ಲಿ ಕ್ಯಾಬಿನೆಟ್ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮೊದಲಿಗೆ ರಾಜೀನಾಮೆ ನೀಡಿದ್ದರು.
Team Udayavani, Jan 13, 2022, 3:17 PM IST
ಲಕ್ನೋ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಘಟಾನುಘಟಿ ಸಚಿವರು, ಹಾಲಿ ಶಾಸಕರು ಗುಡ್ ಬೈ ಹೇಳುತ್ತಿರುವುದು ದೊಡ್ಡ ಆಘಾತ ತಂದಿದೆ.
ಇದನ್ನೂ ಓದಿ:ಸೋಂಕಿತರು 7 ದಿನ ಪೂರೈಸಿದರೆ ಮುಕ್ತ : ನೆಗೆಟಿವ್ ವರದಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ
ಗುರುವಾರ(ಜನವರಿ 13) ಸಚಿವ ಧರಂ ಸಿಂಗ್ ಸೈನಿ ಅವರು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಉತ್ತರಪ್ರದೇಶ ಸರ್ಕಾರ ಮೂವರು ಸಚಿವರು ರಾಜೀನಾಮೆ ನೀಡಿದಂತಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ತಮಗೆ ನೀಡಿದ್ದ ನಿವಾಸ ಮತ್ತು ಭದ್ರತೆಯನ್ನು ತೊರೆದಿದ್ದರು. ಈ ಸಂದರ್ಭದಲ್ಲಿ ಸೈನಿ ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಹಬ್ಬಿತ್ತು.
ಉತ್ತರಪ್ರದೇಶದಲ್ಲಿ ಕ್ಯಾಬಿನೆಟ್ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮೊದಲಿಗೆ ರಾಜೀನಾಮೆ ನೀಡಿದ್ದರು. ಈ ಸಂದರ್ಭದಲ್ಲಿ ಇನ್ನಷ್ಟು ಮಂದಿ ಸಚಿವರು, ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದ್ದರು.
ದಲಿತರು, ಹಿಂದುಳಿದ ವರ್ಗ, ರೈತರನ್ನು ನಿರ್ಲಕ್ಷಿಸಿದ್ದು, ಈ ಹಿನ್ನೆಲೆಯಲ್ಲಿ ತಾನು ಬಿಜೆಪಿಗೆ ರಾಜೀನಾಮೆ ನೀಡಿರುವುದಾಗಿ ಸ್ವಾಮಿ ಪ್ರಸಾದ್ ತಿಳಿಸಿದ್ದರು. ಈಗಾಗಲೇ ಬಿಜೆಪಿ ಶಾಸಕರಾದ ಬ್ರಜೇಶ್ ಪ್ರಜಾಪತಿ, ರೋಶನ್ ಲಾಲ್ ವರ್ಮಾ, ಭಗ್ವತಿ ಸಾಗರ್, ಮುಖೇಶ್ ವರ್ಮಾ, ವಿನಯ್ ಸಾಂಖ್ಯ ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದಾರೆ.
ಉತ್ತರಪ್ರದೇಶದಲ್ಲಿ ಒಟ್ಟು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆಬ್ರುವರಿ 10ರಿಂದ ಮೊದಲ ಹಂತದ ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !