ದೇಗುಲಗಳಲ್ಲಿ ವೈಕುಂಠ ಏಕಾದಶಿ ಸಂಭ್ರಮ
Team Udayavani, Jan 14, 2022, 1:39 PM IST
ಬಳ್ಳಾರಿ: ವೈಕುಂಠ ಏಕಾದಶಿ ಹಿನ್ನೆಲೆ ನಗರ ಸೇರಿದಂತೆಜಿಲ್ಲೆಯ ಪ್ರಸಿದ್ಧ ವೆಂಕಟೇಶ್ವರ ದೇಗುಲ ಸೇರಿದಂತೆನಾನಾ ದೇಗುಲಗಳಲ್ಲಿ ಗುರುವಾರ ವಿಶೇಷ ಪೂಜೆ,ಅರ್ಚನೆ ಸೇರಿ ನಾನಾ ಪೂಜೆಗಳು ವಿಜೃಂಭಣೆಯಿಂದನಡೆದವು.ನಗರದ ಸತ್ಯನಾರಾಯಣ ಪೇಟೆ ವೆಂಕಟೇಶ್ವರದೇಗುಲ, ಪಟೇಲ್ನಗರ ಬಡಾವಣೆಯ ಲಕ್ಷಿ ¾àವೆಂಕಟೇಶ್ವರ ದೇಗುಲ, ಲಕ್ಷಿ ¾à ನರಸಿಂಹ ದೇಗುಲ,ಯಂತ್ರೋದ್ಧಾರಕ ಪ್ರಾಣದೇವರ ದೇಗುಲ, ಶನೈಶ್ಚರದೇವಾಲಯ, ರಾಘವೇಂದ್ರ ಸ್ವಾಮಿ ಶ್ರೀಮಠ,ಶ್ರೀಮದುತ್ತರಾ ಮಠದಲ್ಲಿ ವೈಕುಂಠ ಏಕಾದಶಿ ನಿಮಿತ್ತಗುರುವಾರ ವಿವಿಧ ಪೂಜೆಗಳು ವಿಜೃಂಭಣೆಯಿಂದನಡೆದವು.
ನಗರದ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿಬೆಳಗ್ಗೆ ವಿಶೇಷ ಪೂಜೆ, ಅಲಂಕಾರ, ಮಹಾ ನೈವೇದ್ಯ,ಮಹಾ ಮಂಗಳಾರತಿ ಸೇರಿದಂತೆ ನಾನಾ ಪೂಜೆಗಳುನೆರವೇರಿದವು. ದೇಗುಲದ ಪ್ರಧಾನ ಅರ್ಚಕವಾದಿರಾಜ್ ಆಚಾರ್ಯ ಅವರು ಪೂಜೆಗಳನ್ನುನೆರವೇರಿಸಿದರು.
ಈ ಸಂದರ್ಭದಲ್ಲಿ ದೇಗುಲದ ಟ್ರಸ್ಟಿಗಳಾದಎಂ.ವೆಂಕಟ ರಾಘವೇಂದ್ರ ಅವರು ಮಾತನಾಡಿ,ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಶ್ರೀ ವೆಂಕಟೇಶ್ವರದರ್ಶನಕ್ಕೆ ಪ್ರಸಕ್ತ ವರ್ಷ ಕೊರೊನಾ ಅಡ್ಡಿಯಾಗಿದೆ.ಪವಿತ್ರ ದಿನವಾದ ಇಂದು ಭಕ್ತರು ವೆಂಕಟೇಶ್ವರನದರ್ಶನ ಪಡೆಯಬೇಕು ಎನ್ನುವ ಅಪೇಕ್ಷೆ ಎಲ್ಲರಿಗೂಇರಲಿದೆ. ಆದರೆ ಪ್ರಸಕ್ತ ವರ್ಷ ಕೋವಿಡ್-19 ಹಿನ್ನೆಲೆಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು ಭಕ್ತರಿಗೆ ಹಾಗೂನಮಗೂ ನಾನಾ ರೀತಿ ತೊಂದರೆಯಾಗಿದೆ. ಎರಡೂಡೋಸ್ ಲಸಿಕೆ ಕಡ್ಡಾಯ, ಅದೂ ಸರ್ಟಿμಕೇಟ್ಹಾಜರುಪಡಿಸಬೇಕು.
ಐವತ್ತು ಜನರಿಗೆ ಮಾತ್ರ ಪ್ರವೇಶಎನ್ನುವುದು ಸೇರಿ ನಾನಾ ಷರತ್ತುಗಳನ್ನು ವಿ ಧಿಸಲಾಗಿದೆ.ಈ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ, ಅಲಂಕಾರಸೇರಿದಂತೆ ನಾನಾ ಪೂಜೆಗಳನ್ನು ನೆರವೇರಿಸಲಾಗಿದ್ದು,ಭಕ್ತರಿಗೆ ಹೊರಗಿನಿಂದಲೇ ದರ್ಶನಕ್ಕೆ ವ್ಯವಸ್ಥೆಮಾಡಲಾಗಿದೆ ಎಂದರು.ಭಕ್ತರಿಗೆ ಪ್ರಸಾದ: ನಗರದ ಪಟೇಲ್ ನಗರ ಬಡಾವಣೆಶ್ರೀ ಲಕ್ಷಿ ¾à ವೆಂಕಟೇಶ್ವರ ದೇಗುಲದಲ್ಲಿ ವೈಕುಂಠ ಏಕಾದಶಿನಿಮಿತ್ತ ಗುರುವಾರ ವಿವಿಧ ಪೂಜೆಗಳು ನೆರವೇರಿದವು.ದೇಗುಲದ ಅಧ್ಯಕ್ಷ ಸೋಮಪ್ಪ ಯಾದವ್ ಅವರುಭಕ್ತರಿಗೆ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿದೇಗುಲದ ಪ್ರಧಾನ ಅರ್ಚಕ ಶ್ರೀನಿವಾಸ್ ಆಚಾರ್,ಪಾಲಿಕೆ ಸದಸ್ಯರಾದ ಮುಲ್ಲಂಗಿ ನಂದೀಶ್, ವಿವೇಕ್ವಿಕ್ಕಿ, ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು