ವಿಳಂಬ ಧೋರಣೆ; ಸಿಡಿಪಿಒಗಳಿಗೆ ನೋಟಿಸ್‌

ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರಿಗೆ ಆಹಾರ ಸಾಮಗ್ರಿಗಳ ವಿತರಣೆ ಬಗ್ಗೆ ಪರಿಶೀಲನೆ ನಡೆಸಬೇಕು

Team Udayavani, Jan 14, 2022, 3:51 PM IST

ವಿಳಂಬ ಧೋರಣೆ; ಸಿಡಿಪಿಒಗಳಿಗೆ ನೋಟಿಸ್‌

ಬಾಗಲಕೋಟೆ: ಜಿಲ್ಲೆಯಲ್ಲಿ ನಡೆದ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಲ್ಲಿ ವಿಳಂಬ ದೋರಣೆ ಅನುಸರಿಸಿದ 5 ಜನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 41 ಬಾಲ್ಯವಿವಾವ ನಡೆದ ಪೈಕಿ 32 ಮಾತ್ರ ಪ್ರಕರಣ ದಾಖಲಿಸಲಾಗಿತ್ತು. ಬಾಕಿ ಉಳಿದ 9 ಬಾಲ್ಯವಿವಾಹ ಬಗ್ಗೆ ಎಫ್‌ ಐಆರ್‌ ದಾಖಲಿಸಲು ತಿಳಿಸಿದಾಗ್ಯೂ ಸಹ ವಿಳಂಬ ದೋರಣೆ ತೋರಿದ 5 ಜನ ಸಿಡಿಪಿಒಗಳಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ ಅವರಿಗೆ ಸೂಚಿಸಿದರು.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ 2164 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ ಸ್ವಂತ ಕಟ್ಟಡ, ಬಾಡಿಗೆ ಕಟ್ಟಡ, ಸಮುದಾಯ, ಪಂಚಾಯತ, ಶಾಲಾ ಕಟ್ಟಡ, ಶಾಲಾ ಕಟ್ಟಡ ಸೇರಿದಂತೆ ಗ್ರಾಮೀಣ ಹಾಗೂ ನಗರಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನೀಡಲು ಆಯಾ ತಾಲೂಕಿನ ಸಿಡಿಪಿಒಗಳಿಗೆ ಸೂಚಿಸಿದರು.

ಅಲ್ಲದೇ ಅಂಗನವಾಡಿಗಳಲ್ಲಿ ಆಗಾಗ್ಗೆ ಭೇಟಿ ನೀಡಿ ಮೂಲ ಸೌಲಭ್ಯಗಳ ಬಗ್ಗೆ ಪರಿಶೀಲಿಸುವಂತೆ ತಾಪಂ ಇಒ ಹಾಗೂ ಸಿಡಿಪಿಒಗಳಿಗೆ ಸೂಚಿಸಿದರು. ಅಪೌಷ್ಟಿಕ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಮಕ್ಕಳಿಗೆ ನೀಡುತ್ತಿರುವ ಆಹಾರದ ಬಗ್ಗೆ ಪರೀಕ್ಷಿಸಬೇಕು. ಅನಿರೀಕ್ಷಿತವಾಗಿ ಎಂಎಸ್‌ಪಿಟಿಸಿಗಳಿಗೆ ಭೇಟಿ ನೀಡಿ ಗುಣಮಟ್ಟವನ್ನು ಪರಿಶೀಲಿಸುವ ಕೆಲಸವಾಗಬೇಕು.

ಸಾಂತ್ವನ ಕೇಂದ್ರದಲ್ಲಿ ನೆರವು ಕೋರಿ ಬರುವ ಸಂತ್ರಸ್ತ ಮಹಿಳೆಯರಿಗೆ ಸೂಕ್ತ ಸಲಹೆ ನೀಡಿ ಕಾನೂನಿನ ನೆರವು ಒದಗಿಸುವ ಕೆಲಸವಾಗಬೇಕು. ಅವರನ್ನು ಉದ್ಯೋಗಸ್ಥರನ್ನಾಗಿ ಮಾಡಲು ಕ್ರಮವಹಿಸಲು ತಿಳಿಸಿದಾಗ ಈಗಾಗಲೇ 8 ಜನ ಮಹಿಳೆಯರಿಗೆ ವಿವಿಧ ಉದ್ಯೋಗದಲ್ಲಿ ತೊಡಗಿರುವುದಾಗಿ ಬಾದಾಮಿ, ಮುಧೋಳ ತಾಲೂಕಿನ ಸಾಂತ್ವನ ಕೇಂದ್ರದ ಪ್ರತಿನಿಧಿಗಳು ಸಭೆಗೆ ತಿಳಿಸಿದರು.

ಜಿಪಂ ಸಿಇಒ ಟಿ.ಭೂಬಾಲನ್‌ ಮಾತನಾಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪೂರಕ ಪೌಷ್ಟಿಕ ಆಹಾರ ವಿತರಣೆ, ಮೂಲ ಸೌಕರ್ಯ, ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರಿಗೆ ಆಹಾರ ಸಾಮಗ್ರಿಗಳ ವಿತರಣೆ ಬಗ್ಗೆ ಪರಿಶೀಲನೆ ನಡೆಸಬೇಕು. ಅನುಷ್ಠಾನದಲ್ಲಿ ಲೋಪವಾದಲ್ಲಿ ಶಿಸ್ತು ಕ್ರಮಜರುಗಿಸಲು ಮುಂದಾಗಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ಬಣಕಾರ ಮಾತನಾಡಿ ಜಿಲ್ಲೆಯಲ್ಲಿ ಒಟ್ಟು 2221 ಅಂಗನವಾಡಿ ಕೇಂದ್ರಗಳಿ ಕಾರ್ಯನಿರ್ವಹಿಸುತ್ತಿವೆ. ಮಾತೃಪೂರ್ಣ ಯೋಜನೆಯಡಿ 21208 ಗರ್ಭಿಣಿಯರು, 20408 ಬಾಣಂತಿಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಹೆಣ್ಣು ಮಕ್ಕಳಿ ಲಿಂಗ ಅನುಪಾತವು ಸಮತೋಲನಕ್ಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸದ್ಯ ಎನ್‌ಎಫ್‌
ಎಚ್‌ಎಸ್‌-5ರ ಪ್ರಕಾರ ಜಿಲ್ಲೆಯಲ್ಲಿ ಲಿಂಗಾನುಪಾತ 1007 ಇರುವುದಾಗಿ ತಿಳಿಸಿದರು.

ನವನಗರದ ಸೆಕ್ಟರ್‌ ನಂ.4ರಲ್ಲಿ ಸಖೀ ಕೇಂದ್ರದ ಕಟ್ಟಡ ನಿರ್ಮಾಣವಾಗಿದ್ದು, ವಿದ್ಯುತ್‌ ವೈರಿಂಗ್ಗ ಕೆಲಸ ಮಾತ್ರ ಬಾಕಿ ಇರುವುದಾಗಿ ಸಭೆಗೆ ತಿಳಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ವಕೀಲರ ಸಂಘದ ಅಧ್ಯಕ್ಷ ವಿ.ಬಿ. ಚೌಕಿಮಠ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್‌ ಕುಮಾರ ಬಾವಿದೊಡ್ಡಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.