ಆಸ್ಪತ್ರೆ ಆವರಣದಲ್ಲಿ ಮಕ್ಕಳಿಗೆ ಸೀರೆ ತೊಟ್ಟಿಲು


Team Udayavani, Jan 14, 2022, 5:36 PM IST

22saree

ಸಿಂಧನೂರು: ಸರಕಾರಿ ಆಸ್ಪತ್ರೆಯಲ್ಲಿ ಮಹಿಳೆಯರಿಗಾಗಿ ನಡೆಸುವ ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ ಶಿಬಿರಕ್ಕೆ ಬಂದ ವೇಳೆ ಹಸುಗೂಸುಗಳಿಗೆ ಆಸ್ಪತ್ರೆ ಆವರಣದ ಗಿಡಮರಗಳೇ ಆಸರೆಯಾಗುತ್ತಿವೆ.

ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಂದಿರನ್ನು ಶಸ್ತ್ರ ಚಿಕಿತ್ಸೆಗೆ ಕರೆದೊಯ್ದ ಬಳಿಕ ಜೊತೆಗೆ ಬಂದ ಸಂಬಂಧಿಕರು, ಪುಟ್ಟ ಕಂದಮ್ಮಗಳಿಗೆ ಸೂಕ್ತ ವ್ಯವಸ್ಥೆ ಇಲ್ಲವಾಗಿದೆ.

ಆಸ್ಪತ್ರೆಯೊಳಗೆ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಗೆ ಸಂಬಂಧಿಸಿ ಬೆಡ್‌ ಕೂಡ ನೀಡುತ್ತಿಲ್ಲ. ಸಹಜವಾಗಿಯೇ ಮಹಿಳೆಯರನ್ನು ಆಪರೇಷನ್‌ ಥೇಟರ್‌ಗೆ ಕರೆದುಕೊಂಡ ಬಳಿಕ, ಹಸುಗೂಸು ಸಮೇತ ಪಾಲಕರು ಆಸ್ಪತ್ರೆ ಆವರಣದಲ್ಲಿ ದಿನವೆಲ್ಲ ಕಾಯುವಂತಾಗಿದೆ.

ಸೀರೆಯ ತೊಟ್ಟಿಲು

ಹೆರಿಗೆಯಾ ನಾಲ್ಕೈದು ತಿಂಗಳ ಅವಧಿಯಲ್ಲಿ ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತದೆ. ಪುಟ್ಟ ಕೂಸಿನೊಂದಿಗೆ ತಾಯಂದಿರನ್ನು ಕರೆದುಕೊಂಡು ಬಂದ ಪಾಲಕರು, ಹಸುಗೂಸಿನೊಂದಿಗೆ ಕುಳಿತುಕೊಳ್ಳಲು ಆಸ್ಪತ್ರೆಯೊಳಗೆ ಜಾಗ ಇಲ್ಲದಂತಾಗಿದೆ. ಹೀಗಾಗಿ, ಪುಟ್ಟ ಕಂದಮ್ಮಗಳನ್ನು ಕರೆದುಕೊಂಡು ಹೊರಗಡೆ ಬಂದು ಆಸ್ಪತ್ರೆ ಆವರಣದ ಗಿಡಗಳಿಗೆ ಸೀರೆಯಿಂದ ತೊಟ್ಟಿಲು ಕಟ್ಟಲಾಗುತ್ತದೆ. ಮಕ್ಕಳನ್ನು ಹಾಕಿ, ಅದರಲ್ಲಿ ತೂಗುತ್ತಾ ದಿನವೆಲ್ಲ ಜಾಗರಣೆ ಮಾಡಬೇಕಿದೆ.

ಸೌಲಭ್ಯದತ್ತ ಗಮನವಿಲ್ಲ

ಸರಕಾರಿ ಆಸ್ಪತ್ರೆಯಲ್ಲಿ ಪ್ರತಿ ವಾರಕ್ಕೊಂದು ಈ ಶಿಬಿರ ನಡೆಸಲಾಗುತ್ತದೆ. ಡಾ| ನಾಗರಾಜ್‌ ಕಾಟ್ವಾ ನೇತೃತ್ವದ ತಂಡ ಉತ್ತಮವಾಗಿ ಸ್ಪಂದಿಸುತ್ತಿದೆ. ಸೌಲಭ್ಯದ ವಿಷಯದಲ್ಲಿ ಆಡಳಿತಾತ್ಮಕ ಸಮಸ್ಯೆ ಕಾಣಿಸಿದೆ. ಆರಂಭದಲ್ಲಿ 100ರಿಂದ 150 ಮಹಿಳೆಯರಿಗೆ ಒಂದೇ ಶಿಬಿರದಲ್ಲಿ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗುತ್ತಿತ್ತು. ಈ ಕ್ರಮದಿಂದ ಸುರಕ್ಷತೆ ಕೊರತೆ, ಮಹಿಳೆಯರಿಗೆ ತೊಂದರೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರಿಂಕೋರ್ಟ್‌ ಈ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಿತ್ತು. ಆ ಬಳಿಕ ವಾರಕ್ಕೊಮ್ಮೆ ನಡೆಯುವ ಶಿಬಿರದಲ್ಲಿ 30 ಮಹಿಳೆಯರಿಗೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ. ಸಂಖ್ಯೆ ಕಡಿಮೆ ಮಾಡಿದ ಮೇಲೂ ಸೌಲಭ್ಯ ಕಲ್ಪಿಸುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಳಗಡೆ ಹೋದರೆ ಮಗುವಿಗೆ ಗಾಳಿಯಿಲ್ಲ. ಅತ್ತಾಗ ಸಂತೈಸುವುದು ಕಷ್ಟವಾಗಿ ಗಿಡಕ್ಕೆ ಜೋಕಾಲಿ ಕಟ್ಟಲಾಗಿದೆ. ಆಸ್ಪತ್ರೆ ಒಳಗೆ ನಿಲ್ಲಲಿಕ್ಕೂ ಜಾಗವಿಲ್ಲ. ಇನ್ನೆಲ್ಲಿ ಕುಳಿತುಕೊಳ್ಳುವುದು. -ಹೆಸರು ಹೇಳಿಚ್ಛಿಸದ ಪಾಲಕರು, ಸಿಂಧನೂರು

ಟಾಪ್ ನ್ಯೂಸ್

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.