ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಪರತೆಯೇ ಮುಖ್ಯ : ಡಾ. ಅಶ್ವತ್ಥನಾರಾಯಣ
ಇಸ್ರೇಲ್ ರೀತಿ ನವೋದ್ಯಮ ಬೆಳೆಯಬೇಕು
Team Udayavani, Jan 14, 2022, 4:10 PM IST
ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ತಂದರೆ ಉಳಿದ ಕ್ಷೇತ್ರಗಳು ತಮ್ಮಿಂದ ತಾವೇ ಸರಿ ಹೋಗುತ್ತವಲ್ಲದೆ, ಇಡೀ ದೇಶ ಅಭಿವೃದ್ಧಿ ಹೊಂದುತ್ತದೆ. ಆದ್ದರಿಂದ ಶಿಕ್ಷಣ ಕ್ಷೇತ್ರವು ಸಂಪೂರ್ಣ ವೃತ್ತಿಪರವಾಗಬೇಕಾಗಿದ್ದು, ತಂತ್ರಜ್ಞಾನ ಮತ್ತು ಅನ್ವೇಷಣೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಬೆಂಗಳೂರು ಉತ್ತರ ವಲಯವು ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆ ಕುರಿತ ಸಂವಾದ ಮತ್ತು ಸರಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗಕ್ಕೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಶುಕ್ರವಾರ ಮಾತನಾಡಿದರು.
ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಅಂಗವಾಗಿ ನಾಲ್ಕು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳೇ ಉಪಗ್ರಹವನ್ನು ತಯಾರಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಮೂಲಕ ನವೋದ್ಯಮ ಮತ್ತು ನಾವೀನ್ಯತೆಗಳಿಗೆ ಒತ್ತು ಕೊಡುವ ಗುರಿ ಇದೆ. ಇಸ್ರೇಲ್ ಹೇಗೆ `ನವೋದ್ಯಮಗಳ ರಾಷ್ಟ್ರ’ವಾಗಿದೆಯೋ ಹಾಗೆ ನಾವು ಕೂಡ ಸಾಧನೆ ಮಾಡಬೇಕು ಎಂದು ಅವರು ಉತ್ತೇಜಿಸಿದರು.
ದೇಶದಲ್ಲಿ ಮೂರೂವರೆ ದಶಕಗಳ ನಂತರ ಹೊಸ ಶಿಕ್ಷಣ ನೀತಿ ಜಾರಿಯಾಗಿದೆ. ಕಲೆ, ವಿಜ್ಞಾನ ಮತ್ತು ವಾಣಿಜ್ಯ ಶಿಕ್ಷಣ ಕ್ರಮಗಳೇನೇ ಇರಲಿ, ಗುಣಮಟ್ಟದ ಬೋಧನೆ ಮುಖ್ಯವಾಗಿದೆ. ಇದರ ಜತೆಗೆ ಗಣಿತದ ಬೋಧನೆ ಕೂಡ ಅತ್ಯುತ್ತಮವಾಗಿ ಇರಬೇಕು. ಅದರಲ್ಲೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವೇ ಮಾದರಿಯಾಗಿರಬೇಕು. ಭಾರತದಲ್ಲಿ ಅತ್ಯುತ್ತಮ ಶಿಕ್ಷಣ ಪಡೆದುಕೊಂಡವರೇ ಇವತ್ತು ಇಡೀ ಅಮೆರಿಕದ ಬೆನ್ನೆಲುಬಾಗಿದ್ದಾರೆ ಎಂದು ಅವರು ಹೇಳಿದರು.
ಮುಂದುವರಿದ ದೇಶಗಳಲ್ಲಿ ಅಂಕಗಳಿಗೆ ಯಾವ ಬೆಲೆಯೂ ಇಲ್ಲ. ಅಲ್ಲಿ ಒಂದು ಮಗು ಶಾಲೆಗೆ ಬಂದ ಕೂಡಲೇ ಅದನ್ನು ದೇಶದ ಆಸ್ತಿ ಎಂದು ಪರಿಗಣಿಸುತ್ತಾರೆ. ನಮ್ಮಲ್ಲೂ ಇಂತಹ ಪ್ರಜ್ಞೆ ಬರಬೇಕಾಗಿದೆ. ದೇಶವನ್ನು ಕಟ್ಟುವುದೆಂದರೆ ಶೇ.95ರಷ್ಟು ಗಮನ ನಮ್ಮ ಮಕ್ಕಳ ಪರಿಪೂರ್ಣ ವ್ಯಕ್ತಿತ್ವದ ಕಡೆಗೆ ಇರಬೇಕು. ಎನ್ಇಪಿ ಇದನ್ನೆಲ್ಲ ಸಾಕಾರಗೊಳಿಸಲಿದೆ ಎಂದು ಅವರು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್