ಆತಂಕದ ನಡುವೆ “ನಮ್ಮ ಭಾರತ” ತೆರೆಗೆ
Team Udayavani, Jan 13, 2022, 4:36 PM IST
ಒಮಿಕ್ರಾನ್ ಆತಂಕ, ಶೇಕಡ 50ರಷ್ಟು ಮಾತ್ರ ಪ್ರೇಕ್ಷಕರಿಗೆ ಪ್ರವೇಶಾವಕಾಶ, ವೀಕೆಂಡ್ ಕರ್ಫ್ಯೂದಿಂದಾಗಿ ಬಿಡುಗಡೆಗೆ ಸಿದ್ಧವಾಗಿದ್ದ ಬಿಗ್ ಬಜೆಟ್ ಸ್ಟಾರ್ ಸಿನಿಮಾಗಳು ಸೇರಿದಂತೆ, ಬಹುತೇಕ ಸಿನಿಮಾಗಳು ತಮ್ಮ ಬಿಡುಗಡೆಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿವೆ. ಹೀಗಾಗಿ ಕಳೆದ ಎರಡು ವಾರಗಳಿಂದ ಯಾವುದೇ ಹೊಸ ಸಿನಿಮಾಗಳ ಬಿಡುಗಡೆ ಯಿಲ್ಲದೇ, ಬಹುತೇಕ ಥಿಯೇಟರ್ಗಳು ಬಿಕೋ ಎನ್ನುತ್ತಿವೆ. ಇವೆಲ್ಲದರ ನಡುವೆಯೇ ಈ ವಾರ “ನಮ್ಮ ಭಾರತ’ ಎಂಬ ಮಕ್ಕಳ ಸಿನಿಮಾವೊಂದು ತೆರೆಗೆ ಬರಲು ತಯಾರಾಗಿದೆ.
“ನೀಲಾ ನೀಲಕಂಠ ಫಿಲಂಸ್’ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ “ನಮ್ಮ ಭಾರತ’ ಚಿತ್ರಕ್ಕೆ ಕುಮಾರ ಸ್ವಾಮಿ (ಕೆ.ಆರ್ ನಗರ) ಛಾಯಾಗ್ರಹಣ ಮತ್ತು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ರವಿಶಂಕರ್ ಮಿರ್ಲೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರದ ಹಾಡುಗಳಿಗೆ ಕುಮಾರ್ ಈಶ್ವರ್ ಸಂಗೀತವಿದ್ದು, ಸಂಜೀವ್ ರೆಡ್ಡಿ ಸಂಕಲನವಿದೆ.
ಇನ್ನು “ನಮ್ಮ ಭಾರತ’ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಕುಮಾರಸ್ವಾಮಿ, “ಇದು ಮಕ್ಕಳಿಂದ, ಹಿರಿಯರವರೆಗೆ ಎಲ್ಲರೂ ನೋಡಬೇಕಾದ ಸಿನಿಮಾ. ದೇಶವನ್ನು ಹೇಗೆ ಪ್ರೀತಿಸಬೇಕು, ನಮ್ಮ ಜಬಾಬ್ದಾರಿ ಏನು ಅನ್ನೋದನ್ನ ಸಿನಿಮಾದಲ್ಲಿ ಹೇಳಿದ್ದೇವೆ. ಒಬ್ಬ ಹುಡುಗ, ಒಬ್ಬ ಸ್ವತಂತ್ರ ಯೋಧ ಮತ್ತು ಒಂದು ರಾಷ್ಟ್ರ ಧ್ವಜದ ಸುತ್ತ ಇಡೀ ಸಿನಿಮಾದ ಕಥೆ ನಡೆಯುತ್ತದೆ. ಒಂದಷ್ಟು ಆದರ್ಶ, ಮೌಲ್ಯ ಎಲ್ಲವನ್ನೂ ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ’ ಎಂದು ಚಿತ್ರದ ಕಥಾಹಂದರದ ವಿವರಣೆ ಕೊಡುತ್ತಾರೆ.
“ನಮ್ಮ ಭಾರತ’ ಚಿತ್ರದಲ್ಲಿ ವಾಗೀಶ್, ಮಾ. ಪ್ರಜ್ವಲ್, ಶ್ಯಾವಂದಪ್ಪ, ಅಮಲ, ತಿಮ್ಮ ಶೆಟ್ಟಿ, ಗೋಪಿನಾಥ್, ಕ್ರಿಶಾ ಪ್ರಕಾಶ್, ಅಂಬುಜಾಕ್ಷಿ ಬಾಯಿ ಎನ್. ಈಶ್ವರ ರಾವ್ ಮಾನೆ, ವಡ್ಡ ನಾಗರಾಜ್ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಮೈಸೂರು, ಪಿರಿಯಾಪಟ್ಟಣ, ಕೊಡಗು, ಧರ್ಮಸ್ಥಳ, ಉಡುಪಿ, ಸುಬ್ರಮಣ್ಯ ಮತ್ತಿತರ ಸ್ಥಳಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಸದ್ಯ “ನಮ್ಮ ಭಾರತ’ ಚಿತ್ರವನ್ನು ಇದೇ ಜ. 14ರಂದು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ
Kangaroo; ಥ್ರಿಲ್ಲರ್ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು
Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್ ಲಾಂಚ್
MUST WATCH
ಹೊಸ ಸೇರ್ಪಡೆ
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ